CBSE: 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಲ್ಲ
ನವದೆಹಲಿ, ಮೇ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ 12ನೇ ತರಗತಿ ಅಂತಿಮ ಪರೀಕ್ಷೆಗಳ ಅವಧಿ ಕಡಿತಗೊಳಿಸಲಾಗಿದೆ. ಅರ್ಧ ಗಂಟೆಗಳಲ್ಲೇ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಮಂಡಳಿ ಚಿಂತನೆ ನಡೆಸಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ರಾಜ್ಯಗಳು ಪರೀಕ್ಷೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದವು. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಪರೀಕ್ಷೆಗಳನ್ನು ರದ್ದುಗೊಳಿಸುವುದಕ್ಕೆ ಪ್ರತಿಪಾದಿಸಿದ್ದವು. ಈ ಹಿನ್ನೆಲೆ ಕೇಂದ್ರ ಮಂಡಳಿ 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಎರಡು ಆಯ್ಕೆಗಳನ್ನು ನೀಡಿದೆ.
12ನೇ ತರಗತಿ ವಿದ್ಯಾರ್ಥಿಗಳಿಗೆ 3 ಗಂಟೆಗಳ ಬದಲಿಗೆ ಅರ್ಧ ಗಂಟೆಗಳಲ್ಲೇ ಪರೀಕ್ಷೆ ನಡೆಸುವುದು ಒಂದು ಆಯ್ಕೆಯಾಗಿದೆ. ರಾಜ್ಯಗಳಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ನಡೆಸುವ ಬಗ್ಗೆ ಆಯಾ ರಾಜ್ಯ ಸರ್ಕಾರದ ಶಿಕ್ಷಣ ಮಂಡಳಿಯು ತೀರ್ಮಾನ ತೆಗೆದುಕೊಳ್ಳುವುದಕ್ಕೆ ಎರಡನೇ ಆಯ್ಕೆಯನ್ನು ನೀಡಲಾಗಿದೆ.

ಪದವಿ ಪೂರ್ವ ಪರೀಕ್ಷೆ ನಡೆಸಲು ಎರಡು ಆಯ್ಕೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ನಡುವೆ ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಸಮಯ ಮತ್ತು ವಿಧಾನಕ್ಕೆ ಹೊಂದಿಕೊಂಡು ಪರೀಕ್ಷೆ ನಡೆಸುವುದು ಅಥವಾ ಪರೀಕ್ಷೆಗಳನ್ನು ಮುಂದೂಡುವುದು ಸೇರಿದಂತೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು ಎರಡು ಆಯ್ಕೆಗಳನ್ನು ನೀಡಿದೆ.

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ನೀಡಿದ ಮೊದಲ ಆಯ್ಕೆ?
12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು ಎರಡು ಆಯ್ಕೆಗಳನ್ನು ನೀಡಿದೆ. ಈ ಪೈಕಿ ಮೊದಲ ಆಯ್ಕೆ 3 ತಿಂಗಳ ಅವಧಿಯಲ್ಲೇ ಎಲ್ಲ ರೀತಿ ಪರೀಕ್ಷೆಗಳನ್ನು ನಡೆಸುವುದು. ಮೊದಲ ತಿಂಗಳು ಪರೀಕ್ಷಾ ಪೂರ್ವ ಚಟುವಟಿಕೆ ಹಾಗೂ ಉಳಿದ ಎರಡು ತಿಂಗಳಿನಲ್ಲಿ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಿಸುವುದು ಆಗಿದೆ. 30 ದಿನಗಳಲ್ಲಿ ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಬೇಕು ಹಾಗೂ ಉಳಿದ ಸಾಮಾನ್ಯ ವಿಷಯಗಳಿಗೆ ವಿದ್ಯಾರ್ಥಿಯ ಕಾರ್ಯಕ್ಷಮತೆ ಮೇಲೆ ಅಂಕಗಳನ್ನು ನೀಡುವುದು. ಬಹುಶಃ ಆಗಸ್ಟ್ ತಿಂಗಳಿನಲ್ಲಿ ಈ ಪರೀಕ್ಷೆಗಳು ನಡೆಯಲಿದ್ದು, ಸಪ್ಟೆಂಬರ್ ವೇಳೆಗೆ ಎಲ್ಲ ಪರೀಕ್ಷೆಗಳು ಅಂತ್ಯಗೊಳ್ಳಲಿವೆ ಎಂದು ಮಂಡಳಿ ತಿಳಿಸಿದೆ.

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ನೀಡಿದ ಎರಡನೇ ಆಯ್ಕೆ?
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ನೀಡಿರುವ ಎರಡನೇ ಆಯ್ಕೆಯಲ್ಲಿ ಪ್ರಮುಖವಾದ 19 ವಿಷಯಗಳಿಗೆ ಸಂಬಂಧಿಸಿದಂತೆ 90 ನಿಮಿಷಗಳ ಪರೀಕ್ಷೆ ನಡೆಸುವುದಾಗಿದೆ. ಒಂದು ಭಾಷೆ ಮತ್ತು ಆಯ್ಕೆ ಮಾಡಿಕೊಂಡಿರುವ ಮೂರು ವಿಷಯಗಳ ಮೇಲಿನ ಪರೀಕ್ಷೆಗೆ ಮಾತ್ರ ವಿದ್ಯಾರ್ಥಿಗಳು ಹಾಜರಾಗತಕ್ಕದ್ದು. ವಿದ್ಯಾರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಐದು ಮತ್ತು ಆರನೇ ವಿಷಯಗಳಿಗೆ ಅಂಕವನ್ನು ನೀಡಲಾಗುವುದು. ಈ ಪರೀಕ್ಷೆಗಳು ವ್ಯವಸ್ಥಿತ ಹಾಗೂ ಸೀಮಿತ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರ ನಡೆಸುವುದಕ್ಕೆ ಅವಕಾಶ ನೀಡಲಾಗಿದೆ.

ಎರಡು ಬಾರಿ ಪರೀಕ್ಷೆ ನಡೆಸುವುದಕ್ಕೆ ಅವಕಾಶ
ಎರಡನೇ ಆಯ್ಕೆಯಲ್ಲಿ 12ನೇ ತರಗತಿ ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಸೂಕ್ತ ಎಂದು ಎನಿಸಿರುವ ದಿನಾಂಕದಂದೇ ನಡೆಸುವುದಕ್ಕೆ ಸೂಚಿಸಲಾಗಿದೆ. ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಲಾಗಿದೆ. ಜುಲೈ 15ರಂದು ಮೊದಲ ಹಂತದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ 2ನೇ ಬಾರಿ ಪರೀಕ್ಷೆ ನಡೆಸಲಾಗುತ್ತದೆ. ಅಂತಿಮವಾಗಿ ಸಪ್ಟೆಂಬರ್ 5ರಂದು ಪರೀಕ್ಷಾ ಫಲಿತಾಂಶ ಹೊರಬೀಳಲಿದೆ. ಈ ಹಿಂದೆ ಮೇ 4 ರಿಂದ ಜೂನ್ 14ರವರೆಗೂ ನಡೆಯಬೇಕಿದ್ದ 12ನೇ ತರಗತಿ ಪರೀಕ್ಷೆಗಳಿಗೆ 14,30,247 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications