ಗುಜರಾತ್ನಲ್ಲಿ ಶೇ. 10ರಷ್ಟು ಸಿಎನ್ಜಿ, ಪಿಎನ್ಜಿ ವ್ಯಾಟ್ ಕಡಿತ
ಗಾಂಧಿನಗರ, ಅಕ್ಟೋಬರ್ 17: ಗುಜರಾತ್ ಸರ್ಕಾರವು ನೈಸರ್ಗಿಕ ಅನಿಲ (ಸಿಎನ್ಜಿ) ಮತ್ತು ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್ಜಿ) ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ಶೇಕಡಾ 10 ರಷ್ಟು ಕಡಿಮೆ ಮಾಡಿದೆ.
ರಾಜ್ಯ ಸಚಿವ ಜಿತು ವಘಾನಿ ಈ ಘೋಷಣೆ ಮಾಡಿದ್ದು, ಇದು 2022 ರ ಅಂತ್ಯದ ವೇಳೆಗೆ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಅನ್ವಯವಾಗಲಿದೆ. ಸಿಎನ್ಜಿ ಮೇಲಿನ ವ್ಯಾಟ್ ಕಡಿತದ ನಂತರ, ಗ್ರಾಹಕರು ಪ್ರತಿ ಕೆಜಿಗೆ 6 ರಿಂದ 7 ರುಪಾಯಿವರೆಗೆ ಪ್ರಯೋಜನ ಪಡೆಯುತ್ತಾರೆ. ಹಾಗೆಯೇ ಪಿಎನ್ಜಿ ಗ್ರಾಹಕರು ಪ್ರತಿ ಕೆಜಿಗೆ 5 ರಿಂದ 6 ರೂವರೆಗೂ ಪ್ರಯೋಜನ ಪಡೆಯುತ್ತಾರೆ. ಸೋಮವಾರ ಅಹಮದಾಬಾದ್ನಲ್ಲಿ ಸರಾಸರಿ ಸಿಎನ್ಜಿ ಬೆಲೆ 83.9 ರೂ, ಗಾಂಧಿನಗರದಲ್ಲಿ ರೂ 82.16 ಮತ್ತು ವಡೋದ್ರಾದಲ್ಲಿ ರೂ 81.15 ಆಗಿತ್ತು.

ಒಂದು ವರ್ಷದಲ್ಲಿ ಎರಡು ಸಿಲಿಂಡರ್ಗಳನ್ನು ಉಚಿತವಾಗಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಸುಮಾರು 38 ಲಕ್ಷ ಗೃಹಿಣಿಯರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಜಿತು ವಘಾನಿ ಹೇಳಿದರು. ಈ ಹಿಂದೆ ಅಮುಲ್ ಮಿಲ್ಕ್ ತನ್ನ ಸಂಪೂರ್ಣ ಕೆನೆ ಹಾಲು ಮತ್ತು ಎಮ್ಮೆಯ ಹಾಲಿನ ಬೆಲೆಯನ್ನು ಗುಜರಾತ್ ಹೊರತುಪಡಿಸಿ ಎಲ್ಲಾ ರಾಜ್ಯಗಳಲ್ಲಿ 2 ರೂ. ಹೆಚ್ಚಿಸಿತ್ತು. ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಈ ವರ್ಷ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ. ಏತನ್ಮಧ್ಯೆ, ಸೋಮವಾರ (ಅಕ್ಟೋಬರ್ 17) ಸತತ 149 ನೇ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ.
ಈ ಯೋಜನೆಗೆ ₹ 650 ಕೋಟಿಯಷ್ಟು ಪರಿಹಾರವನ್ನು ನಿರ್ಧರಿಸಿದರೆ, ₹ 1,700 ವರೆಗಿನ ಮೊತ್ತವು ಸಾರ್ವಜನಿಕರ ಮನೆ ಅಥವಾ ಜೇಬಿಗೆ ತಲುಪಬಹುದು ಎಂದು ಸಚಿವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications