Cyber Fraud: 1,000 ಸಾವಿರ ಕೋಟಿ ಸೈಬರ್ ವಂಚನೆ: ಫೀಲ್ಡ್ಗೆ ಇಳಿದ ಇಡಿ, ಹೇಗಿದೆ ಕಾರ್ಯಾಚರಣೆ ?
ದೇಶದಾದ್ಯಂತ ಸೈಬರ್ ಫ್ರಾಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತಮಿಳುನಾಡಿನಲ್ಲೂ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ತಮಿಳುನಾಡಿನಲ್ಲಿ ಬರೋಬ್ಬರಿ 1,000 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಸೈಬರ್ ವಂಚನೆ ಪ್ರಕರಣಗಳು ನಡೆದಿದ್ದು. ಜಾರಿ ನಿರ್ದೇಶನಾಲಯವು ತನಿಖೆಗೆ ಮುಂದಾಗಿದೆ. ದಕ್ಷಿಣ ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಫ್ರಾಡ್ ಹೆಚ್ಚಾಗುತ್ತಿದೆ.
ದಕ್ಷಿಣ ಭಾರತದಲ್ಲಿ ಸೈಬರ್ ಫ್ರಾಡ್ ಹೆಚ್ಚಾಗುವುದಕ್ಕೆ ಉತ್ತರ ಭಾರತದ ಕೆಲವು ಸೈಬರ್ ಫ್ರಾಡ್ಗಳು ಮುಖ್ಯ ಕಾರಣ. ಹೀಗಾಗಿ, ತಮಿಳುನಾಡಿನಲ್ಲಿ ನಡೆಯುತ್ತಿರುವ ಬೃಹತ್ ಮೊತ್ತದ ಸೈಬರ್ ಫ್ರಾಡ್ ವಂಚನೆ ಭಾರೀ ಚರ್ಚೆಗೆ ಕಾರಣವಾಗಿದೆ. ಇಡಿ ಅಧಿಕಾರಿಗಳು ಗುರುವಾರ ಪಶ್ಚಿಮ ಬಂಗಾಳದ ಪ್ರಮುಖ ಎಂಟು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಹೌದು ತಮಿಳುನಾಡಿನಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಾಗ್ತಿದೆ. ತಮಿಳುನಾಡಿನಲ್ಲಿ ಮಾತ್ರವಲ್ಲ ಕರ್ನಾಟಕ ಹಾಗೂ ಕೇರಳದಲ್ಲೂ ಹೆಚ್ಚಾಗಿದೆ. ಕೇರಳದ ಸೈಬರ್ ಪೊಲೀಸರಿಗೆ ಸೈಬರ್ ವಂಚಕ ಕರೆ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸೈಬರ್ ಪೊಲೀಸರಿಗೆ ಕಾಲ್ ಮಾಡಿದ್ದ ಸೈಬರ್ ವಂಚಕ ಡಿಜಿಟಲ್ ಅರೆಸ್ಟ್ ಮಾಡುವುದಕ್ಕೆ ಮುಂದಾಗಿದ್ದ ಇದಕ್ಕೆ ಕೇರಳ ಸೈಬರ್ ಪೊಲೀಸರು ಬುದ್ಧಿ ಕಲಿಸಿದ್ದರು.
ಇದೀಗ ತಮಿಳುನಾಡಿನಲ್ಲಿ ಸೈಬರ್ ವಂಚನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾ ಪಾರ್ಕ್ ಸ್ಟ್ರೀಟ್, ಸಾಲ್ಟ್ ಲೇಕ್ ಮತ್ತು ಬಾಗುವಿಹಾಟಿ ಸೇರಿದಂತೆ ಐದು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆದಿದೆ. ಅಲ್ಲದೆ ಕೋಲ್ಕತ್ತಾದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಒಬ್ಬ ಸೈಬರ್ ಫ್ರಾಡ್ನ ಬಂಧನ: ಇನ್ನು ತಮಿಳುನಾಡಿನಲ್ಲಿ 1,000 ಸಾವಿರ ಕೋಟಿಯ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಾಲ್ಟ್ ಲೇಕ್ ಪ್ರದೇಶದಲ್ಲಿ ದಾಳಿ ನಡೆಸುವಾಗ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಇಲ್ಲಿನ ಬಾಗುವಿಹಾಟಿಯಲ್ಲಿಯೂ ಕಾರ್ಯಾಚರಣೆ ಮುಂದುವರಿದಿದೆ. ಭಾರತದ ಈಶಾನ್ಯ ಭಾಗದ ಕೆಲವು ಭಾಗಗಳಲ್ಲಿ ಸೈಬರ್ ವಂಚಕರು ನೆಲೆಸಿರುವ ಬಗ್ಗೆ ಮಾಹಿತಿ ಇದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿದಿನ 60 ಕೋಟಿ ನಷ್ಟ: ಭಾರತದಲ್ಲಿ ಪ್ರತಿದಿನ ಸೈಬರ್ ಫ್ರಾಡ್ ನಡೆಯುತ್ತಿದೆ. ಈ ರೀತಿ ನಡೆಯುವ ಸೈಬರ್ ಫ್ರಾಡ್ನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 60 ಕೋಟಿ ರೂಪಾಯಿ ವಂಚನೆ ನಡೆಯುತ್ತಿದೆ. ಈ ರೀತಿಯ ಸೈಬರ್ ವಂಚನೆ ಕೇವಲ ವಾಟ್ಸಪ್, ಇನ್ಸಟಾಗ್ರಾಮ್ ಹಾಗೂ ಟೆಲಿಗ್ರಾಮ್ ಸೇರಿದಂತೆ ಸೋಷಿಯಲ್ ಮೀಡಿಯಾಗಳ ಮೂಲಕವೇ ನಡೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಲಿಂಕ್ಸ್ಗಳ ಮೂಲಕ ಸೈಬರ್ ಫ್ರಾಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೊಸ ವರ್ಷದ ಸಂದರ್ಭದಲ್ಲೂ ಹೊಸ ವರ್ಷದ ಶುಭಾಶಯದ ನೆಪದಲ್ಲಿ ಸೈಬರ್ ಫ್ರಾಡ್ ಪ್ರಕರಣಗಳು ಹೆಚ್ಚಾಗಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications