ಬಾರಾಮುಲ್ಲಾದಲ್ಲಿ ಉಗ್ರನ ಹೊಡೆದುರುಳಿಸಿದ ರಕ್ಷಣಾ ಸಿಬ್ಬಂದಿ
ಶ್ರೀನಗರ, ಜನವರಿ 3: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ರಕ್ಷಣಾ ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಿದೆ. ಇದೇ ವೇಳೆ ರಕ್ಷಣಾ ಪಡೆಯು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು-ಗುಂಡುಗಳನ್ನು ವಶಪಡಿಸಿಕೊಂಡಿದೆ. ಬಾರಾಮುಲ್ಲಾ ಜಿಲ್ಲೆಯ ಹರಿತರ್ ತರ್ಜೂ ಪ್ರದೇಶದಲ್ಲಿ ಮಂಗಳವಾರ ರಕ್ಷಣಾ ಪಡೆ ಹಾಗೂ ಉಗ್ರಗಾಮಿಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.
ಕಾರ್ಯಾಚರಣೆ ವೇಳೆ ಇಬ್ಬರು ಉಗ್ರಗಾಮಿಗಳು ಇದ್ದರೆಂದು ರಕ್ಷಣಾ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದಾರೆ. ಆ ಪೈಕಿ ಒಬ್ಬನನ್ನು ಕೊಲ್ಲಲಾಗಿದೆ. ಮತ್ತೊಬ್ಬನಿಗಾಗಿ ಶೋಧ ಮುಂದುವರಿದಿದೆ. ಉತ್ತರ ಕಾಶ್ಮೀರದ ಬಂಡಿಪೋರ್ ನಲ್ಲಿ ಎನ್ ಕೌಂಟರ್ ನಡೆದ ಐದು ದಿನಗಳ ನಂತರ ಈ ಘಟನೆ ನಡೆದಿದೆ.[ಪಾಕ್ ಗೆ ಒತ್ತಡ, ಉಗ್ರ ಹಫೀಜ್ ಗೆ ಕೈ-ಬಾಯಿ ಕಟ್ಟಲು ಸಿದ್ಧತೆ!]

ಈ ಉಗ್ರರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದವರು ಎಂಬುದು ಗೊತ್ತಾಗಿಲ್ಲ. ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಕಾರ್ಯಾಚರಣೆಯು ಇನ್ನೂ ನಡೆಯುತ್ತಿದೆ. ಈಗಿನ ಸನ್ನಿವೇಶದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದು ಸಾಧ್ಯವಿಲ್ಲ. ಆದರೆ ಸದ್ಯದಲ್ಲೇ ಇನ್ನಷ್ಟು ವಿವರಗಳು ಲಭ್ಯವಾಗಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications