Get Updates
Get notified of breaking news, exclusive insights, and must-see stories!

ಮಣಿಪುರದ ಎಲ್ಲಾ ಗುಂಪುಗಳ ಜೊತೆ ಕೇಂದ್ರ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಿ: ರಾಜಕೀಯ ಪಕ್ಷಗಳ ಆಗ್ರಹ

ಬೆಂಗಳೂರು, ಜೂನ್. 26 : ಮಣಿಪುರ ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರವು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಟೀಕಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಜನರ ವಿಶ್ವಾಸ ಗಳಿಸಲು ಮತ್ತು ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಸ್ಥಳೀಯರೊಂದಿಗೆ ಕೇಂದ್ರ ಸಂವಾದ ನಡೆಸಬೇಕೆಂದು ಭಾನುವಾರ ಒತ್ತಾಯಿಸಿದ್ದಾರೆ.

" ಮಣಿಪುರದಲ್ಲಿ 35 ವಿವಿಧ ಸಮುದಾಯಗಳಿವೆ. ನೀವು ಎಲ್ಲರ ಏಕಾಭಿಪ್ರಾಯ ಹೊಂದಲು ಸಾಧ್ಯವಿಲ್ಲ. ನೀವು ಒಂದೇ ದೃಷ್ಟಿಕೋನವನ್ನು ಹೊಂದಲು ಸಾಧ್ಯವಿಲ್ಲ ಆದರೆ ಎಲ್ಲರೂ ಒಮ್ಮತವನ್ನು ಹೊಂದಬಹುದು. ಇದು ಒಮ್ಮತದ ಮೂಲಕ, ಪ್ರತಿಯೊಬ್ಬರ ಮಾತನ್ನು ಆಲಿಸುವ ಮೂಲಕ ಮತ್ತು ಸಂವೇದನಾಶೀಲರಾಗುವ ಮೂಲಕ ಮಾತ್ರ ನಿಜವಾಗಿಯೂ ನಂಬಿಕೆಯನ್ನು ಪುನಃಸ್ಥಾಪಿಸಬಹುದು" ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ.

 Manipur violence

"ಜನರ ನಂಬಿಕೆ ಗಳಿಸುವುದು ದೀರ್ಘ ಪ್ರಕ್ರಿಯೆಯಾಗಲಿದೆ. ಇದು ವಾರಗಳಲ್ಲಿ ಆಗುವುದಿಲ್ಲ. ತಿಂಗಳುಗಳು, ವರ್ಷಗಳು ಬೇಕಾಗಬಹುದು. ಆದರೆ ನಾವು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಾಗಿದೆ" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಮಣಿಪುರದಲ್ಲಿ ಶಾಂತಿಯ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ಸಮಾವೇಶದಲ್ಲಿ ಮಣಿಪುರದ 10 "ಸಮಾನ ಮನಸ್ಕ" ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್‌ಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಡಿ ರಾಜಾ, ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್, ಆಮ್ ಆದ್ಮಿ ಪಕ್ಷ, ಜನತಾ ದಳ (ಯುನೈಟೆಡ್), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಶಿವಸೇನಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸರ್ಕಾರ ಎರಡು ಮೂಲಭೂತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಒಂದು, ಎಲ್ಲಾ ಸಶಸ್ತ್ರ ಗುಂಪುಗಳನ್ನು ನಿರ್ದಯವಾಗಿ ನಿಶ್ಯಸ್ತ್ರಗೊಳಿಸಿಸುವುದು ಮತ್ತು ಎರಡನೇಯದು ವಿಶ್ವಾಸ ಮತ್ತು ಸಾಮರಸ್ಯದ ವಾತಾವರಣವನ್ನು ಸೃಷ್ಟಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು ಎಂದು ಜೈರಾಮ್ ರಮೇಶ್ ರಾಜ್ಯ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

"ಜನರ ಮಾತನ್ನು ಆಲಿಸಿ. ಕುಕಿ ಸಮುದಾಯದ ಜನರಿಗೆ ಭಯವಿದೆ. ಮೈತಿಯಿ ಸಮುದಾಯಕ್ಕೂ ಭಯವಿದೆ. ನಾಗಾಗಳು ತಮ್ಮದೇ ಆದ ಸಮಸ್ಯೆಗಳನ್ನು ಹೊಂದಿದ್ದಾರೆ. ಅಲ್ಪಸಂಖ್ಯಾತರು ತಮ್ಮದೇ ಬೇರೆ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಅವೆಲ್ಲವನ್ನೂ ಸಮಾಧಾನವಾಗಿ ಕೇಳಿ. ನೀವು ಅವರಿಗೆ ಪ್ರತಿಕ್ರಿಯಿಸಿದರೆ, ನೀವು ನಂಬಿಕೆಯ ವಾತಾವರಣವನ್ನು ಸೃಷ್ಟಿಸಬಹುದು ಮತ್ತು ಶಾಂತಿಯನ್ನು ಪುನಃಸ್ಥಾಪಿಸಬಹುದು. ಒಕ್ರಾಮ್ ಇಬೋಬಿ ಸಿಂಗ್ ಅವರು 10 ವರ್ಷಗಳ ಕಾಲ 10 ವರ್ಷಗಳನ್ನು ತೆಗೆದುಕೊಂಡರು ಮತ್ತು ನಂತರ ಅಭಿವೃದ್ಧಿಯ ಪ್ರಕ್ರಿಯೆಯನ್ನು ಪ್ರಾರಂಭಿಸಲಾಯಿತು" ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಮಣಿಪುರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ, ಹೆಚ್ಚಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಕಳೆದ 24 ಗಂಟೆಗಳಲ್ಲಿ ಇಂಫಾಲ್ ಪೂರ್ವ ಜಿಲ್ಲೆಯಿಂದ ಐದು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇಲ್ಲಿಯವರೆಗೆ ರಾಜ್ಯದಲ್ಲಿ ಪೊಲೀಸರು ಒಟ್ಟು 1100 ಶಸ್ತ್ರಾಸ್ತ್ರಗಳು, 13,702 ಮದ್ದುಗುಂಡುಗಳು ಮತ್ತು ವಿವಿಧ ರೀತಿಯ 250 ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸ್ ಇಲಾಖೆಯ ಪತ್ರಿಕಾ ಟಿಪ್ಪಣಿ ತಿಳಿಸಿದೆ. ಇದರ ಜೊತೆಗೆ ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸಹಜ ಸ್ಥಿತಿಗೆ ತರಲು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಕಾನೂನು ಜಾರಿ ಇಲಾಖೆಯು ಯಾವುದೇ ವದಂತಿಯನ್ನು ಸ್ಪಷ್ಟಪಡಿಸಲು ಕೇಂದ್ರ ನಿಯಂತ್ರಣ ಕೊಠಡಿಯ ವದಂತಿ ಮುಕ್ತ ಸಂಖ್ಯೆ 9233522822 ಗೆ ಕರೆ ಮಾಡಲು ಹೇಳಿದೆ. ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೊಲೀಸ್ ಅಥವಾ ಭದ್ರತಾ ಪಡೆಗಳಿಗೆ ಹಿಂದಿರುಗಿಸಲು ಸೂಚಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+