108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ: ಏನಿದರ ವಿಶೇಷತೆಗಳು?
ಭೋಪಾಲ್ ಸೆಪ್ಟೆಂಬರ್ 22: ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ಆದಿ ಶಂಕರಾಚಾರ್ಯರ ಪ್ರತಿಮೆ ನಿರ್ಮಾಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಬಹುದಿನಗಳ ಕನಸು ನನಸಾಗಿದೆ. ಇದರ ಇನ್ನಷ್ಟು ವಿಶೇಷತೆಗಳ ಬಗ್ಗೆ ತಿಳಿಯೋಣ.
108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೆಪ್ಟೆಂಬರ್ 21ರಂದು ಅನಾವರಣಗೊಳಿಸಿದರು. ಈ ಯೋಜನೆ ಸುಮಾರು 2100 ಕೋಟಿ ರೂಪಾಯಿ ವೆಚ್ಚದ್ದಾಗಿದೆ. ಅಷ್ಟಧಾತುವಿನಿಂದ ನಿರ್ಮಾಣವಾದ ಈ ಪ್ರತಿಮೆಯೊಂದಿಗೆ 'ಅದ್ವೈತ ಲೋಕ' ಹೆಸರಿನ ಮ್ಯೂಸಿಯಂ ಮತ್ತು ಆಚಾರ್ಯ ಶಂಕರ್ ಇಂಟರ್ನ್ಯಾಶನಲ್ ಅದ್ವೈತ ವೇದಾಂತ ಸಂಸ್ಥೆಯನ್ನು ಕೂಡ ನಿರ್ಮಿಸಲಾಗಿದೆ.

ಓಂಕಾರೇಶ್ವರ ಆದಿ ಶಂಕರಾಚಾರ್ಯರ ಜ್ಞಾನದ ಸ್ಥಳವಾಗಿತ್ತು. ಆದ್ದರಿಂದ ಅವರ ಭವ್ಯವಾದ ಪ್ರತಿಮೆಯನ್ನು ಇಲ್ಲಿ ಸ್ಥಾಪಿಸಲಾಗಿದೆ. ಶಿವನಿಗೆ ಸಮರ್ಪಿತವಾಗಿರುವ 12 ಜ್ಯೋತಿರ್ಲಿಂಗಗಳಲ್ಲಿ ಒಂದು ಓಂಕಾರೇಶ್ವರದಲ್ಲಿರುವುದಕ್ಕೆ ಈ ಸ್ಥಳ ಇನ್ನಷ್ಟು ವಿಶೇಷತೆಯನ್ನು ಪಡೆದುಕೊಂಡಿದೆ. ಎಂಟನೇ ಶತಮಾನದ ತತ್ವಜ್ಞಾನಿ ಮತ್ತು ಹಿಂದೂ ಧರ್ಮದಲ್ಲಿ ಪೂಜಿಸಲ್ಪಟ್ಟ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯನ್ನು ಏಕತೆಯ ಪ್ರತಿಮೆ ಎಂದು ಹೆಸರಿಸಲಾಗಿದೆ.
ಈ ಬೃಹತ್ ಪ್ರತಿಮೆಯು ನರ್ಮದಾ ನದಿಯ ದಡದಲ್ಲಿರುವ ಸುಂದರವಾದ ಬೆಟ್ಟದ ಮೇಲೆ ನೆಲೆಗೊಂಡಿದೆ. ಸೆಪ್ಟೆಂಬರ್ 18 ರಂದು ಭವ್ಯ ಪ್ರತಿಮೆಯನ್ನು ಸಿಎಂ ಅನಾವರಣ ಮಾಡಬೇಕಿತ್ತು. ಆದರೆ ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ಕ್ಕೆ ಮರು ನಿಗದಿಪಡಿಸಲಾಯಿತು.
ಈ ಪ್ರತಿಮೆ ಹಳೆಯ ದೇವಾಲಯಗಳ ವಾಸ್ತುಶಿಲ್ಪ ಶೈಲಿಯಲ್ಲಿದೆ. ಮೂಸಿಯಂನಲ್ಲಿ 3D ಹೊಲೊಗ್ರಾಮ್ ಪ್ರೊಜೆಕ್ಷನ್ ಗ್ಯಾಲರಿಗಳನ್ನು ಇಲ್ಲಿ ಕಾಣಬಹುದು. ತರಬೇತಿ ಕೇಂದ್ರವನ್ನು ಆಚಾರ್ಯರ ತತ್ವಗಳನ್ನು ವಿವರಿಸಲು ಮತ್ತು ಹಂಚಿಕೊಳ್ಳಲು ಕೇಂದ್ರವಾಗಿ ನಿರ್ಮಿಸಲಾಗಿದೆ.

ಕೇರಳದಲ್ಲಿ ಜನಿಸಿದ ಶಂಕರಾಚಾರ್ಯರು ತಮ್ಮ ಬಾಲ್ಯದಲ್ಲಿ ಸನ್ಯಾಸ ಸ್ವೀಕರಿಸಿದ ನಂತರ ಓಂಕಾರೇಶ್ವರವನ್ನು ತಲುಪಿದರು. ಅಲ್ಲಿ ಅವರು ತಮ್ಮ ಗುರು ಗೋವಿಂದ ಭಗವತ್ಪಾದರನ್ನು ಭೇಟಿಯಾದರು. ಅವರು ನಾಲ್ಕು ವರ್ಷಗಳ ಕಾಲ ಈ ಧಾರ್ಮಿಕ ನಗರದಲ್ಲಿ ನೆಲೆಸುವ ಮೂಲಕ ವಿದ್ಯೆಯನ್ನು ಪಡೆದರು ಎಂದು ನಂಬಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಶಂಕರಾಚಾರ್ಯರು ಅದ್ವೈತ ವೇದಾಂತ ತತ್ತ್ವವನ್ನು ಜನರಿಗೆ ಹರಡಲು 12 ನೇ ವಯಸ್ಸಿನಲ್ಲಿ ಓಂಕಾರೇಶ್ವರದೊಂದಿಗೆ ದೇಶದ ಇತರ ಭಾಗಗಳಿಗೂ ಅವರು ತೆರಳಿದರು.
ಆಚಾರ್ಯ ಶಂಕರ್ ಕಲ್ಚರಲ್ ಯೂನಿಟಿ ಟ್ರಸ್ಟ್ ಮತ್ತು ಮಧ್ಯಪ್ರದೇಶ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (MPSTDC) ಮಾರ್ಗದರ್ಶನದಲ್ಲಿ ಪ್ರತಿಮೆಯನ್ನು ವಿನ್ಯಾಸಗೊಳಿಸಲಾಗಿದೆ. ಏಕತೆಯ ಪ್ರತಿಮೆಯು ಆದಿ ಶಂಕರಾಚಾರ್ಯರ ಪರಂಪರೆ ಮತ್ತು ಅವರ ಬೋಧನೆಗಳನ್ನು ಪ್ರತಿಬಿಂಬಿಸುತ್ತದೆ. ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಈ ಹಿಂದೆ ಓಂಕಾರೇಶ್ವರದಲ್ಲಿರುವ ವಸ್ತುಸಂಗ್ರಹಾಲಯದ ಜೊತೆಗೆ ಆದಿ ಶಂಕರಾಚಾರ್ಯರ ಪ್ರತಿಮೆಗಾಗಿ 2,141.85 ಕೋಟಿ ರೂಪಾಯಿ ಯೋಜನೆಗೆ ಅನುಮೋದನೆ ನೀಡಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications