ಜನವರಿ 3 ರವರೆಗೆ ವಿದೇಶಗಳಿಂದ ಬಂದ 11 ಮಂದಿಯಲ್ಲಿ ಓಮಿಕ್ರಾನ್ ಉಪತಳಿ ಪತ್ತೆ
ನವದೆಹಲಿ, ಜ. 05: ಡಿಸೆಂಬರ್ 24 ಮತ್ತು ಜನವರಿ 3 ರ ನಡುವೆ ವಿದೇಶಗಳಿಂದ ಬಂದ ಹನ್ನೊಂದು ಮಂದಿಯಲ್ಲಿ ಓಮಿಕ್ರಾನ್ ಉಪ ತಳಿ ಕಂಡು ಬಂದಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಡಿಸೆಂಬರ್ 24 ಮತ್ತು ಜನವರಿ 3 ರ ನಡುವೆ ಕೊರೊನಾ ಸೋಂಕಿಗೆ ಒಳಗಾಗಿರುವ 124 ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಹನ್ನೊಂದು ಮಂದಿಯಲ್ಲಿ ಓಮಿಕ್ರಾಮ್ ರೂಪಾಂತರಗಳು ಕಂಡು ಬಂದಿವೆ. ಈ ಸೋಂಕು ಭಾರತದಲ್ಲಿ ಈ ಹಿಂದೆಯೇ ವರದಿಯಾಗಿದೆ.
ಈ ಅವಧಿಯಲ್ಲಿ 19,227 ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳು, ಸಮುದ್ರ ಬಂದರುಗಳು ಮತ್ತು ಭೂಭಾಗಗಲ್ಲಿ ಪರೀಕ್ಷಿಸಲಾಗಿದೆ. ಅವರಲ್ಲಿ 124 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಸೋಂಕಿಗೆ ಒಳಗಾಗಿರುವವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ತಿಳಿಸಿದೆ.

124 ಕೋವಿಡ್ ಪಾಸಿಟಿವ್ ಮಾದರಿಗಳಲ್ಲಿ 40 ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶಗಳನ್ನು ಸ್ವೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅದರಲ್ಲಿ 14 ಮಾದರಿಗಳಲ್ಲಿ XBB ಮತ್ತು ಒಂದು ಮಾದರಿಯಲ್ಲಿ BF 7.4.1 ಉಪತಳಿಗಳು ಕಂಡುಬಂದಿದೆ.
ಇನ್ನು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ದೇಶದ ಜನರು ಅನಗತ್ಯವಾಗಿ ಭಯಭೀತರಾಗಬೇಡಿ. ಆದರೆ ಜಾಗರೂಕರಾಗಿರಿ, ಸರ್ಕಾರ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಿ ಮತ್ತು ಕೋವಿಡ್ಗೆ ಸಂಬಂಧಿಸಿದ ತಪ್ಪುದಾರಿಗೆಳೆಯುವ ವರದಿಗಳಿಂದ ದೂರವಿರಿ ಎಂದು ಮನವಿ ಮಾಡಿದ್ದಾರೆ.
ಡಿಸೆಂಬರ್ 24 ರಿಂದ, ಪ್ರತಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಪ್ರಯಾಣಿಕರಲ್ಲಿ ಶೇಕಡಾ ಎರಡರಷ್ಟು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಗಳನ್ನು ಸರ್ಕಾರವು ಕಡ್ಡಾಯಗೊಳಿಸಿದೆ. ಇದಲ್ಲದೆ, ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್ನಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಜನವರಿ 1 ರಿಂದ ಕೋವಿಡ್ ನೆಗೆಟಿವ್ ವರದಿಗಳನ್ನು ನೀಡುವುದನ್ನು ಕಡ್ಡಾಯವಾಗಿದೆ.
ಭಾರತಕ್ಕೆ ಪ್ರಯಾಣವನ್ನು ಕೈಗೊಳ್ಳುವ 72 ಗಂಟೆಗಳ ಮೊದಲು ಪರೀಕ್ಷೆಯನ್ನು ನಡೆಸಬೇಕು. ಆರ್ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ನಿರ್ಗಮನದ ಮೊದಲು ಏರ್ ಸುವಿಧಾ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಆದೇಶಿಸಲಾಗಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications