ತ್ರಿಪುರಾ ಸಂಪುಟ ರಚನೆ: 11 ಶಾಸಕರಿಂದ ಪ್ರಮಾಣ ವಚನ ಸ್ವೀಕಾರ
ಅಗರ್ತಲಾ, ಮೇ 16; ತ್ರಿಪುರದ ನೂತನ ಮುಖ್ಯಮಂತ್ರಿ ಮಾಣಿಕ್ ಸಾಹ ಆಯ್ಕೆಯಾದ ಬೆನ್ನಲ್ಲೇ , ಒಟ್ಟು 11 ಮಂದಿ ಶಾಸಕರು ಸೋಮವಾರ ಅಗರ್ತಲಾದ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ಮಾಣಿಕ್ ಸಾಹಾ, ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್ಎನ್ ಆರ್ಯ ಅವರು ಸಂಪುಟ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದರಲ್ಲಿ ಬಿಜೆಪಿಯಿಂದ 9 ಶಾಸಕರು ಮತ್ತು ಇಂಡಿಜೆನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (IPFT)ಪಕ್ಷದ ಇಬ್ಬರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾನುವಾರ ಮಾಣಿಕ್ ಸಾಹ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಂಪುಟಕ್ಕೆ ಸೇರಿದ 11 ಸಚಿವರು
ಬಿಜೆಪಿಯಿಂದ ಜಿಷ್ಣು ದೇವ್ ವರ್ಮಾ(ಉಪಮುಖ್ಯಮಂತ್ರಿ, ರತನ್ ಲಾಲ್ ನಾಥ್, ಪ್ರಣಜಿತ್ ಸಿಂಘಾ ರಾಯ್, ಮನೋಜ್ ಕಾಂತಿ ದೇಬ್, ಸಂತಾನಾ ಚಕ್ಮಾ, ರಾಮ್ ಪ್ರಸಾದ್ ಪಾಲ್, ಭಗಬನ್ ಚಂದ್ರ ದಾಸ್, ಸುಶಾಂತ ಚೌಧರಿ, ರಾಮಪಾದ ಜಮಾತಿಯಾ ಮತ್ತು IPFT ಯಿಂದ ನರೇಂದ್ರ ಚಂದ್ರ ದೆಬ್ಬರ್ಮಾ ಮತ್ತು ಪ್ರೇಮ್ ಕುಮಾರ್ ರಿಯಾಂಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನ ಸಭೆ ಚುನಾವಣೆಗೆ ಒಂದು ವರ್ಷವಿರುವಾಗ ಸಿಎಂ ಬದಲಾವಣೆ
ವಿಧಾನ ಸಭೆ ಚುನಾವಣೆಗೆ ಕೇವಲ ಒಂದು ವರ್ಷ ಇರುವಾಗ ಬಿಜೆಪಿ ನಾಯಕತ್ವ ಬದಲಾವಣೆ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಚುನಾವಣೆ ನಡೆಯುವ ರಾಜ್ಯದಲ್ಲಿ ನಾಯಕನ ಬದಲಾವಣೆ ಮಾಡಿ ತನ್ನ ಹಳೆಯ ಮಂತ್ರವನ್ನು ಜಪಿಸಿದೆ.

ಆದರೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿರುವ ಮಾಣಿಕ್ ಸಾಹರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಿದ್ದು, ತ್ರಿಪುರದ ಬಿಜೆಪಿ ಘಟಕಕ್ಕೆ ಆಶ್ಚರ್ಯವನ್ನು ಉಂಟುಮಾಡಿದೆ. ಸಾಹ ರಾಜ್ಯಸಭಾ ಸಂಸದ ಮತ್ತು ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷ ಮಾರ್ಚ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಸಾಹ 2016ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದರು. 2020ರಲ್ಲಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ನಂತರ ಈ ವರ್ಷದ ಮಾರ್ಚ್ನಲ್ಲಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು.
(ಒನ್ಇಂಡಿಯಾ ಸುದ್ದಿ)
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications