Air Pollution: ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿರುವ ಭಾರತದ ನಗರಗಳು
ನವದೆಹಲಿ ಮಾರ್ಚ್ 11: ಭಾರತದಲ್ಲಿ ಕಳಪೆ ಗಾಳಿಯನ್ನು ಹೊಂದಿರುವುದು ರಾಜಧಾನಿ ದೆಹಲಿ ಎನ್ನುವುದು ಬಹುತೇಕರ ಊಹೆಯಾಗಿತ್ತು. ಆದರೀಗ ಇದು ನಿಜವಾಗಿದೆ. ಇಂದು ವಿಶ್ವದ ಅತ್ಯಂತ ಕಲುಷಿತ ಗಾಳಿಯನ್ನು ಹೊಂದಿರುವ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಜಗತ್ತಿನ 20 ಅತ್ಯಂತ ಕಲುಷಿತ ನಗರಗಳಲ್ಲಿ 13 ನಗರಗಳು ಭಾರತದಲ್ಲೇ ಇವೆ ಎಂದು ತಿಳಿದು ಬಂದಿದೆ.
ಹೌದು... ವಿಶ್ವದ ಅತ್ಯಂತ ಕಲುಷಿತ ನಗರಗಳು ಭಾರತದಲ್ಲಿವೆ ಎನ್ನುವ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್ನ 'ವಿಶ್ವ ವಾಯು ಗುಣಮಟ್ಟ ವರದಿ 2024'ರ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎಂದು ದೆಹಲಿ ಹೆಸರು ಪಡೆದುಕೊಂಡಿದೆ. ಈ ಪಟ್ಟಿಯಲ್ಲಿ ಮೇಘಾಲಯದ ಬರ್ನಿಹತ್ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನ ದೆಹಲಿ ಪಡೆದುಕೊಂಡಿದೆ. 2024ರಲ್ಲಿ ಭಾರತ ವಿಶ್ವದ ಐದನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, 2023ರಲ್ಲಿ ಭಾರತ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿತ್ತು. ಹಾಗಾದರೆ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿರುವ ಭಾರತದ ನಗರಗಳು ಹೀಗಿವೆ...

ವಿಶ್ವದ 20 ಅತ್ಯಂತ ಕಲುಷಿತ ನಗರಗಳಲ್ಲಿ 13 ಭಾರತೀಯ ನಗರಗಳೆಂದರೆ- ಬರ್ನಿಹತ್, ದೆಹಲಿ, ಮುಲ್ಲನ್ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ಡಾ, ಭಿವಾಡಿ, ಮುಜಫರ್ನಗರ, ಹನುಮಾನ್ಗಢ ಮತ್ತು ನೋಯ್ಡಾ. ಹಾಗಾದರೆ ಇಂದು ಬಿಡುಗಡೆಯಾದ ವರದಿಯಲ್ಲಿ ಏನಿದೆ?
ವರದಿಯಲ್ಲಿ ಏನಿದೆ?
ವಿಶ್ವದ 10 ಅತ್ಯಂತ ಕಲುಷಿತ ನಗರಗಳಲ್ಲಿ ಆರು ಭಾರತದಲ್ಲಿವೆ. ದೆಹಲಿಯಲ್ಲಿ ವಾಯು ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚಿನ ಮಟ್ಟದಲ್ಲಿ ದಾಖಲಾಗಿದೆ. WHO ನೀಡಿದ ಮಿತಿಯ ಪ್ರಕಾರ ವಾರ್ಷಿಕ PM2.5 ಮಟ್ಟ ಪ್ರತಿ ಘನ ಮೀಟರ್ಗೆ 5 ಮೈಕ್ರೋಗ್ರಾಂ ಇರಬೇಕು. ಆದರೆ ಇಲ್ಲಿ ವಾರ್ಷಿಕ ಸರಾಸರಿ PM2.5 ಮಟ್ಟ ಪ್ರತಿ ಘನ ಮೀಟರ್ಗೆ 91.6 ಮೈಕ್ರೋಗ್ರಾಂಗಳಷ್ಟಿದೆ. 2023ರ ಪ್ರತಿ ಘನ ಮೀಟರ್ಗೆ 92.7 ಮೈಕ್ರೋಗ್ರಾಂಗಳಷ್ಟಿತ್ತು. ಈ ಅಂಕಿ ಅಂಶ ಕಳೆದ ಹಲವು ವರ್ಷಗಳಿಂದ ಹೆಚ್ಚೇನು ಬದಲಾಗಿಲ್ಲ. ಒಟ್ಟಾರೆಯಾಗಿ ಭಾರತದ ಶೇಕಡ 35 ರಷ್ಟು ನಗರಗಳು ವಾರ್ಷಿಕ PM2.5 ಮಟ್ಟವನ್ನು WHO ಮಿತಿಯಾದ ಪ್ರತಿ ಘನ ಮೀಟರ್ಗೆ 5 ಮೈಕ್ರೋಗ್ರಾಂಗಳಿಗಿಂತ 10 ಪಟ್ಟು ಹೆಚ್ಚು ದಾಖಲಿಸಿವೆ. ಹಾಗಾದರೆ PM2.5 ಎಂದರೇನು?

PM 2.5 ಎಂದರೇನು?
PM2.5 ಎಂದರೆ ಗಾಳಿಯಲ್ಲಿ ಇರುವ 2.5 ಮೈಕ್ರಾನ್ಗಳಿಗಿಂತ ಚಿಕ್ಕದಾದ ಸೂಕ್ಷ್ಮ ಮಾಲಿನ್ಯ ಕಣಗಳು. ಈ ಕಣಗಳು ಶ್ವಾಸಕೋಶ ಮತ್ತು ರಕ್ತಪ್ರವಾಹವನ್ನು ಪ್ರವೇಶಿಸಿ ಉಸಿರಾಟದ ತೊಂದರೆಗಳು, ಹೃದ್ರೋಗ ಮತ್ತು ಕ್ಯಾನ್ಸರ್ಗೆ ಕಾರಣವಾಗಬಹುದು. ಇದರ ಮೂಲಗಳಲ್ಲಿ ವಾಹನಗಳಿಂದ ಬರುವ ಹೊಗೆ, ಕೈಗಾರಿಕಾ ಹೊರಸೂಸುವಿಕೆ ಮತ್ತು ಮರ ಅಥವಾ ಬೆಳೆ ಉಳಿಕೆಗಳನ್ನು ಸುಡುವುದು ಸೇರಿವೆ.
ಭಾರತದಲ್ಲಿ ವಾಯು ಮಾಲಿನ್ಯ ಗಂಭೀರತೆ
ವಾಯು ಮಾಲಿನ್ಯ ಭಾರತದಲ್ಲಿ ಆರೋಗ್ಯದ ಬಗ್ಗೆ ಆತಂಕವನ್ನು ಸೃಷ್ಟಿ ಮಾಡಿದೆ. ಕಳಪೆ ಗಾಳಿಯ ಮಟ್ಟದಿಂದಾಗಿ ಮನುಷ್ಯ ಜೀವಿಸುವ ಅವಧಿ ಕೂಡ ಕಡಿಮೆಯಾಗುತ್ತಿದೆ. ಇದರಿಂದಾಗಿ ಅಂದಾಜು ಜೀವಿತಾವಧಿ 5.2 ವರ್ಷಗಳಷ್ಟು ಕಡಿಮೆಯಾಗುತ್ತಿದೆ. ಕಳೆದ ವರ್ಷ ಪ್ರಕಟವಾದ ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಸ್ಟಡಿ ಪ್ರಕಾರ, 2009 ರಿಂದ 2019 ರವರೆಗೆ ಭಾರತದಲ್ಲಿ ಪ್ರತಿ ವರ್ಷ ಸುಮಾರು 1.5 ಮಿಲಿಯನ್ ಸಾವುಗಳು PM2.5 ಮಾಲಿನ್ಯಕ್ಕೆ ಸಂಭವಿಸಿವೆ.
ಸೌಮ್ಯ ಸ್ವಾಮಿನಾಥನ್ ನೀಡಿದ ಸಲಹೆಗಳೇನು?
ವಾಯು ಗುಣಮಟ್ಟದ ದತ್ತಾಂಶ ಸಂಗ್ರಹಣೆಯಲ್ಲಿ ಭಾರತ ಪ್ರಗತಿ ಸಾಧಿಸಿದೆ ಎಂದು ಮಾಜಿ WHO ಮುಖ್ಯ ವಿಜ್ಞಾನಿ ಮತ್ತು ಆರೋಗ್ಯ ಸಚಿವಾಲಯದ ಸಲಹೆಗಾರ್ತಿ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ಆದರೆ ಈ ಬಗ್ಗೆ ಸಮರ್ಪಕ ಕ್ರಮದ ಕೊರತೆ ಇದೆ. ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 'ನಮ್ಮ ಬಳಿ ಡೇಟಾ ಇದೆ, ಈಗ ನಾವು ಕ್ರಮ ಕೈಗೊಳ್ಳಬೇಕಾಗಿದೆ' ಎಂದಿದ್ದಾರೆ.
ಜೊತೆಗೆ ಅವರು ಇದಕ್ಕೆ ಪರಿಹಾರವನ್ನೂ ನೀಡಿದ್ದಾರೆ. ಉದಾಹರಣೆಗೆ ಬಯೋಮಾಸ್ ಅನ್ನು LPG ಯೊಂದಿಗೆ ಬದಲಾಯಿಸುವುದು. ಭಾರತವು ಈಗಾಗಲೇ ಇದಕ್ಕಾಗಿ ಒಂದು ಯೋಜನೆಯನ್ನು ಹೊಂದಿದೆ. ಆದರೆ ನಾವು ಹೆಚ್ಚುವರಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಬೇಕು. ಬಡ ಕುಟುಂಬಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಸಬ್ಸಿಡಿ ಸಿಗಬೇಕು. ಇದು ಅವರ ಆರೋಗ್ಯವನ್ನು ಸುಧಾರಿಸುವುದು ಮಾತ್ರವಲ್ಲದೆ, ಹೊರಾಂಗಣ ವಾಯು ಮಾಲಿನ್ಯವನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ.
ಅಲ್ಲದೆ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ವಿಸ್ತರಿಸುವುದು ಮತ್ತು ಕೆಲವು ಕಾರುಗಳಿಗೆ ದಂಡ ವಿಧಿಸುವುದು ಸಹಾಯ ಮಾಡಬಹುದು ಎಂದು ಅವರು ಹೇಳಿದರು. ಇದಕ್ಕಾಗಿ ಪ್ರೋತ್ಸಾಹ ಮತ್ತು ದಂಡಗಳ ಮಿಶ್ರ ವಿಧಾನ ಅಗತ್ಯ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications