ಮುಂಬೈ ದಾಳಿಗೆ 12 ವರ್ಷ: ರತನ್ ಟಾಟಾ ಭಾವುಕ ಬರಹ
ಮುಂಬೈ, ನವೆಂಬರ್ 26: ಮುಂಬೈ ಮೇಲೆ 26/11ರ ಭಯಾನಕ ಭಯೋತ್ಪಾದನಾ ದಾಳಿ ನಡೆದು ಇಂದಿಗೆ 12 ವರ್ಷ. ಆ ಕರಾಳ ಘಟನೆಯ ನೆನಪು ಮತ್ತು ಜನರ ರಕ್ಷಣೆಗಾಗಿ ಉಗ್ರರೊಂದಗೆ ಕಾದಾಡಿ ಜೀವತೆತ್ತ ಧೈರ್ಯಶಾಲಿ ಹುತಾತ್ಮರನ್ನು ದೇಶ ಇಂದು ಸ್ಮರಿಸುತ್ತಿದೆ.
ಖ್ಯಾತ ಉದ್ಯಮಿ ರತನ್ ಟಾಟಾ ಅವರು ಈ ಮಾರಕ ದಾಳಿಯನ್ನು ದೇಶ ಎಂದಿಗೂ ಮರೆಯಲು ಸಾಧ್ಯವಾಗದು ಎಂದಿದ್ದಾರೆ. ತಾಜ್ ಹೋಟೆಲ್ನ ಪೈಂಟಿಂಗ್ಅನ್ನು ಹಂಚಿಕೊಂಡಿರುವ ಅವರು ಭಾವನಾತ್ಮಕ ಬರಹವೊಂದನ್ನು ಬರೆದಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಜನರು ಮತ್ತು ಹುತಾತ್ಮರಾದ ಯೋಧರಿಗೆ ಅವರು ಗೌರವ ಸಲ್ಲಿಸಿದ್ದಾರೆ.
'ಇಂದಿಗೆ 12 ವರ್ಷಗಳ ಹಿಂದೆ ನಡೆದ ಭೀಕರ ವಿಧ್ವಂಸಕ ಕೃತ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ. ಆದರೆ ಇನ್ನಷ್ಟು ಸ್ಮರಣೀಯವಾಗಿರುವುದು ವೈವಿಧ್ಯಮಯ ಜನರು ಒಟ್ಟಾಗಿ ಬಂದು, ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಂದು ಮುಂಬೈ ಭಯೋತ್ಪಾದನೆ ಮತ್ತು ವಿಧ್ವಂಸಕತೆಯನ್ನು ಮಣಿಸಿದ್ದು.

ಇಂದು ನಾವು ನಾವು ಕಳೆದುಕೊಂಡವರ ಬಗ್ಗೆ ಶೋಕಿಸುತ್ತೇವೆ ಮತ್ತು ಶತ್ರುಗಳನ್ನು ಸೋಲಿಸಲು ಸಹಾಯ ಮಾಡಿದ ಯೋಧರ ತ್ಯಾಗವನ್ನು ಗೌರವಿಸುತ್ತೇವೆ. ಆದರೆ ನಾವು ಹೆಚ್ಚು ಶ್ಲಾಘಿಸಬೇಕಿರುವುದು ನಾವು ಪಾಲಿಸಿಕೊಂಡು ಬಂದ ಏಕತೆ ಮತ್ತು ಕರುಣೆಯ ಮನೋಭಾವ ಹಾಗೂ ಸಂವೇದನಾಶೀಲತೆಯನ್ನು. ಅದನ್ನು ನಾವು ಮುಂಬರುವ ವರ್ಷಗಳಲ್ಲಿಯೂ ಮುಂದುವರಿಸುತ್ತೇವೆ ಎಂಬ ವಿಶ್ವಾಸ ಹೊಂದಿದ್ದೇನೆ' ಎಂದು ರತನ್ ಟಾಟಾ ಹೇಳಿದ್ದಾರೆ.
ಹೊಸ ನೀತಿಗಳೊಂದಿಗೆ ಹೋರಾಟ:
26/11ರ ಮುಂಬೈ ದಾಳಿಯ ಗಾಯಗಳನ್ನು ಭಾರತವು ಎಂದಿಗೂ ಮರೆಯುವುದಿಲ್ಲ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶವು ಹೊಸ ನೀತಿಗಳೊಂದಿಗೆ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದ್ದಾರೆ.
'2008ರ ಈ ದಿನ ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ಮುಂಬೈ ಮೇಲೆ ದಾಳಿ ಮಾಡಿದ್ದರು. ವಿದೇಶಿಗರು, ಪೊಲೀಸರು ಸೇರಿದಂತೆ ಅನೇಕರು ಬಲಿಯಾಗಿದ್ದರು. ನಾನು ಅವರಿಗೆ ಗೌರವ ಅರ್ಪಿಸುತ್ತೇನೆ. ಭಾರತವು ತನ್ನ ಆ ಗಾಯಗಳನ್ನು ಮರೆಯಲು ಸಾಧ್ಯವಿಲ್ಲ. ಇಂದು ಭಾರತ ಭಯೋತ್ಪಾದನೆ ವಿರುದ್ಧ ಹೊಸ ನೀತಿಗಳೊಂದಿಗೆ ಹೋರಾಡುತ್ತಿದೆ. ಉಗ್ರವಾದದ ವಿರುದ್ಧದ ಹೋರಾಟ ಮಾಡುತ್ತಿರುವ ನಮ್ಮ ಭದ್ರತಾ ಸಿಬ್ಬಂದಿಗೂ ವಂದಿಸುತ್ತೇನೆ' ಎಂದಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications