ಗಗನಯಾನ, ಚಂದ್ರಯಾನ ಸೇರಿ 10 ಬಾಹ್ಯಾಕಾಶ ಯೋಜನೆಗಳಿಗೆ ತಡೆ:ಶಿವನ್
ನವದೆಹಲಿ, ಜೂನ್ 25: ಕೊರೊನಾವೈರಸ್ ಲಾಕ್ಡೌನ್ನಿಂದಾಗಿ ಚಂದ್ರಯಾನ, ಗಗನಯಾನ ಸೇರಿದಂತೆ 10 ಬಾಹ್ಯಾಕಾಶ ಯೋಜನೆಗಳಿಗೆ ತಡೆ ಬಿದ್ದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಕೆ ಶಿವನ್ ತಿಳಿಸಿದ್ದಾರೆ.
Recommended Video
ಬಾಹ್ಯಾಕಾಶ ಸಂಸ್ಥೆಯು ಒಟ್ಟು 10 ಬಾಹ್ಯಾಕಾಶ ಯೋಜನೆಗಳನ್ನು ರೂಪಿಸಿತ್ತು, ಅದರಲ್ಲಿ ಮಾನವಸಹಿತ ಗಗನಯಾನ ಕೂಡ ಒಂದಾಗಿತ್ತು. ಆದರೆ ಕೊರೊನಾವೈರಸ್ ಲಾಕ್ಡೌನ್ನಿಂದಾಗಿ ಎಲ್ಲಾ ಯೋಜನಗಳು ತಡವಾಗಲಿವೆ. ಹಾಗೆಯೇ ಈ ವರ್ಷದ ಎಲ್ಲಾ ಯೋಜನೆಗಳನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕಾದ ಅನಿವಾರ್ಯ ಎದುರಾಗಿದೆ.
ಮಹತ್ವಾಕಾಂಕ್ಷಿ ಗಗನಯಾನ ಯೋಜನೆಗೆ ಸಂಬಂಧಿಸಿದ ಮೊದಲ ಮಾನವ ರಹಿತ ನೌಕೆಯ ಉಡಾವಣೆ 2021ಕ್ಕೆ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಇಸ್ರೋ ತನ್ನ ಯೋಜನೆಗಳಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಇದರ ಪರಿಣಾಮ ಗಗನಯಾನ ಯೋಜನೆಯಲ್ಲೂ ವ್ಯತ್ಯಯವಾಗಿದೆ.

ಅಂದುಕೊಂಡಂತೆ ನಡೆದಿದ್ದರೆ ಈ ವರ್ಷದ ಅಂತ್ಯದಲ್ಲಿ ಗಗನಯಾನ ಯೋಜನೆಯ ಪ್ರಯೋಗಾರ್ಥ ಉಡಾವಣೆ ನಡೆಯಬೇಕಾಗಿತ್ತು. "ನಮಗೆ ನೀಡಿರುವ ಪ್ಲ್ಯಾನ್ ಪ್ರಕಾರ ಈ ವರ್ಷದ ಯೋಜನೆಗಳ ಪಟ್ಟಿಯಲ್ಲಿ ಗಗನಯಾನದ ಮಾನವರಹಿತ ಉಡಾವಣೆ ಇಲ್ಲ. ಇತರ ಉಪಗ್ರಹಗಳ ಉಡಾವಣೆಯತ್ತ ಗಮನ ಹರಿಸಲಾಗಿದೆ," ಎಂಬುದಾಗಿ ಇಸ್ರೋದ ಹಿರಿಯ ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.
ಮಾನವರಹಿತ ನೌಕೆಯ ಉಡಾವಣೆ ಮುಂದಕ್ಕೆ ಹೋಗಿರುವುದರಿಂದ ಗಗನಯಾನದ ಒಟ್ಟಾರೆ ವೇಳಾಪಟ್ಟಿಯೂ ಬದಲಾಗುವ ಸಾಧ್ಯತೆ ಇದೆ ಎಂಬುದಾಗಿ ಅವರು ವಿವರಿಸಿದ್ದಾರೆ. ಗಗನಯಾನವು 2022ರಲ್ಲಿ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಇಸ್ರೋದ ಕನಸಿನ ಯೋಜನೆಯಾಗಿದೆ.
ಇಸ್ರೋ ತನ್ನ ಉಡಾವಣೆಗೆ ಉಪಕರಣಗಳನ್ನು ತಯಾರಿಸಲು ಖಾಸಗಿ ವಲಯವನ್ನು ಅವಲಂಬಿಸಿದೆ. ಇಸ್ರೋಗೆ ಉಪಕರಣಗಳನ್ನು ಒದಗಿಸುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಲಾಕ್ಡೌನ್ನಿಂದಾಗಿ ನಿಂತಿವೆ, ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಈ ಬಾರಿ ಚಂದ್ರಯಾನ 3ರ ಯೋಜನೆ ಇಸ್ರೋ ರೂಪಿಸಿತ್ತು ಆದರೆ ಎಲ್ಲದಕ್ಕೂ ತಡೆ ಬಿದ್ದಿದೆ ಎಂದು ಕೆ ಶಿವನ್ ವಿವರಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications