ದೇಶದ 50 ಜಿಲ್ಲೆಗಳಲ್ಲಿ ಶೇ.100 ರಷ್ಟು ಕೊರೊನಾ ಉಲ್ಬಣ
ನವದೆಹಲಿ, ಜೂ. 05: ದೇಶದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಂಡಿದ್ದರೂ, ದೇಶದ 50 ಜಿಲ್ಲೆಗಳಲ್ಲಿ ಶೇ.100 ರಷ್ಟು ಕೊರೊನಾ ಉಲ್ಬಣವಾಗಿದೆ ಎಂದು ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಪ್ರಮುಖ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊಫೆಸರ್ ಗಿರಿಧರ್ ಆರ್ ಬಾಬು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಸಂದರ್ಭ ಮಾತನಾಡಿರುವ ಪ್ರೊಫೆಸರ್ ಗಿರಿಧರ್ ಆರ್ ಬಾಬು, ದೇಶದ 50 ಜಿಲ್ಲೆಗಳಲ್ಲಿ ಶೇ.100 ರಷ್ಟು ಕೊರೊನಾ ಉಲ್ಬಣವಾಗಿದೆ. ಗುಜರಾತ್ನಲ್ಲಿ ಭಾರೀ ಏರಿಕೆ ಕಂಡಿದೆ. ಗುಜರಾತ್ನ 32 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ಶೇಕಡಾ 100 ರಷ್ಟು ಕೊರೊನಾ ಏರಿಕೆ ಕಂಡಿದೆ. ಇನ್ನು ಈ 28 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಶೇಕಡಾ 200 ರಷ್ಟು ಕೊರೊನಾ ಪ್ರಮಾಣ ಏರಿಕೆ ಕಂಡಿದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿಯೂ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, 22 ಜಿಲ್ಲೆಗಳ ಪೈಕಿ 15 ರಷ್ಟು ಜಿಲ್ಲೆಗಳಲ್ಲಿ ಶೇಕಡಾ 100 ರಷ್ಟು ಕೋವಿಡ್ ಪ್ರಕರಣಗಳು ಹೆಚ್ಚಿದೆ. ಇವು ಬಹುಶಃ ಈ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಹೆಚ್ಚು ಮಾಡಿರುವ ಪರಿಣಾಮ ಆಗಿರಬಹುದು ಎಂದು ಅಭಿಪ್ರಾಯಿಸಿದ್ದಾರೆ.

ಇನ್ನು ಇತರೆ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಿಲ್ಲ ಎಂದು ಇದರ ಅರ್ಥವಲ್ಲ. ಅಲ್ಲಿಯೂ ಕೊರೊನಾ ಪ್ರಕರಣಗಳು ಇವೆ. ಆದರೆ ಈ ಜಿಲ್ಲೆಗಳಿಗಿಂತ ಕಡಿಮೆ ಪ್ರಮಾಣದಲ್ಲಿದೆ. ಶೇ.100 ರಷ್ಟು ಕೊರೊನಾ ಉಲ್ಬಣವಾಗಿರುವ 50 ಜಿಲ್ಲೆಗಳು ದೆಹಲಿ ಹೊರತಾಗಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯಪ್ರದೇಶ, ಗುಜರಾತ್ ಮತ್ತು ಹರಿಯಾಣದಲ್ಲಿದೆ. ಈ 50 ಜಿಲ್ಲೆಗಳ ಒಂದು ತಿಂಗಳ ಹಿಂದಿನ ಕೊರೊನಾ ಪರಿಸ್ಥಿತಿ ಹೋಲಿಸಿದರೆ ಈಗ ಸೋಂಕು ಪ್ರಮಾಣ ಗಣನೀಯವಾಗಿ ಹೆಚ್ಚಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಸೋಂಕು ಪ್ರಕರಣಗಳು ಇಳಿಕೆ ಕಂಡುಬಂದಿದೆ. ಆದರೆ ಗ್ರಾಮೀಣ ಪ್ರದೇಶಗಳಿಗೆ ಸೋಂಕು ಹರಡಿದೆ. ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯೆ ಕಡಿಮೆ ಇರುವ ಹಿನ್ನೆಲೆ ನಗರದಲ್ಲಿ ದಾಖಲಾಗುವ ಕೊರೊನಾ ಪ್ರಕರಣದಷ್ಟು ಸಂಖ್ಯೆ ಗ್ರಾಮೀಣ ಪ್ರದೇಶಗಳಲ್ಲಿ ಕಂಡು ಬರುವುದಿಲ್ಲ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ಪ್ರಮಾಣ ಉತ್ತಮವಾಗಿಲ್ಲ. ಗ್ರಾಮೀಣ ಪರಿಸ್ಥಿತಿಯಲ್ಲಿ ಗೊಂದಲಮಯ ವಾತಾವರಣವಿದೆ ಎಂದು ತಿಳಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications