ಜಗನ್ ನಿರಶನಕ್ಕೆ ಪೊಲೀಸರ ಬ್ರೇಕ್
ಹೈದರಾಬಾದ್, ಅ.10 : ಅಖಂಡ ಆಂಧ್ರಪ್ರದೇಶಕ್ಕಾಗಿ ಆಗ್ರಹಿಸಿ ವೈಎಸ್ಆರ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ನಡೆಸುತ್ತಿದ್ದ ಉಪವಾಸಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರತ್ಯೇಕ ರಾಜ್ಯ ರಚನೆ ವಿರೋಧಿಸಿ ಐದು ದಿನಗಳಿಂದ ವೈಎಸ್ಸಾರ್ ಕಾಂಗ್ರೆಸ್ ಸಂಸದ ಜಗನ್ ಮೋಹನ್ ರೆಡ್ಡಿ ಜ್ಯುಬಿಲಿ ಹಿಲ್ಸ್ನಲ್ಲಿ ಉಪವಾಸ ಕುಳಿತಿದ್ದರು. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಉಪವಾಸ ಸ್ಥಳಕ್ಕೆ ಪೊಲೀಸರು ಆಗಮಿಸಿದರು.

ಸ್ಥಳದಲ್ಲಿ ಜಗನ್ ಬೆಂಬಲಿಗರು ನಿರ್ಮಿಸಿದ್ದ ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಿ ವೈಎಸ್ಸಾರ್ ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ತೆಗೆದುಕೊಂಡರು. ನಂತರ ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಲಾಯಿತು.
ನಾಯ್ಡು ನಿರಾಳ : ನವದೆಹಲಿಯ ಆಂಧ್ರಭವನದಲ್ಲಿ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರು ಅನುಮತಿಯಿಲ್ಲದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ನಿರಶನದ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಗೃಹ ಸಚಿವ ಶಿಂದೆ ಹೇಳಿದ್ದಾರೆ. ಇದರಿಂದ ಅವರು ಉಪವಾಸ ಮುಂದುವರೆಸಬಹುದಾಗಿದೆ.
ಅನುಮತಿಯಿಲ್ಲದೆ ನಿರಶನ ನಡೆಸುತ್ತಿರುವ ಚಂದ್ರಬಾಬು ಅವರನ್ನು ಸ್ಥಳಾಂತರಿಸಲು ಕೇಂದ್ರ ಗೃಹ ಸಚಿವಾಲಯದ ನೆರವು ಕೋರಿ ಆಂಧ್ರ ಸರ್ಕಾರ ಪತ್ರಬರೆದಿತ್ತು. ಆದರೆ, ಈ ವಿಚಾರದಲ್ಲಿ ತಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
6 ಸಾವಿರ ಕೋಟಿ ನಷ್ಟ : ವಿದ್ಯುತ್ ವಿತರಣೆ ಹಾಗೂ ನಿರ್ಮಾಣ ಕಂಪನಿಗಳ ನೌಕರರ ಮುಷ್ಕರದಿಂದಾಗಿ ಆಂಧ್ರಪ್ರದೇಶ ರಾಜ್ಯದ ಬಹುತೇಕ ಕೈಗಾರಿಕೆಗಳು ಮತ್ತು ಐಟಿ ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ತಜ್ಞರ ಪ್ರಕಾರ, ಕಳೆದ 3 ದಿನಗಳಲ್ಲಿ ಒಟ್ಟು 6 ಸಾವಿರ ಕೋಟಿ ನಷ್ಟ ಸಂಭವಿಸಿದೆ.
ಶುಕ್ರವಾರ ಸಭೆ : ಆಂಧ್ರವಿಭಜನೆಗೆ ಸಂಬಂಧಿಸಿ ಚರ್ಚೆ ನಡೆಸಲು ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ನೇತೃತ್ವದ ಕೇಂದ್ರ ಸಚಿವರ ಸಮಿತಿ ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಲಿದೆ. ಸಭೆಯಲ್ಲಿ ಹೊಸ ರಾಜ್ಯದ ಗಡಿ ಹಾಗೂ ಸ್ವರೂಪದ ಕುರಿತು ಚರ್ಚೆ ನಡೆಯಲಿದೆ.
ಮರುಪರಿಶೀಲನೆ ಇಲ್ಲ : ತೆಲಂಗಾಣ ರಚನೆಯನ್ನು ಮರುಪರಿಶೀಲಿಸುವ ಪ್ರಶ್ನೆಯೇ ಇಲ್ಲ. ಸರ್ಕಾರ ಈಗ ಏನು ನಿರ್ಧಾರ ತೆಗೆದುಕೊಂಡಿದೆ ಅದೇ ಅಂತಿಮ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳ ಜತೆಗೆ ವಿಸ್ತೃತ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೂ ಮೊದಲು ಪ್ರತ್ಯೇಕ ರಾಜ್ಯ ರಚನೆ ಮಾಡಲು ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications