ಜಮ್ಮು ಕಾಶ್ಮೀರ ಪ್ರವಾಹದಲ್ಲಿ ಸಿಲುಕಿರುವ 200 ಕನ್ನಡಿಗರು
ಶ್ರೀನಗರ, ಸೆ. 9: ಜಮ್ಮು-ಕಾಶ್ಮೀರ ಜಲಪ್ರಳಯದಲ್ಲಿ ಒಟ್ಟು 200 ಜನ ಕನ್ನಡಿಗರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ರಾಜಾಜಿನಗರದ ದಂಪತಿ ಸೇರಿದಂತೆ ಗುಲ್ಬರ್ಗದ 11 ಜನ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿಯಲ್ಲಿ ಯಾವ ಬದಲಾವಣೆಯಾಗಿಲ್ಲ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸ್ಟೇಟ್ ಬ್ಯಾಂಕ್ ನೌಕರ ಜಿ.ಎಲ್.ನಟರಾಜ್ ಮತ್ತು ಅನಿತಾ ದಂಪತಿ ಪ್ರವಾಹದಲ್ಲಿ ಸಿಲುಕಿ ಆತಂಕದಲ್ಲಿದ್ದಾರೆ. ಸೆ. 4 ರಂದು ಸೈಟ್ ಸೀಯಿಂಗ್ಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ದಂಪತಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು ಇಲ್ಲಿಯವರೆಗೆ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಮತ್ತೊಂದೆಡೆ ವೈಷ್ಣೋದೇವಿ ಪ್ರವಾಸಕ್ಕೆ ತೆರಳಿದ್ದ ಗುಲ್ಬಗರ್ಗಾದ ಒಂದೇ ಕುಟುಂಬದ 11 ಜನ ಜಲ ಪ್ರಳಯಕ್ಕೆ ಸಿಲುಕಿದ್ದಾರೆ.
ಗುಲ್ಬರ್ಗಾದ ಚಪ್ಪಲ್ ಬಜಾರ್ ನಿವಾಸಿಗಳಾದ ನಗರದ ಗುಬ್ಬಿ ಬನ್ನೂರ್ಕರ್, ಅಮರ್ ಬನ್ನೂರ್ಕರ್, ಉಮಾ, ಶರಣು, ಶಿಲ್ಪಾ, ಅಭೀಷೇಕ, ಶಿವಾನಿ, ರಾಹುಲ್ ಸೇರಿದಂತೆ ಇಡೀ ಬನ್ನೂರ್ಕರ್ ಕುಟುಂಬ ಪ್ರವಾಹಕ್ಕೆ ಸಿಲುಕಿದೆ.
ವೈಷ್ಣೋದೇವಿ ಪ್ರವಾಶ ಮುಗಿಸಿ ಹಿಂದಿರುಗುತ್ತಿದ್ದ ಕುಟುಂಬ ನೀರಿನಡಿ ಸಿಕ್ಕಿಹಾಕಿಕೊಂಡಿತು ಎಂದು ಹೇಳಲಾಗಿದೆ.
ಹನಿಮೂನ್ಗೆ ತೆರಳಿದ್ದ ದಂಪತಿ ಸೇಫ್
ಹನಿಮೂನ್ಗೆ ತೆರಳಿದ್ದ ಮೈಸೂರಿನ ದಂಪತಿಯನ್ನು ರಕ್ಷಣೆ ಮಾಡಲಾಗಿದೆ. ಮಧುಚಂದ್ರಕ್ಕೆಂದು ತೆರಲಿದ್ದ ಮೈಸೂರು ಇಲವಾಲ ನಿವಾಸಿ ರಾಘವೇಂದ್ರ ಪ್ರಸಾದ್ ಮತ್ತು ಅವರ ಹೆಂಡತಿ ನಂದಿನಿ ಅವರನ್ನು ಸೇನಾಪಡೆ ರಕ್ಷಿಸಿದೆ. ಸದ್ಯ ಶ್ರೀನಗರದ ಶಿಬಿರದಲ್ಲಿ ಅವರ ಆಶ್ರಯ ನೀಡಲಾಗಿದೆ.(ಪ್ರವಾಹ ಪರಿಹಾರಕ್ಕೆ ಸದಾ ನಿರತ ಭಾರತೀಯ ಸೇನೆ)
ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ಕುಟುಂಬದವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಸೇನಾ ಪಡೆ ಅವರನ್ನು ರಕ್ಷಣೆ ಮಾಡಿದೆ. ಮನೆಯವರಿಗೆ ದೂರವಾಣಿ ಕರೆ ಮಾಡಿ ತಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ ಎಂದು ರಾಘವೇಂದ್ರ ಪ್ರಸಾದ್ ಸ್ನೇಹಿತರು ಮಾಹಿತಿ ನೀಡಿದ್ದಾರೆ.
ಸೆಪ್ಟಂಬರ್ 6 ರಂದು ಹನಿಮೂನ್ಗೆ ತೆರಳಿದ್ದ ದಂಪತಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು.
ಸುಮಾರು ನಾಲ್ಕು ನೂರಕ್ಕೂ ಅಧಿಕ ಜನ ನೀರು ಮತ್ತು ಆಹಾರಕ್ಕಾಗಿ ಪರಿತಪಿಸುತ್ತಿದ್ದು ಜಮ್ಮು ಕಾಶ್ಮೀರ ಅಕ್ಷರಶಃ ಮೃತ್ಯುಕೂಪವಾಗಿ ಪರಿಣಮಿಸಿದೆ.
ಅಂತೂ ಎಚ್ಚೆತ್ತ ರಾಜ್ಯ ಸರ್ಕಾರ
ಅಂತೂ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಮುಂದಾಗಿದ್ದು ಶ್ರೀನಗರದಲ್ಲಿ ಹೆಲ್ಪ್ ಡೆಸ್ಕ್ ಆರಂಭಿಸಿದೆ. ಟೋಲ್ ಫ್ರೀ ಸಂಖ್ಯೆ 1070 ಮತ್ತು ಸಜಹಾಯವಾಣಿ 080-22340676ಕ್ಕೆ ಕರೆ ಮಾಡಿ ಸಮಸ್ಯೆ ತಿಳಿಸಬಹುದಾಗಿದೆ ಎಂದು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಸರೋಜಮ್ಮ ತಿಳಿಸಿದ್ದಾರೆ.
ಅಲ್ಲದೇ ಎರಡು ಜನ ಅಧಿಕಾರಿಗಳನ್ನು ಕಳುಹಿಸಲಾಗಿದ್ದು ರಕ್ಷಣೆ ಮಾಡಿದ ಕನ್ನಡಿಗರನ್ನು ದೆಹಲಿ ಮಾರ್ಗದ ಮೂಲಕ ಕರೆತರುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications