ಬಾಲಕಿ ಲೈಂಗಿಕ ದೌರ್ಜನ್ಯ, ಸಚಿವರ ಆಪ್ತನ ರಕ್ಷಣೆ ನಿಂತರೆ ಪೊಲೀಸರು?
ಆಂಧ್ರದ ನೆಲ್ಲೂರಿನಲ್ಲಿ ಹನ್ನೆರಡು ವರ್ಷದ ಬಾಲಕಿ ಮೇಲೆ ಅರವತ್ತೈದು ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯ ಪೋಷಕರೇ ಮೊದಲಿಗೆ ತಾವು ನೀಡಿದ್ದ ದೂರಿನ ವಿರುದ್ಧವಾದ ಹೇಳಿಕೆ ಕೊಡುತ್ತಿದ್ದಾರೆ
ನೆಲ್ಲೂರು, ಮಾರ್ಚ್ 27: ನೆಲ್ಲೂರಿನಲ್ಲಿ 12 ವರ್ಷದ ಬಾಲಕಿ ಮೇಲೆ 65 ವರ್ಷದ ವ್ಯಾಪಾರಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಾರ್ಟ್ ಮೆಂಟ್ ನಲ್ಲಿ ಬಾಲಕಿ ಮನೆಗೆಲಸ ಮಾಡಿಕೊಂಡಿದ್ದಳು. ಆರೋಪಿ ಪಶುಪುಲೇಟಿ ನರಸಿಂಹ ರಾವ್ ಕೂಡ ವಾಸವಿದ್ದದ್ದು ಅದೇ ಕಟ್ಟಡದಲ್ಲಿ.
ಸಂತ್ರಸ್ತೆಯ ತಂದೆ ಕೂಡ ಅದೇ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಆ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಅದೇ ಅಪಾರ್ಟ್ ಮೆಂಟ್ ನಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಾಲಕಿಗೆ ಚಾಕೊಲೇಟ್ ಹಾಗೂ ಬಿಸ್ಕತ್ ನ ಆಮಿಷ ಒಡ್ಡಿರುವ ಆರೋಪಿ ಅಪಾರ್ಟ್ ಮೆಟ್ ನ ಐದನೇ ಅಂತಸ್ತಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.[7 ಲೈಂಗಿಕ ದೌರ್ಜನ್ಯ ಕೇಸ್, ನರ್ಸರಿ ಶಾಲೆಗೆ ಬೀಗ ಜಡಿದ ಸರ್ಕಾರ]
ಮಗಳ ಬಟ್ಟೆ ಒಗೆಯುವ ಸಂದರ್ಭದಲ್ಲಿ ತಾಯಿಗೆ ರಕ್ತದ ಕಲೆಗಳು ಕಂಡುಬಂದವು ಎಂದು ದೂರಿನಲ್ಲಿ ತಿಳಿಸಿದ್ದರು. ಆದರೆ ಆ ನಂತರ ಹೇಳಿಕೆಯನ್ನು ಬದಲಾಯಿಸಿದ ಬಾಲಕಿ ಪೋಷಕರು, ಅಂಥ ಯಾವ ಘಟನೆ ನಡೆದಿಲ್ಲ ಎಂದಿದ್ದಾರೆ. ಆದರೂ ನೆಲ್ಲೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆದರೆ, ಮಕ್ಕಳ ಹಕ್ಕುಗಳ ಹೋರಾಟಗಾರ ಅಚ್ಯುತ ರಾವ್ ಪತ್ರಿಕಾಗೋಷ್ಠಿ ನಡೆಸಿ, ಆರೋಪಿಯು ಸಚಿವ ಪಿ.ನಾರಾಯಣ ಅವರ ಸಮೀಪವರ್ತಿ. ಆದ್ದರಿಂದಲೇ ಪೊಲೀಸರು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಂಥ ಪ್ರಕರಣವು ಜಾಮೀನುರಹಿತವಾದದ್ದು. ಆದರೂ ಈವರೆಗೆ ಆರೋಪಿಯ ಬಂಧನವಾಗಿಲ್ಲ ಎಂದು ಆರೋಪಿಸಿದ್ದಾರೆ.[ಬೆಳ್ಳಂದೂರಿನಲ್ಲಿ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ]
ಈ ಪ್ರಕರಣದಲ್ಲಿ ನಾವು ಹೈಕೋರ್ಟ್ ಮೆಟ್ಟಿಲೇರುತ್ತೇವೆ ಸಂತ್ರಸ್ತೆಯು ಅಪ್ರಾಪ್ತೆ. ಆಕೆ ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಳು. ಇದು ಕೂಡ ಬಾಲಕಾರ್ಮಿಕ ಕಾಯ್ದೆ ಅಡಿ ಪ್ರಕರಣ ಬರುತ್ತದೆ. ಅದ್ದರಿಂದ ಮುಖ್ಯಮಂತ್ರಿ ಹಾಗೂ ಪೊಲೀಸರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾವು ಮನವಿ ಮಾಡಿದ್ದೇವೆ ಎಂದು ಅಚ್ಯುತರಾವ್ ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications