ಟಾಪ್ ಟೆನ್ ವಿಶ್ವವಿದ್ಯಾಲಯಕ್ಕೆ 5 ವರ್ಷದಲ್ಲಿ 10 ಸಾವಿರ ಕೋಟಿ : ಮೋದಿ
"ಖಾಸಗಿ ವಿವಿಯೂ ಸೇರಿದಂತೆ ದೇಶದ ಟಾಪ್ ಟೆನ್ ವಿಶ್ವವಿದ್ಯಾಲಯಗಳಿಗೆ ಮುಂದಿನ ಐದು ವರ್ಷಗಳಲ್ಲಿ ಸ್ವಾಯತ್ತತೆ ಹಾಗೂ ಹತ್ತು ಸಾವಿರ ಕೋಟಿ ನೆರವು ನೀಡಲಾಗುವುದು. ಅವುಗಳನ್ನು ವಿಶ್ವ ದರ್ಜೆಗೆ ಏರಿಸಬೇಕು ಎಂಬ ಕಾರಣಕ್ಕೆ ಈ ನೆರವು ನೀಡಲಾಗುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬಿಹಾರದ ಪಾಟ್ನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹೇಗೆ ನಳಂದ ಹಾಗೂ ತಕ್ಷಶಿಲಾ ವಿಶ್ವವಿದ್ಯಾಲಯಗಳು ಜಗತ್ತಿನ ನಾನಾ ಭಾಗಗಳಿಂದ ವಿದ್ಯಾರ್ಥಿಗಳನ್ನು ಸೆಳೆದವೋ ಅದೇ ರೀತಿ ಭಾರತೀಯ ವಿಶ್ವವಿದ್ಯಾಲಯಗಳು ಆಗಬೇಕು ಎಂದರು. ಈ ಸಮಾರಂಭದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಜರಿದ್ದರು.

"ಜಗತ್ತಿನ ಟಾಪ್ ಐನೂರರ ಪಟ್ಟಿಯಲ್ಲಿ ನಾವಿಲ್ಲ. ನಾವು ಈ ಕಪ್ಪು ಚುಕ್ಕೆಯನ್ನು ತೆಗೆಯಬೇಕೋ ಬೇಡವೋ? ನಮ್ಮ ಸಂಕಲ್ಪ ಶಕ್ತಿ ಹಾಗೂ ಕಠಿಣ ಪರಿಶ್ರಮದಿಂದ ಈ ಸನ್ನಿವೇಶವನ್ನು ಬದಲಿಸಬೇಕು" ಎಂದರು.
ಹತ್ತು ಖಾಸಗಿ ಹಾಗೂ ಹತ್ತು ಸರಕಾರಿ ವಿಶ್ವವಿದ್ಯಾಲಯಗಳನ್ನು ವಿಶ್ವದರ್ಜೆಗೆ ಏರಿಸುವುದಕ್ಕೆ ಯೋಜನೆ ರೂಪಿಸುತ್ತೇವೆ. ಸರಕಾರದ ನಿಯಮಗಳಿಂದ ಅವುಗಳಿಗೆ ವಿನಾಯಿತಿ ನೀಡಿ, ಸ್ವತಂತ್ರವಾಗಿ ಬೆಳೆಯಲು ಅವಕಾಶ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಹತ್ತು ಸಾವಿರ ಕೋಟಿ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.
ಸಾಮರ್ಥ್ಯ ಸಾಬೀತು ಪಡಿಸುವ ವಿಶ್ವವಿದ್ಯಾಲಯಗಳನ್ನು ಆರಿಸಲಾಗುವುದು. ಯಾವುದೇ ಶಿಫಾರಸು ಪರಿಗಣಿಸುವುದಿಲ್ಲ. ವಿ.ವಿ.ಯ ಇತಿಹಾಸ, ಈ ವರೆಗಿನ ಸಾಧನೆ, ಜಾಗತಿಕ ಮಟ್ಟದಲ್ಲಿ ಏರುವುದಕ್ಕೆ ಅನುಸರಿಸುವ ಹಾದಿ ಎಲ್ಲವನ್ನೂ ಪರಿಗಣಿಸಲಾಗುವುದು. ವೃತ್ತಿಪರ ಏಜೆನ್ಸಿಯೊಂದರ ಮೂಲಕ ಆಯ್ಕೆ ಮಾಡಲಾಗುವುದು ಎಂದು ಮೋದಿ ಮಾಹಿತಿ ನೀಡಿದ್ದಾರೆ.
ಐಐಎಂಗಳಿಗೆ ಇದೇ ಮೊದಲ ಬಾರಿಗೆ ಸರಕಾರದ ಹತೋಟಿಯಿಂದ ಹೊರಬರಲಿದೆ. ವೃತ್ತಿಪರವಾಗಿ ತೆರೆದುಕೊಳ್ಳಲಾಗಿದೆ. ಇದೊಂದು ದೊಡ್ಡ ಅವಕಾಶ. ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications