ತರಬೇತಿಗೆ ತೆರಳಿದ್ದ 10 ಬಿಎಸ್ ಎಫ್ ಯೋಧರು ನಿಗೂಢವಾಗಿ ನಾಪತ್ತೆ
Recommended Video

ಮುಘಲ್ಸರೈ(ಉತ್ತರ ಪ್ರದೇಶ), ಜೂನ್ 28: ಜಮ್ಮು ಕಾಶ್ಮೀರಕ್ಕೆ ವಿಶೇಷ ತರಬೇತಿಗೆಂದು ತೆರಳುತ್ತಿದ್ದ 10 ಜನ ಭದ್ರತಾ ಪಡೆಯ ಯೋಧರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಉತ್ತರ ಪ್ರದೇಶದ ಬರ್ಧಾಮನ್ ಮತ್ತು ದಂಬಾದ್ ರೈಲ್ವೇ ಯಲ್ಲಿ ತೆರಳುತ್ತಿದ್ದ ಈ 10 ಜನ ಮುಘಲ್ಸರೈ ಎಂಬಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಈಗಾಗಲೇ ಮುಘಲ್ಸರೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 'ಒಟ್ಟು 83 ಯೋಧರು ವಿಶೇಷ ತರಬೇತಿಗಾಗಿ ಜಮ್ಮು ಕಾಶ್ಮೀರಕ್ಕೆ ತರಳುತ್ತಿದ್ದ ಸಂದರ್ಭದಲ್ಲಿ ಹತ್ತು ಜನ ನಾಪತ್ತೆಯಾಗಿದ್ದಾರೆ. ತಮ್ಮ ಕಮಾಂಡರ್ ಗೆ ಯಾವುದೇ ರೀತಿಯಲ್ಲೂ ಮಾಹಿತಿ ನೀಡದೆ ನಾಪತ್ತೆಯಾಗಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು' ಎಂದು ದೂರಿನಲ್ಲಿ ಹೇಳಲಾಗಿದೆ.

83 ಯೋಧರೂ ಪಶ್ಚಿಮ ಬಂಗಾಳದವರಾಗಿದ್ದು, ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಅವರಿಗೆ ವಿಶೇಷ ತರಬೇತಿ ಏರ್ಪಡಿಸಲಾಗಿತ್ತು. ಈ ಕುರಿತು ಪೊಲೀಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.ಯೋಧರನ್ನು ಅಪಹರಿಸಲಾಗಿದೆಯೇ ಎಂಬ ಕುರಿತೂ ಅನುಮಾನ ವ್ಯಕ್ತವಾಗಿದೆಯಾದರೂ, 10 ಜನರನ್ನು ಏಕಾಏಕಿ ಅಪಹರಿಸುವ ಸಂಭವ ಕಡಿಮೆಯಾದ್ದರಿಂದ ಘಟನೆ ಕುರಿತು ಯಾವುದೇ ಶಂಕೆ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ.
ಇತ್ತೀಚೆಗಷ್ಟೇ, ಜಮ್ಮುಕಾಶ್ಮೀರದಲ್ಲಿ ಔರಂಗಜೇಬ್ ಎಂಬ ಯೋಧನನ್ನು ಉಗ್ರರು ಅಪಹರಿಸಿ ಕೊಂದಿದ್ದರು. ಈ ಕುರಿತು ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications