ಶತಾಯುಷಿ ಕಟ್ಟಿದ ಶೌಚಾಲಯಕ್ಕೆ ಎಲ್ಲೆಡೆಯಿಂದ ಬಹುಪರಾಕ್
ರಾಯ್ ಪುರ(ಚತ್ತೀಸ್ ಗಢ), ಸೆ. 07 : ಪ್ರಧಾನಿ ನರೇಂದ್ರ ಮೋದಿ ಅವರ 'ಸ್ವಚ್ಛ ಭಾರತ' ಯೋಜನೆಗೆ ಹಲವೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣ, ಮನೆಗೊಂದು ಶೌಚಾಲಯ ನಿರ್ಮಾಣದ ಗುರಿ ತಲುಪಲು ಸರ್ಕಾರಗಳು ಶ್ರಮಿಸುತ್ತಲೇ ಇವೆ. ಈ ನಡುವೆ ಇತ್ತೀಚಿಗೆ ಶತಾಯುಷಿ ಮಹಿಳೆಯೊಬ್ಬರು ಶೌಚಾಲಯ ನಿರ್ಮಾಣ ಮಾಡಿರುವ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುತ್ತಿದೆ.
ರಾಯಪುರ್ ನ ಶತಾಯುಷಿ(102) ಮಹಿಳೆ ಬಯಲಲ್ಲಿ ಶೌಚಕ್ಕೆ ಹೋಗುವ ಮುಜುಗರದಿಂದ ತನ್ನ ಗ್ರಾಮದ ಮಹಿಳೆಯರನ್ನು ಬಚಾವ್ ಮಾಡುವ ಸಲುವಾಗಿ ತನ್ನ ಕುರಿಗಳನ್ನೇ ಮಾರಿ, ಶೌಚಾಲಯ ನಿರ್ವಿುಸಿ, ಇಡಿ ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ.
ಛತ್ತೀಸಗಢದ ಧಮ್ರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕೋಟಾಭರಿ ಗ್ರಾಮದ ವೃದ್ಧೆ ಕುವಾರ್ಬಾಯ್ ಯಾದವ್ ಅವರು ಈ ಗ್ರಾಮದಲ್ಲಿ ಬಯಲು ಶೌಚ ಸಮಸ್ಯೆ ತಡೆಯಲು ಜಿಲ್ಲಾಡಳಿತದಿಂದ ಹಿಡಿದು ಗ್ರಾಮ ಪಂಚಾಯ್ತಿವರೆಗಿನ ಸಂಸ್ಥೆಗಳು ಸಾಕಷ್ಟು ಪ್ರಯತ್ನಿಸಿದ್ದವು. ಆದರೆ ಆ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು. [ಶೌಚಾಲಯ ನಿರ್ಮಿಸಿ, ಹೆಣ್ಣು ಮಕ್ಕಳನ್ನು ಉಳಿಸಿ!]

ಅದೇನಾಯಿತೋ. ಒಂದು ದಿನ ಈ ಗ್ರಾಮದ ನಿವಾಸಿ 102 ವರ್ಷದ ವೃದ್ಧೆ ಕುವಾರ್ಬಾಯ್ ಯಾದವ್ ಎಂಬುವವರು ತಮ್ಮ ಕುರಿಗಳನ್ನು ಮಾರಿ ಶೌಚಾಲಯ ನಿರ್ವಿುಸಲು ನಿರ್ಧರಿಸಿದರು. ಅದರಂತೆ ಅವರು ತಮ್ಮ ಕುರಿಗಳನ್ನು 22 ಸಾವಿರ ರೂ.ಗಳಿಗೆ ಮಾರಾಟ ಮಾಡಿ, ಶೌಚಾಲಯ ನಿರ್ವಿುಸಲು ಮುಂದಾದರು. [ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5 ]
ಈ ವಿಷಯ ತಿಳಿದ ಧಮ್ರಿ ಜಿಲ್ಲಾಡಳಿತ ಕೂಡ ಕುವಾರ್ಬಾಯ್ ಯಾದವ್ ಅವರ ಬೆಂಬಲಕ್ಕೆ ನಿಂತಿತು. ಕಲೆಕ್ಟರ್ ಭೆಮ್ ಸಿಂಗ್ ಅವರು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREG) ಯಡಿ, ಶೌಚಾಲಯ ನಿರ್ವಣಕ್ಕೆ ಅಗತ್ಯ ಸಬ್ಸಿಡಿಯನ್ನು ಬಿಡುಗಡೆ ಮಾಡಿತು. ವೃದ್ಧೆಯ ಮುತುವರ್ಜಿ ಕಂಡ ಗ್ರಾಮದ 450 ನಿವಾಸಿಗಳು ತಮ್ಮ ಕೈಲಾದ ಸಹಾಯ ಮಾಡಿದರು.
ಈಗ ಕೋಟಾಭರಿ ಗ್ರಾಮ ಕಳೆದ ಜುಲೈನಲ್ಲಿ ಬಯಲು ಶೌಚ ಮುಕ್ತ ಗ್ರಾಮವೆಂದು ಜಿಲ್ಲಾಡಳಿತದಿಂದ ಘೊಷಿಸಲ್ಪಟ್ಟಿದೆ. (ಒನ್ ಇಂಡಿಯಾ ಸುದ್ದಿ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications