100 ಕೋಟಿಗೆ ಗವರ್ನರ್ಗರಿ, ರಾಜ್ಯಸಭೆ ಸೀಟು ಮಾರಾಟ ದಂಧೆ ಬಯಲಿಗೆ!
ನವದೆಹಲಿ,ಜುಲೈ. 25: 100 ಕೋಟಿ ರೂಪಾಯಿ ಮೊತ್ತದ ಹಣ ನೀಡಿದರೆ ರಾಜ್ಯಸಭೆಯಲ್ಲಿ ಸ್ಥಾನ ಕೊಡಿಸುವ ಹಾಗೂ ಗವರ್ನರ್ ಆಗಿ ನೇಮಕ ಮಾಡುವ ಭರವಸೆ ನೀಡಿ ವಂಚಿಸಿದ್ದ ನಾಲ್ವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಸೋಮವಾರ ಬಂಧಿಸಿದೆ.
ಬಂಧಿತವಾಗಿರುವ ಆರೋಪಿಗಳನ್ನು ಕಮಲಾಕರ್ ಪ್ರೇಮಕುಮಾರ್ ಬಂಡಗಾರ್, ಅಭಿಷೇಕ್ ಬೂರಾ, ಮೊಹಮ್ಮದ್ ಐಜಾಜ್ ಖಾನ್, ರವೀಂದ್ರ ವಿಠಲ್ ನಾಯ್ಕ್ ಮತ್ತು ಇತರರು ಎಂದು ಗುರುತಿಸಲಾಗಿದೆ.
ಎಫ್ಐಆರ್ನಲ್ಲಿ ಹೇಳಿರುವ ಪ್ರಕಾರ, ಮಹಾರಾಷ್ಟ್ರದ ಕಮಲಾಕರ್ ಪ್ರೇಮಕುಮಾರ್ ಬಂಡಗರ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ವಂಚನೆಯ ಏಕೈಕ ಉದ್ದೇಶದಿಂದ ತಾನು ನವದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ನಿಯೋಜಿಸಲಾದ ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ರಾಜ್ಯಸಭಾ ಸ್ಥಾನ ಕೊಡಿಸುವ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂಬ ಸುಳಿವು ಸಿಕ್ಕಿದೆ ಎಂದು ಸಿಬಿಐ ಉಲ್ಲೇಖಿಸಿದೆ.
ಖಾಸಗಿ ವ್ಯಕ್ತಿಗಳಿಗೆ ರಾಜ್ಯಸಭೆಯಲ್ಲಿ ಸೀಟುಗಳ ವ್ಯವಸ್ಥೆ, ರಾಜ್ಯಪಾಲರ ನೇಮಕ, ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳ ಅಡಿಯಲ್ಲಿ ಸರ್ಕಾರ ನಡೆಸುವ ವಿವಿಧ ಸಂಸ್ಥೆಗಳಲ್ಲಿ ಭಾರಿ ಹಣ ನೀಡಿದರೆ ಅಧ್ಯಕ್ಷಗಿರಿ ಕೊಡಿಸುವ ಸುಳ್ಳು ಭರವಸೆ ನೀಡುವ ಮೂಲಕ ವಂಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕಮಲಾಕರ್ ತನ್ನ ಸಂಗಡಿಗರೊಂದಿಗೆ ಸೇರಿ ರಾಜ್ಯಸಭೆಗೆ ಸ್ಥಾನ ಕೊಡಿಸುವ ಭರವಸೆಯೊಂದಿಗೆ ಕೆಲವು ವ್ಯಕ್ತಿಗಳಿಗೆ 100 ಕೋಟಿ ರೂಪಾಯಿ ಮೊತ್ತದ ದೊಡ್ಡ ಹಣ ಪಡೆದು ವಂಚಿಸುವ ಪ್ರಯತ್ನಗಳನ್ನು ಮಾಡುತ್ತಿದ್ದನು ಎಂದು ಮೂಲಗಳು ತಿಳಿಸಿವೆ.
ಕೆಲವು ಕೆಲಸಗಳಿಗಾಗಿ ನೇರವಾಗಿ ಅಥವಾ ಅಭಿಷೇಕ್ ಬೂರಾ, ಕಮಲಾಕರ್ ಪ್ರೇಮಕುಮಾರ್ ಬಂಡಗಾರ್ ಅವರಂತಹ ಮಧ್ಯವರ್ತಿಗಳ ಮೂಲಕ ತಮ್ಮ ಬಳಿಗೆ ಬರುವವರ ಮೇಲೆ ಪ್ರಭಾವ ಬೀರಲು ಈ ದಂಧೆ ಆಗಾಗ್ಗೆ ಹಿರಿಯ ಅಧಿಕಾರಿಗಳು ಮತ್ತು ರಾಜಕೀಯ ಕಾರ್ಯಕರ್ತರ ಹೆಸರನ್ನು ಉಲ್ಲೇಖಿಸಿತ್ತು ಎಂದು ಮೂಲಗಳು ತಿಳಿಸಿವೆ.

ಉನ್ನತ ನೇಮಕಾತಿಗಳಲ್ಲಿ ಪ್ರಮುಖ ಪಾತ್ರ
ಅಭಿಷೇಕ್ ಬೂರಾ, ಕಮಲಾಕರ್, ಪ್ರೇಮ್ಕುಮಾರ್ ಬಂಡಗರ್ ಕೆಲವು ಜನರೊಂದಿಗೆ ತಮ್ಮ ಸಂಪರ್ಕಗಳನ್ನು ಬಳಸಲು ಮತ್ತು ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಸಂಯೋಜಿಸಲು ಸಂಚು ರೂಪಿಸಿದ್ದರು. ಉನ್ನತ ನೇಮಕಾತಿಗಳಲ್ಲಿ ಪ್ರಮುಖ ಪಾತ್ರ ವಹಿಸಲು ಮುಂದಾಗಿದ್ದರು ಎಂದು ತನಿಖೆಗೆ ಸಂಬಂಧಿಸಿರುವ ಹೆಸರು ಹೇಳಲಿಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದರು.

ವಂಚನೆ ಮಾಡುವ ಕೆಲಸ ತರಲು ಸೂಚನೆ
ಹಿರಿಯ ಸಿಬಿಐ ಅಧಿಕಾರಿಯಂತೆ ಸೋಗು ಹಾಕೊಕೊಂಡು ಬಂಡಗಾರ್, ಮೊಹಮ್ಮದ್ ಐಜಾಜ್ ಖಾನ್ ಸೇರಿದಂತೆ ಇತರ ಆರೋಪಿಗಳಿಗೆ ಅವರು ಬೃಹತ್ ಮೊತ್ತಕ್ಕೆ ಪ್ರತಿಯಾಗಿ ವಂಚನೆ ಮಾಡಬಹುದಾದ ಯಾವುದೇ ರೀತಿಯ ಕೆಲಸವನ್ನು ತರಲು ಹೇಳಿದರು ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಕಾರ್ಯಕರ್ತರ ಹೆಸರು ಬಳಕೆ
ಕಮಲಾಕರ್ ಪ್ರೇಮಕುಮಾರ್ ಬಂಡಗರ್, ಮಹೇಂದ್ರ ಪಾಲ್ ಅರೋರಾ, ಎಂ.ಡಿ. ಅಲಾಜ್ ಖಾನ್ ಮತ್ತು ರವೀಂದ್ರ ವಿಠಲ್ ನಾಯ್ಕ್ ಅವರು ನೇರವಾಗಿ ಅಥವಾ ಅಭಿಷೇಕ್ ಬೂರಾ ಅವರಂತಹ ಮಧ್ಯವರ್ತಿ ಮೂಲಕ ಕೆಲವು ಕೆಲಸಗಳಿಗಾಗಿ ಜನರು ತಮ್ಮ ಬಳಿಗೆ ಬರುವಂತೆ ಮಾಡಲು ಹಿರಿಯ ಅಧಿಕಾರಿಗಳು ಮತ್ತು ರಾಜಕೀಯ ಕಾರ್ಯಕರ್ತರ ಹೆಸರನ್ನು ಆಗಾಗ್ಗೆ ಹೇಳುತ್ತಿದ್ದರು ಎಂದು ಸಿಬಿಐ ಎಫ್ಐಆರ್ನಲ್ಲಿ ಹೇಳಿದೆ.

ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ
ಕರ್ಮಲಾಕರ್ ಪ್ರೇಮಕುಮಾರ್ ಬಂಡಗಾರ್ ಎಂಬಾತ ಸಿಬಿಐನ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿಕೆ ನೀಡಿದ್ದು, ತನಗೆ ತಿಳಿದಿರುವ ಕೆಲವರ ಪರ ಒಲವು ತೋರಿ, ಚಾಲ್ತಿಯಲ್ಲಿರುವ ಪ್ರಕರಣಗಳ ತನಿಖೆಯ ಮೇಲೆ ಪ್ರಭಾವ ಬೀರಿ ಪೊಲೀಸ್ ಠಾಣೆಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications