ಛತ್ತೀಸ್ಗಢ: ಬಿಜಾಪುರ ಜಿಲ್ಲೆಯಲ್ಲಿ 12 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಛತ್ತಿಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಮಾವೋವಾದಿಗಳ ಜೊತೆ ಭದ್ರತಾ ಪಡೆಗಳು ನಡಸಿದ ಸಂಘರ್ಷ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದಕ್ಷಿಣ ಬಿಜಾಪುರದ ಕಾಡಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ.
ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದರು. ಸಂಜೆ ವೇಳೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ) ಗೆ ಸೇರಿದ ಸಿಬ್ಬಂದಿ, ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ - ಸಿಆರ್ಪಿಎಫ್ನ ಎಲೈಟ್ ಜಂಗಲ್ ವಾರ್ಫೇರ್ ಯೂನಿಟ್) ನ ಐದು ಬೆಟಾಲಿಯನ್ಗಳು ಮತ್ತು ಸಿಆರ್ಪಿಎಫ್ನ 229 ನೇ ಬೆಟಾಲಿಯನ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದವು.
ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
26 ಮಾವೋವಾದಿಗಳ ಎನ್ಕೌಂಟರ್
ಗುರುವಾರ 12 ಮಂದಿ ಎನ್ಕೌಂಟರ್ ಆಗುವ ಮೂಲಕ ಜನವರಿ ತಿಂಗಳಿನಲ್ಲಿ ಈವರೆಗೆ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ26 ಮಾವೊವಾದಿಗಳನ್ನು ಹೊಡೆದುರುಳಿಸಲಾಗಿದೆ. ಜನವರಿ 12ರಂದು ಬಿಜಾಪುರ ಜಿಲ್ಲೆಯ ಮುದ್ದೆಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಜೊತೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರನ್ನು ಹೊಡೆದುರುಳಿಸಲಾಗಿತ್ತು.
ಜನವರಿ 9 ರಂದು ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದರು. ಇದರಲ್ಲಿ ಸುಧಾರಿತ ಸ್ಫೋಟಗಳನ್ನು ತಯಾರಿಸುತ್ತಿದ್ದ ಮಹೇಶ್ ಕೋರ್ಸಾ ಕೂಡ ಈ ಎನ್ಕೌಂಟರ್ ನಲ್ಲಿ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಉಪಮುಖ್ಯಮಂತ್ರಿ ವಿಜಯ್ ಶರ್ಮಾ ನಕ್ಸಲ್ ವಿರೋಧಿ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದರು.
ಸುಕ್ಮಾ-ಬಿಜಾಪುರ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿಯಾಗಿ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಎನ್ಕೌಂಟರ್ ಸಂಭವಿಸಿದ್ದು, ರಾಜ್ಯದಲ್ಲಿ ನಕ್ಸಲರನ್ನು ನಿರ್ಮೂಲನೆ ಮಾಡಲು ಪ್ರಯತ್ನಿಸಲಾಗುತ್ತಿದೆ.
ಮಾರ್ಚ್ 2026ರ ವೇಳೆಗೆ ದೇಶದಲ್ಲಿ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡುವುದಾಗಿ ಅಮಿತ್ ಶಾ ಹೇಳಿದ್ದಾರೆ. ಛತ್ತಿಸ್ಗಢದಲ್ಲಿ ನಕ್ಸಲರಿಂದ ಹತ್ಯೆಗೀಡಾದವರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ, ನಕ್ಸಲರ ಅಂತ್ಯವಾಗುವವರೆಗೆ ಸುಮ್ಮನೆ ಬಿಡುವುದಿಲ್ಲ ಎಂದು ಜನವರಿ 6ರಂದು ಹೇಳಿದ್ದರು. 2024ರಲ್ಲಿ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಭದ್ರತಾ ಪಡೆಗಳು 219 ಮಾವೋವಾದಿಗಳನ್ನು ಹೊಡೆದುರುಳಿಸಿಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications