ಸೇರಿಗೆ ಸವಾಸೇರ್ ಅಲ್ಲ, ಆಂದ್ರಪ್ರದೇಶದಲ್ಲಿ ಕೇಸ್ ಗೆ ಪ್ರತಿ ಕೇಸ್!
ಹೈದ್ರಾಬಾದ್, ನವೆಂಬರ್.29: ಏಟಿಗೆ ಎದಿರೇಟು ರಾಜಕಾರಣದಲ್ಲಿ ಕಾಮನ್. ಹೇಳಿಕೆಗಳಿಗೆ ಪ್ರತಿಹೇಳಿಕೆ, ಆರೋಪಕ್ಕೆ ಪ್ರತ್ಯಾರೋಪ ಎಲ್ಲವೂ ಇದ್ದೇ ಇರುತ್ತದೆ. ಆದರೆ, ಆಂದ್ರಪ್ರದೇಶದಲ್ಲಿನ ರಾಜಕಾರಣ ಎಲ್ಲಕ್ಕಿಂತಲೂ ಡಿಫರೆಂಟ್.
ಹೌದು, ಆಂದ್ರಪ್ರದೇಶದಲ್ಲಿ ಸೇರಿಗೆ ಸವಾಸೇರ್ ಅನ್ನುವ ರೀತಿಯಲ್ಲಿ ರಾಜಕಾರಣ ನಡೆಯುತ್ತಿದೆ. ಇಂದು ವೈಎಸ್ ಆರ್ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ತೆಲುಗು ದೇಶಂ ಪಾರ್ಟಿ ಪೊಲೀಸರಿಗೆ ದೂರು ನೀಡಿತ್ತು.
ಇದಾಗಿ ಕೆಲಗಂಟೆಗಳಲ್ಲೇ ತೆಲುಗು ದೇಶಂ ಪಾರ್ಟಿ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ವಿರುದ್ಧ ವೈಎಸ್ ಆರ್ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ಈಗ ಆಂದ್ರಪ್ರದೇಶದಲ್ಲಿ ಏನಿದ್ರೂ ಕೇಸ್ ಗೆ ಪ್ರತಿಕೇಸ್ ರಾಜಕಾಣ ನಡೆಯುತ್ತಿದ್ದಂತೆ ಕಾಣುತ್ತಿದೆ.
ಟಿಡಿಪಿ ಕೇಸ್ ದಾಖಲಿಸಿದ್ದು ಯಾಕೆ?
ಅಸಲಿಗೆ ಇದು ನವೆಂಬರ್.28ರಂದು ಅಮರಾವತಿಯಲ್ಲಿ ನಡೆದಿರುವ ಘಟನೆ. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ದುವಿದ್ದ ಬಸ್ ಮೇಲೆಯೇ ಕಿಡಿಗೇಡಿಗಳು ಚಪ್ಪಲಿ ತೂರಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರೇ ಚಂದ್ರಬಾಬು ನಾಯ್ದು ಇರುವ ಬಸ್ ಮೇಲೆ ಚಪ್ಪಲಿ ತೂರಿರುವ ಆರೋಪ ಇದೀಗ ಕೇಳಿ ಬಂದಿದೆ. ವೈಎಸ್ಆರ್ ಸಿಪಿ ಕಾರ್ಯಕರ್ತರ ವಿರುದ್ಧ ತೆಲುಗು ದೇಶಂ ಪಾರ್ಟಿ ದೂರು ದಾಖಲಿಸಿದೆ.

ವೈಎಸ್ಆರ್ ಕಾಂಗ್ರೆಸ್ ದೂರು ಕೊಟ್ಟಿದ್ದೇಕೆ?
ಟಿಡಿಪಿ ಕೇಸ್ ದಾಖಲಿಸಿ ಕೆಲವು ಗಂಟೆಗಳಲ್ಲೇ ವೈಎಸ್ಆರ್ ಕಾಂಗ್ರೆಸ್ ಕೂಡಾ ಟಿಡಿಪಿ ವಿರುದ್ಧ ತಳ್ಳೂರು ಉಪ ವಿಭಾಗ ಡಿಸಿಪಿಗೆ ದೂರು ಸಲ್ಲಿಸಿದೆ. ಅದಕ್ಕೆ ಕಾರಣವಿಷ್ಟೇ. ಅಮರಾವತಿಯ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರವಾಸ ನಡೆಸಿ, ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಈ ವೇಳೆ ಅತ್ಯಾಧುನಿಕ ಡ್ರೋನ್ ಕ್ಯಾಮರಾ ಮೂಲಕ ಶೂಟಿಂಗ್ ಮಾಡಿಸಿದ್ದಾರೆ ಎಂಬುದು ವೈಎಸ್ ಆರ್ ಕಾಂಗ್ರೆಸ್ ಆರೋಪವಾಗಿದೆ.
ವೆಲಗಪುಡಿ, ಮಂದಡಂ ಗ್ರಾಮದ ಸುತ್ತಮುತ್ತಲಿನಲ್ಲಿ ಪ್ರದೇಶ ಸರ್ಕಾರದ ಕಚೇರಿ ಹಾಗೂ ಕಾರ್ಯದರ್ಶಿಗಳಿಗೆ ಸಂಬಂಧಿಸಿದ್ದು ಅತ್ಯಂತ್ಯ ಸೂಕ್ಷ್ಮವಾಗಿದೆ. ಸರ್ಕಾರದ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಪೂರ್ವಾನುಮತಿಯಿಲ್ಲದೇ ಡ್ರೋನ್ ಕ್ಯಾಮರಾಗಳನ್ನು ಬಳಸಿ ಶೂಟಿಂಗ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಟಿಡಿಪಿ ವಿರುದ್ಧ ಕ್ರಮ ಜರುಗಿಸುವಂತೆ ವೈಎಸ್ಆರ್ ಕಾಂಗ್ರೆಸ್ ಪೊಲೀಸರಿಗೆ ದೂರಿನಲ್ಲಿ ಮನವಿ ಮಾಡಿಕೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications