ಭಾರತ: 10ನೇ ಬಾರಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ
ನವದೆಹಲಿ, ಫೆಬ್ರವರಿ 10: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರೆಪೋ ದರ ಬದಲಾವಣೆ ಮಾಡದಿರಲು ನಿರ್ಧರಿಸಿದ ಹಿನ್ನೆಲೆ ರೆಪೋ ದರ ಶೇಕಡಾ 4ರಷ್ಟಾಗಿಯೇ ಉಳಿದುಕೊಂಡಿದೆ.
ದೇಶದ ಆರ್ಥಿಕತೆಯು ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದರೂ ರೆಪೋ ದರವನ್ನು ಬದಲಾವಣೆ ಮಾಡದಿರಲು ಆರ್ಬಿಐ ತೀರ್ಮಾನಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸತತ 10ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡಿರುವುದನ್ನು ಇಲ್ಲಿ ಉಲ್ಲೇಖಿಸಿದೆ. ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಬಜೆಟ್ 2022 ಮಂಡಿಸಿದ ನಂತರ ಇದು ಮೊದಲ ಹಣಕಾಸು ನೀತಿ ಸಮಿತಿ ಸಭೆಯಾಗಿದೆ.
ಕಳೆದ ಮೇ 2020 ರಲ್ಲಿ, ಬಡ್ಡಿದರವನ್ನು ಐತಿಹಾಸಿಕ ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸುವ ಮೂಲಕ ಬೇಡಿಕೆ ಹೆಚ್ಚಿಸಲು ಕೇಂದ್ರ ಬ್ಯಾಂಕ್ ತನ್ನ ಪಾಲಿಸಿ ರೆಪೋ ದರ ಅಥವಾ ಅಲ್ಪಾವಧಿಯ ಸಾಲದ ದರವನ್ನು ಪರಿಷ್ಕರಿಸಿತ್ತು.

ರೆಪೋ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ಸಮ್ಮತಿ:
ಹಣಕಾಸು ನೀತಿ ಸಮಿತಿಯು ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ಅನುಮತಿಸಲಾಗಿದೆ. ಆರ್ಥಿಕೆಯ ಬೆಳವಣಿಗೆಯನ್ನು ವೃದ್ಧಿಸುವ ಮತ್ತು ಹಣದುಬ್ಬರ ನಿಯಂತ್ರಿಸುವುದಕ್ಕೆ ಈ ಹೊಂದಾಣಿಕೆಯ ನಿಲುವು ಮುಂದುವರಿಸಲಾಗುತ್ತಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ. ರಿವರ್ಸ್ ರೆಪೊ ದರವನ್ನು ಶೇ. 3.35% ನಲ್ಲಿ ಬದಲಾಯಿಸದೆ ಉಳಿಸಿಕೊಳ್ಳಲಾಗಿದ್ದು, ಆದಾಗ್ಯೂ, ಅಪೆಕ್ಸ್ ಬ್ಯಾಂಕ್ ರಿವರ್ಸ್ ರೆಪೊ ದರವನ್ನು 15-40 ಬೇಸಿಸ್ ಪಾಯಿಂಟ್ಗಳಷ್ಟು (ಬಿಪಿಎಸ್) ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿತ್ತು.
ಹಣದುಬ್ಬರ ಮತ್ತು ಬೆಳವಣಿಗೆಯ ದೃಷ್ಟಿಕೋನ:
"ಒಟ್ಟಾರೆ ಹಣದುಬ್ಬರ ಮತ್ತು ಬೆಳವಣಿಗೆಯ ದೃಷ್ಟಿಕೋನವನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ನಿರ್ದಿಷ್ಟವಾಗಿ ಹಣದುಬ್ಬರ ದೃಷ್ಟಿಕೋನ ಸುಧಾರಿಸಲಾಗುತ್ತದೆ. ಓಮಿಕ್ರಾನ್ ಸೃಷ್ಟಿಸಿದ ಅನಿಶ್ಚಿತತೆ ಸಂಬಂಧಿಸಿದಂತೆ ಸುದೀರ್ಘ ಮತ್ತು ವಿಶಾಲ ದೃಷ್ಟಿಕೋನದ ಆಧಾರದಲ್ಲಿ ಚೇತರಿಕೆಗೆ ನಿರಂತರ ಬೆಂಬಲ ನೀಡಲಾಗುವುದು ಎಂದು ಹಣಕಾಸು ನೀತಿ ಸಮಿತಿ ಅಭಿಪ್ರಾಯಪಟ್ಟಿರುವುದಾಗಿ ಆರ್ಬಿಐ ಮುಖ್ಯಸ್ಥರು ಹೇಳಿದ್ದಾರೆ.
ಗ್ರಾಹಕ ಬೆಲೆ ಸೂಚ್ಯಂಕ-ಆಧಾರಿತ ಚಿಲ್ಲರೆ ಹಣದುಬ್ಬರವು FY23 ರ ದ್ವಿತೀಯಾರ್ಧದಲ್ಲಿ 4% ಗುರಿಗೆ ಹತ್ತಿರವಾಗುವ ನಿರೀಕ್ಷೆಯಿದೆ ಮತ್ತು ವಿತ್ತೀಯ ನೀತಿಗೆ ಅನುಕೂಲಕರವಾಗಿ ಉಳಿಯಲು ಅವಕಾಶವನ್ನು ಒದಗಿಸುತ್ತದೆ ಎಂದು RBI ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications