ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರಕ್ಕೆ ವಿಶೇಷ ಸ್ಥಾನಮಾನ, ಏಪ್ರಿಲ್ 5ರ ಗಡುವು ನೀಡಿದ ಜಗನ್

By Sachhidananda Acharya
|
Google Oneindia Kannada News

ಹೈದರಾಬಾದ್, ಫೆಬ್ರವರಿ 13: ಬಜೆಟ್ ನಲ್ಲಿ ಆಂಧ್ರ ಪ್ರದೇಶಕ್ಕೆ ನಡೆದಿದೆ ಎನ್ನಲಾದ ಅನ್ಯಾಯವನ್ನು ಪ್ರತಿಭಟಿಸಿ ನಡೆಯುತ್ತಿರುವ ಹೋರಾಟ ನಿರ್ಣಾಯಕ ಹಂತ ತಲುಪಿದೆ.

ಏಪ್ರಿಲ್ 5ರ ಮೊದಲು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದಲ್ಲಿ ವೈಎಸ್ಆರ್ ಕಾಂಗ್ರೆಸ್ ನ ಸಂಸದರು ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಗುಡುಗಿದ್ದಾರೆ.

ಆಂಧ್ರ ಪ್ರದೇಶವನ್ನು ಲೋಕಸಭೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ನ 9 ಜನ ಸಂಸದರು ಪ್ರತಿನಿಧಿಸುತ್ತಿದ್ದಾರೆ. "ನಮಗೆ ಏಪ್ರಿಲ್ 5ರ ಮೊದಲು ವಿಶೇಷ ಸ್ಥಾನಮಾನ ನೀಡದಿದ್ದಲ್ಲಿ, ಏಪ್ರಿಲ್ 6ರಂದು ನಮ್ಮ ಸಂಸದರು ರಾಜೀನಾಮೆ ನೀಡಲಿದ್ದಾರೆ," ಎಂದು ನೆಲ್ಲೋರ್ ನಲ್ಲಿ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಏಪ್ರಿಲ್ 5ರವರೆಗೆ ಲೋಕಸಭೆಯಲ್ಲಿ ನಮ್ಮ ಸಂಸದರು ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

YSR Congress MPs will resign by 5th April, if special status is not given to Andhra: Jaganmohan Reddy

ಏಪ್ರಿಲ್ 6ರಂದು ಬಜೆಟ್ ಅಧಿವೇಶನ ಕೊನೆಯಾಗಲಿದೆ. ಅಂದೇ ರಾಜೀನಾಮೆ ನೀಡುವ ಬೆದರಿಕೆಯನ್ನು ರೆಡ್ಡಿ ಹಾಕಿದ್ದಾರೆ.

English summary
"If we are not given special status by 5th of April, our MPs will resign by April 6, 2018," said YSR Congress Party Chief Jaganmohan Reddy in Nellore, Andhra Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X