12710 ಗುತ್ತಿಗೆ ಶಿಕ್ಷಕರ ಉದ್ಯೋಗವನ್ನು ಖಾಯಂಗೊಳಿಸಿದ ಪಂಜಾಬ್ ಸರ್ಕಾರ!
ದೆಹಲಿ, ಜುಲೈ 29: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ 12,710 ಗುತ್ತಿಗೆ ಶಿಕ್ಷಕರನ್ನು ಕಾಯಂಗೊಳಿಸಿ, ರಾಜ್ಯ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಹುದ್ದೆಯನ್ನು ಖಾಯಂಗೊಳಿಸುವ ಪತ್ರಗಳನ್ನು ಹಸ್ತಾಂತರಿಸಿದ್ದಾರೆ.
ಸ್ಥಳೀಯ ಟ್ಯಾಗೋರ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಗವಂತ್ ಮಾನ್ ಅವರು ಇದು 'ಐತಿಹಾಸಿಕ ದಿನ' ಎಂದು ಕರೆದಿದ್ದಾರೆ. ಅಧಿಕಾರ ವಹಿಸಿಕೊಂಡ ವೇಳೆ, ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸುವ ಮೂಲಕ ಈ ಶಿಕ್ಷಕರ ಸೇವೆಗಳನ್ನು ಖಾಯಂಗೊಳಿಸಲು ಒತ್ತು ನೀಡುವುದಾಗಿ ಹೇಳಿದ್ದಾರೆ. ಪ್ರತಿಯೊಬ್ಬ ಉದ್ಯೋಗಿಯ ಸಮಸ್ಯೆಯನ್ನು ಪರಿಹರಿಸಲಾಗುವುದು, ಇದಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

ಇನ್ನೂ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಶೀಘ್ರವೇ ಬಸ್ ಸೇವೆ ಆರಂಭಿಸಲಿದೆ. 12,000 ವಿದ್ಯಾರ್ಥಿನಿಯರು ಮತ್ತು 8,000 ವಿದ್ಯಾರ್ಥಿಗಳು ಸೇರಿದಂತೆ 20,000 ವಿದ್ಯಾರ್ಥಿಗಳಿಗೆ ಯೋಜನೆಯನ್ನು ಪ್ರಾರಂಭಿಸಲಾಗುವುದು. ಈ ಬಸ್ಗಳಲ್ಲಿ ಜಿಪಿಎಸ್ ಅಳವಡಿಸಲಾಗಿದ್ದು, ಹೆಣ್ಣು ಮಕ್ಕಳ ಪಾಲಕರು ಬಸ್ನ ಚಲನವಲನದ ಮೇಲೆ ನಿಗಾ ಇಡಬಹುದು ಎಂದು ಹೇಳಿದ ಮಾನ್, ಈ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಹೆಜ್ಜೆಯಾಗಿದೆ ಎಂದು ಹೇಳಿದರು.
ಅಧಿಕೃತ ಹೇಳಿಕೆಯ ಪ್ರಕಾರ, ಬಿಎ ಪಾಸ್ ಶಿಕ್ಷಣ ಒದಗಿಸುವವರು (ಸಹ ಶಿಕ್ಷಕರು) ಸೇರಿದಂತೆ 12,710 ಶಿಕ್ಷಕರು ಈವರೆಗೂ ಮಾಸಿಕ 9,500 ರೂ.ಗಳನ್ನು ಪಡೆಯುತ್ತಿದ್ದರು. ಈ ಅವರ ವೇತನ 20,500 ರೂಪಾಯಿ ಆಗಿರಲಿದೆ. ಆದರೆ ಪ್ರಾಥಮಿಕ ಶಿಕ್ಷಕರ ತರಬೇತಿ ಮತ್ತು ನರ್ಸರಿ ಶಿಕ್ಷಕರ ತರಬೇತಿ ಅರ್ಹತೆ ಹೊಂದಿರುವ ಶಿಕ್ಷಕರು 22 ಸಾವಿರ ರೂಪಾಯಿ ವೇತನ ಪಡೆಯಲಿದ್ದಾರೆ.
ಈ ಹಿಂದೆ ಅವರಿಗೆ 10,250 ರೂಪಾಯಿ ಸಿಗುತ್ತಿತ್ತು. ಅದೇ ರೀತಿ ಪ್ರಸ್ತುತ 11,000 ರೂಪಾಯಿ ಪಡೆಯುತ್ತಿರುವ ಬಿಎ/ಎಂಎ ಬಿಎಡ್ ಪದವಿ ಹೊಂದಿರುವ ಶಿಕ್ಷಕರಿಗೆ ಇನ್ನು ಮುಂದೆ ಮಾಸಿಕ 23,500 ರೂಪಾಯಿ ವೇತನ ಸಿಗಲಿದೆ. ಪ್ರತಿ ವರ್ಷ ಶಿಕ್ಷಕರಿಗೆ ಶೇ 5ರಷ್ಟು ವೇತನ ಹೆಚ್ಚಳದೊಂದಿಗೆ ಇತರೆ ಸವಲತ್ತುಗಳನ್ನು ನೀಡಲಾಗುವುದು ಎಂದು ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.
ಶಿಕ್ಷಕ ಬಂಧುಗಳು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ನಾನು ಇದ್ದೇನೆ ಎಂದು ಪ್ರತಿಪಾದಿಸಿದ ಮಾನ್, ಶಿಕ್ಷಕರ ಮಗನಾಗಿರುವ ತನಗೆ ಶಿಕ್ಷಕರ ಸಮಸ್ಯೆಗಳನ್ನು ಚೆನ್ನಾಗಿ ತಿಳಿದಿತ್ತು, ಅವೆಲ್ಲವನ್ನೂ ಪರಿಹರಿಸುವ ಕರ್ತವ್ಯ ಬದ್ಧವಾಗಿದೆ. ರಾಜ್ಯದ ಬೊಕ್ಕಸ ಜನರಿಗೆ ಸೇರಿದ್ದು, ಪ್ರತಿಯೊಂದು ಪೈಸೆಯನ್ನು ಸಮಾಜದ ಪ್ರತಿಯೊಂದು ಸ್ತರದ ಶ್ರೇಯೋಭಿವೃದ್ಧಿಗೆ ವಿನಿಯೋಗ ಮಾಡಲಾಗುವುದು ಎಂದರು.
ಇನ್ನೂ ಶಿಕ್ಷಕರು ಬೋಧನಾ ಕೆಲಸಕ್ಕೆ ಮಾತ್ರ ಸೇವೆ ಸಲ್ಲಿಸುತ್ತಾರೆ, ಅವರಿಗೆ ಯಾವುದೇ ಬೋಧಕೇತರ ಕರ್ತವ್ಯವನ್ನು ನಿಯೋಜಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ 66,000 ಶಿಕ್ಷಕರನ್ನು ಒತ್ತಾಯಿಸಿದೆ ಎಂದು ಮುಖ್ಯಮಂತ್ರಿ ಹೇಳಿದ್ದು, ಆದರೆ ಅವರು ನಿರಾಕರಿಸಿದೆ. ಮತ್ತು ಈ ಉದ್ದೇಶಕ್ಕಾಗಿ ನಿರುದ್ಯೋಗಿ ಯುವಕರನ್ನು ಸೇರಿಸಿಕೊಳ್ಳಲು ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications