ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ IISC ಬೆಂಗಳೂರು ಸೇರಿ 12 ಶಿಕ್ಷಣ ಸಂಸ್ಥೆಗಳ ಹೆಸರು
ನವದೆಹಲಿ, ಮಾರ್ಚ್ 05: ಭಾರತ ಸರ್ಕಾರ ಉನ್ನತ ಶಿಕ್ಷಣದಲ್ಲಿ ಮಾಡಿರುವ ಸುಧಾರಣೆಯಿಂದಾಗಿ ಭಾರತೀಯ ಸಂಸ್ಥೆಗಳಿಗೆ ವಿಶ್ವಮನ್ನಣೆ ಸಿಕ್ಕಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ವಿಶ್ವ ಶ್ರೇಯಾಂಕದಲ್ಲಿ ಭಾರತದ 12 ಶಿಕ್ಷಣ ಸಂಸ್ಥೆಗಳು ಮನ್ನಣೆ ಗಳಿಸಿವೆ. 100 ಕ್ಯೂಎಸ್ ವಿಶ್ವ ವಿದ್ಯಾಲಯ ಶ್ರೇಯಾಂಕದಲ್ಲಿ 12 ಭಾರತೀಯ ಸಂಸ್ಥೆಗಳು ಕೂಡ ಸೇರಿವೆ.
ಅದರಲ್ಲಿ ಐಐಟಿ ಬಾಂಬೆ, ಐಐಟಿ ದೆಹಲಿ, ಐಐಟಿ ಮದ್ರಾಸ್, ಐಐಟಿ ಖರಗ್ಪುರ್, ಐಐಎಸ್ಸಿ ಬೆಂಗಳೂರು, ಐಐಟಿ ಗುವಾಹಟಿ, ಐಐಎಂ ಬೆಂಗಳೂರು, ಐಐಎಂ ಅಹಮದಾಬಾದ್, ಜವಾಹರ್ಲಾಲ್ ನೆಹರೂ ಯೂನಿವರ್ಸಿಟಿ, ಅಣ್ಣಾ ಯೂನಿವರ್ಸಿಟಿ, ದೆಹಲಿ ಯೂನಿವರ್ಸಿಟಿ ಹಾಗೂ ಒಪಿ ಜಿಂದಾಲ್ ಯೂನಿವರ್ಸಿಟಿ ವಿಶ್ವ ಮನ್ನಣೆ ಪಡೆದಿವೆ.

ಇದರಲ್ಲಿ ವಿಶ್ವದ ಪೆಟ್ರೋಲಿಯಂ ಎಂಜಿನಿಯರಿಂಗ್ ಪೈಕಿ ಐಐಟಿ ಮದ್ರಾಸ್ 30ನೇ ಸ್ಥಾನ ಗಳಿಸಿದೆ. ಐಐಟಿ ಬಾಂಬೆ 41 ನೇ ಸ್ಥಾನ, ಐಐಟಿ ಖರಗ್ಪುರ್ 44ನೇ ಸ್ಥಾನ ಪಡೆದಿದೆ.
ದೆಹಲಿ ವಿಶ್ವವಿದ್ಯಾಲಯವು ವಿಶ್ವದ ಡೆವಲಪ್ಮೆಂಟ್ ಸ್ಟಡೀಸ್ನಲ್ಲಿ 50ನೇ ಸ್ಥಾನ ಗಳಿಸಿದೆ. ಕಳೆದ ಕೆಲವು ವರ್ಷಗಳಿಂದ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದೆ. ಇದೇ ಈ ಶಿಕ್ಷಣ ಸಂಶ್ಥೆಗಳ ವಿಶ್ವ ಮನ್ನಣೆಗೆ ಕಾರಣವಾಗಿದೆ.
ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು ರಾಷ್ಟ್ರದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಇಂದು ಭಾರತವು ವಿಶ್ವದಾದ್ಯಂತ ಅತಿ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಪ್ರಮುಖ ರಾಷ್ಟ್ರವಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಉನ್ನತ ಶಿಕ್ಷಣ ದಾಖಲಾತಿ ವಿಷಯದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications