2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣ
ನವದೆಹಲಿ, ಏಪ್ರಿಲ್ 24: 2020ರಲ್ಲಿ ಭಾರತದಲ್ಲಿ ತೀವ್ರವಾಗಿ ಕೊರೊನಾ ಸೋಂಕು ಬಾಧಿಸುತ್ತಿತ್ತು. ಈ ಸಂದರ್ಭದಲ್ಲಿ ದೇಶದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಶೇ. 83.6 ರಷ್ಟು ಕಡಿಮೆ ಮಾಡುವಲ್ಲಿ ದೇಶವು ಗಮನಾರ್ಹ ಯಶಸ್ಸನ್ನು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹೇಳಿದರು.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಲೇರಿಯಾ ನಿರ್ಮೂಲನೆ ಕುರಿತು 'ಶೂನ್ಯದೆಡೆಗೆ' ವೇದಿಕೆಯ ಅಧ್ಯಕ್ಷತೆ ವಹಿಸಿದ್ದ ವರ್ಧನ್, ಏಪ್ರಿಲ್ 25 ಅನ್ನು ಪ್ರತಿವರ್ಷ ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ನಮ್ಮ ಗುರಿ 'ಶೂನ್ಯದೆಡೆಗೆ ಮಲೇರಿಯಾ'ವನ್ನು ತರುವುದೇ ಆಗಿದೆ ಎಂದರು.

2030ರ ವೇಳೆಗೆ ಭಾರತವನ್ನು ಮಲೇರಿಯಾದಿಂದ ಮುಕ್ತಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು ವಿಶ್ವ ಮಲೇರಿಯಾ ವರದಿಗಳ ಪ್ರಕಾರ 2018, 2019 ಮತ್ತು 2020ರ ಈ ನಿಟ್ಟಿನಲ್ಲಿ ದೇಶವು ಉತ್ತಮ ಸಾಧನೆ ಮಾಡಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಭಾರತದ ಯಶಸ್ಸಿಗೆ ರಾಜಕೀಯ ಬದ್ಧತೆಯನ್ನು ಪ್ರಶಂಸಿಸಿದೆ. ಸರಿಯಾದ ತಾಂತ್ರಿಕ ಕ್ರಮಗಳನ್ನು ಬಳಸಿಕೊಂಡು, ಅದರ ಜೊತೆಗೆ ದೇಶೀಯ ಸಂಪತ್ತು ಕ್ರೋಢಿಕರಣ ಮಾಡಿ ಮಲೇರಿಯಾ ವಿರುದ್ಧದ ಹೋರಾಟಕ್ಕೆ ಪರಿಣಾಕಾರಿ ಬಳಸಿಕೊಳ್ಳಲಾಗಿದೆ ಎಂದು ಹೇಳಿದೆ ಎಂದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications