ಭಾರತ: 10ನೇ ಬಾರಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ
ನವದೆಹಲಿ, ಫೆಬ್ರವರಿ 10: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರೆಪೋ ದರ ಬದಲಾವಣೆ ಮಾಡದಿರಲು ನಿರ್ಧರಿಸಿದ ಹಿನ್ನೆಲೆ ರೆಪೋ ದರ ಶೇಕಡಾ 4ರಷ್ಟಾಗಿಯೇ ಉಳಿದುಕೊಂಡಿದೆ.
ದೇಶದ ಆರ್ಥಿಕತೆಯು ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದರೂ ರೆಪೋ ದರವನ್ನು ಬದಲಾವಣೆ ಮಾಡದಿರಲು ಆರ್ಬಿಐ ತೀರ್ಮಾನಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸತತ 10ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡಿರುವುದನ್ನು ಇಲ್ಲಿ ಉಲ್ಲೇಖಿಸಿದೆ. ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಬಜೆಟ್ 2022 ಮಂಡಿಸಿದ ನಂತರ ಇದು ಮೊದಲ ಹಣಕಾಸು ನೀತಿ ಸಮಿತಿ ಸಭೆಯಾಗಿದೆ.
ಕಳೆದ ಮೇ 2020 ರಲ್ಲಿ, ಬಡ್ಡಿದರವನ್ನು ಐತಿಹಾಸಿಕ ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸುವ ಮೂಲಕ ಬೇಡಿಕೆ ಹೆಚ್ಚಿಸಲು ಕೇಂದ್ರ ಬ್ಯಾಂಕ್ ತನ್ನ ಪಾಲಿಸಿ ರೆಪೋ ದರ ಅಥವಾ ಅಲ್ಪಾವಧಿಯ ಸಾಲದ ದರವನ್ನು ಪರಿಷ್ಕರಿಸಿತ್ತು.

ರೆಪೋ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ಸಮ್ಮತಿ:
ಹಣಕಾಸು ನೀತಿ ಸಮಿತಿಯು ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ಅನುಮತಿಸಲಾಗಿದೆ. ಆರ್ಥಿಕೆಯ ಬೆಳವಣಿಗೆಯನ್ನು ವೃದ್ಧಿಸುವ ಮತ್ತು ಹಣದುಬ್ಬರ ನಿಯಂತ್ರಿಸುವುದಕ್ಕೆ ಈ ಹೊಂದಾಣಿಕೆಯ ನಿಲುವು ಮುಂದುವರಿಸಲಾಗುತ್ತಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ. ರಿವರ್ಸ್ ರೆಪೊ ದರವನ್ನು ಶೇ. 3.35% ನಲ್ಲಿ ಬದಲಾಯಿಸದೆ ಉಳಿಸಿಕೊಳ್ಳಲಾಗಿದ್ದು, ಆದಾಗ್ಯೂ, ಅಪೆಕ್ಸ್ ಬ್ಯಾಂಕ್ ರಿವರ್ಸ್ ರೆಪೊ ದರವನ್ನು 15-40 ಬೇಸಿಸ್ ಪಾಯಿಂಟ್ಗಳಷ್ಟು (ಬಿಪಿಎಸ್) ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿತ್ತು.
ಹಣದುಬ್ಬರ ಮತ್ತು ಬೆಳವಣಿಗೆಯ ದೃಷ್ಟಿಕೋನ:
"ಒಟ್ಟಾರೆ ಹಣದುಬ್ಬರ ಮತ್ತು ಬೆಳವಣಿಗೆಯ ದೃಷ್ಟಿಕೋನವನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ನಿರ್ದಿಷ್ಟವಾಗಿ ಹಣದುಬ್ಬರ ದೃಷ್ಟಿಕೋನ ಸುಧಾರಿಸಲಾಗುತ್ತದೆ. ಓಮಿಕ್ರಾನ್ ಸೃಷ್ಟಿಸಿದ ಅನಿಶ್ಚಿತತೆ ಸಂಬಂಧಿಸಿದಂತೆ ಸುದೀರ್ಘ ಮತ್ತು ವಿಶಾಲ ದೃಷ್ಟಿಕೋನದ ಆಧಾರದಲ್ಲಿ ಚೇತರಿಕೆಗೆ ನಿರಂತರ ಬೆಂಬಲ ನೀಡಲಾಗುವುದು ಎಂದು ಹಣಕಾಸು ನೀತಿ ಸಮಿತಿ ಅಭಿಪ್ರಾಯಪಟ್ಟಿರುವುದಾಗಿ ಆರ್ಬಿಐ ಮುಖ್ಯಸ್ಥರು ಹೇಳಿದ್ದಾರೆ.
ಗ್ರಾಹಕ ಬೆಲೆ ಸೂಚ್ಯಂಕ-ಆಧಾರಿತ ಚಿಲ್ಲರೆ ಹಣದುಬ್ಬರವು FY23 ರ ದ್ವಿತೀಯಾರ್ಧದಲ್ಲಿ 4% ಗುರಿಗೆ ಹತ್ತಿರವಾಗುವ ನಿರೀಕ್ಷೆಯಿದೆ ಮತ್ತು ವಿತ್ತೀಯ ನೀತಿಗೆ ಅನುಕೂಲಕರವಾಗಿ ಉಳಿಯಲು ಅವಕಾಶವನ್ನು ಒದಗಿಸುತ್ತದೆ ಎಂದು RBI ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications