Gold: ದೇಶದಲ್ಲೇ ಇದೇ ಮೊದಲು.. ಗಗನಸಖಿಯಿಂದಲೇ 1 ಕೆ.ಜಿ. ಅಕ್ರಮ ಚಿನ್ನ ಸಾಗಾಟ.!-ಮುಂದೇನಾಯ್ತು?
Gold: ಇತ್ತೀಚಿನ ದಿನಗಳಲ್ಲಿ ಏರ್ಪೋರ್ಟ್ಗಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡಿ ತಗ್ಲಾಕಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಆದರೆ ಇದೀಗ ಗಗನಸಖಿಯೇ ಚಿನ್ನ ಸಾಗಾಟ ಮಾಡಿ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ. ಅಷ್ಟಕ್ಕೂ ಈಕೆ ಯಾವುದೇ ದಾಖಲೆಯಿಲ್ಲದೆ ಅಕ್ರಮವಾಗಿ ಎಷ್ಟು ಕೆ.ಜೆ. ಚಿನ್ನ ಸಾಗಾಟ ಮಾಡುತ್ತಿದ್ದಳು ಹಾಗೂ ಇವರ ಸಂಪೂರ್ಣ ಹಿನ್ನೆಲೆ ಏನು ಎಂದು ಇಲ್ಲಿ ತಿಳಿಯಿರಿ.
Meet Surbhi Khatoon from Kolkata who is an Air Hostess with Air India Express and who get arrested at Kannur International Airport after 1 Kg of Gold was found concealed inside her rectum. She confessed that she smuggled gold from Muscat in similar way earlier also. pic.twitter.com/KiNJoo3TyJ
— NCMIndia Council For Men Affairs (@NCMIndiaa) May 31, 2024
ಸಾಮಾನ್ಯವಾಗಿ ಸಾಮಾನ್ಯರು ಸೇರಿದಂತೆ ಉದ್ಯಮಿಗಳು, ಕ್ರೀಡಾ ತಾರೆಯರು ಸಹ ದಾಖಲೆಯಿಲ್ಲದೆ, ಅಕ್ರಮ ಚಿನ್ನ ಸಾಗಾಟ ಮಾಡಿ ಕೊನೆಗೆ ಏರ್ಪೋಟ್ಗಳಲ್ಲಿ ವಿಮಾನ ಸಿಬ್ಬಂದಿ ಕೈಗೆ ಸಿಕ್ಕಾಕಿಕೊಂಡ ಘಟನೆಗಳು ನಡೆದಿವೆ. ಇನ್ನು ವಿಚಿತ್ರ ಎಂದರೆ ಇದೀಗ ವಿಮಾನ ಸಿಬ್ಬಂದಿಯೇ ಅಂದರೆ, ಗಗನಸಖಿ ಅಕ್ರಮ ಚಿನ್ನ ಸಾಗಾಟ ಮಾಡಿ ತಗ್ಲಾಕೊಂಡಿರುವು ಇದೇ ಮೊದಲು ಎನ್ನಲಾಗಿದೆ.

ಗುದನಾಳದಲ್ಲಿ 1 ಕೆಜಿ ಚಿನ್ನ ಇಟ್ಟುಕೊಂಡು ಮಸ್ಕತ್ನಿಂದ ಕೇರಳದ ಕಣ್ಣೂರಿಗೆ ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಏರ್ ಇಂಡಿಯಾ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶಾನಲಯದ ಅಧಿಕಾರಿಗಳು (ಡಿಆರ್ಐ) ವಶಕ್ಕೆ ಪಡೆಸಿದ್ದು, ವಿಮಾನ ಸಂಸ್ಥೆಯ ಸಿಬ್ಬಂದಿ ಕಳ್ಳಸಾಗಣೆ ಮಾಡಿ ಬಂಧನವಾಗಿರುವುದು ದೇಶದಲ್ಲಿ ಇದೇ ಮೊದಲು ಎನ್ನಲಾಗಿದೆ.
ಅಕ್ರಮ ಚಿನ್ನಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವ ಗಗನಸಖಿ ಸುರಭಿ ಖಾತುನ್. ಇವರು ಕೋಲ್ಕತಾ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಇವರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೇ 28ರಂದು ಮಸ್ಕತ್ನಿಂದ ಕಣ್ಣೂರಿಗೆ ಬಂದಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆಕೆ ತನ್ನ ಗುದನಾಳದಲ್ಲಿ ಸುಮಾರು 960 ಗ್ರಾಂ ಅಂದರೆ 1 ಕೆ.ಜಿ ಲೆಕ್ಕದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದರು ಎನ್ನಲಾಗಿದೆ.
ಅಷ್ಟೇ ಅಲ್ಲದೆ ಗಗನಸಖಿ ಈ ಹಿಂದೆಯೂ ಚಿನ್ನವನ್ನು ಇದೇ ರೀತಿ ಕಳ್ಳಸಾಗಾಣೆ ಮಾಡಿದ್ದಳು ಎನ್ನುವ ಮಾಹಿತಿ ವಿಚಾರಣೆ ಬಳಿಕ ಬಹಿರಂಗವಾಗಿದೆ. ಇನ್ನು ಈ ಪ್ರಕರಣದ ಹಿಂದೆ ಇನ್ನು ಯಾವರೆಲ್ಲ ಭಾಗಿಯಾಗಿದ್ದರು ಎನ್ನುವ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎನ್ನುವ ಎನ್ನಲಾಗಿದ್ದು, ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅಷ್ಟೇ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications