ಜಮ್ಮು ಕಾಶ್ಮೀರ ಪ್ರವಾಹದಲ್ಲಿ ಸಿಲುಕಿರುವ 200 ಕನ್ನಡಿಗರು
ಶ್ರೀನಗರ, ಸೆ. 9: ಜಮ್ಮು-ಕಾಶ್ಮೀರ ಜಲಪ್ರಳಯದಲ್ಲಿ ಒಟ್ಟು 200 ಜನ ಕನ್ನಡಿಗರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ರಾಜಾಜಿನಗರದ ದಂಪತಿ ಸೇರಿದಂತೆ ಗುಲ್ಬರ್ಗದ 11 ಜನ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿಯಲ್ಲಿ ಯಾವ ಬದಲಾವಣೆಯಾಗಿಲ್ಲ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸ್ಟೇಟ್ ಬ್ಯಾಂಕ್ ನೌಕರ ಜಿ.ಎಲ್.ನಟರಾಜ್ ಮತ್ತು ಅನಿತಾ ದಂಪತಿ ಪ್ರವಾಹದಲ್ಲಿ ಸಿಲುಕಿ ಆತಂಕದಲ್ಲಿದ್ದಾರೆ. ಸೆ. 4 ರಂದು ಸೈಟ್ ಸೀಯಿಂಗ್ಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ದಂಪತಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು ಇಲ್ಲಿಯವರೆಗೆ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಮತ್ತೊಂದೆಡೆ ವೈಷ್ಣೋದೇವಿ ಪ್ರವಾಸಕ್ಕೆ ತೆರಳಿದ್ದ ಗುಲ್ಬಗರ್ಗಾದ ಒಂದೇ ಕುಟುಂಬದ 11 ಜನ ಜಲ ಪ್ರಳಯಕ್ಕೆ ಸಿಲುಕಿದ್ದಾರೆ.
ಗುಲ್ಬರ್ಗಾದ ಚಪ್ಪಲ್ ಬಜಾರ್ ನಿವಾಸಿಗಳಾದ ನಗರದ ಗುಬ್ಬಿ ಬನ್ನೂರ್ಕರ್, ಅಮರ್ ಬನ್ನೂರ್ಕರ್, ಉಮಾ, ಶರಣು, ಶಿಲ್ಪಾ, ಅಭೀಷೇಕ, ಶಿವಾನಿ, ರಾಹುಲ್ ಸೇರಿದಂತೆ ಇಡೀ ಬನ್ನೂರ್ಕರ್ ಕುಟುಂಬ ಪ್ರವಾಹಕ್ಕೆ ಸಿಲುಕಿದೆ.
ವೈಷ್ಣೋದೇವಿ ಪ್ರವಾಶ ಮುಗಿಸಿ ಹಿಂದಿರುಗುತ್ತಿದ್ದ ಕುಟುಂಬ ನೀರಿನಡಿ ಸಿಕ್ಕಿಹಾಕಿಕೊಂಡಿತು ಎಂದು ಹೇಳಲಾಗಿದೆ.
ಹನಿಮೂನ್ಗೆ ತೆರಳಿದ್ದ ದಂಪತಿ ಸೇಫ್
ಹನಿಮೂನ್ಗೆ ತೆರಳಿದ್ದ ಮೈಸೂರಿನ ದಂಪತಿಯನ್ನು ರಕ್ಷಣೆ ಮಾಡಲಾಗಿದೆ. ಮಧುಚಂದ್ರಕ್ಕೆಂದು ತೆರಲಿದ್ದ ಮೈಸೂರು ಇಲವಾಲ ನಿವಾಸಿ ರಾಘವೇಂದ್ರ ಪ್ರಸಾದ್ ಮತ್ತು ಅವರ ಹೆಂಡತಿ ನಂದಿನಿ ಅವರನ್ನು ಸೇನಾಪಡೆ ರಕ್ಷಿಸಿದೆ. ಸದ್ಯ ಶ್ರೀನಗರದ ಶಿಬಿರದಲ್ಲಿ ಅವರ ಆಶ್ರಯ ನೀಡಲಾಗಿದೆ.(ಪ್ರವಾಹ ಪರಿಹಾರಕ್ಕೆ ಸದಾ ನಿರತ ಭಾರತೀಯ ಸೇನೆ)
ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ಕುಟುಂಬದವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಸೇನಾ ಪಡೆ ಅವರನ್ನು ರಕ್ಷಣೆ ಮಾಡಿದೆ. ಮನೆಯವರಿಗೆ ದೂರವಾಣಿ ಕರೆ ಮಾಡಿ ತಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ ಎಂದು ರಾಘವೇಂದ್ರ ಪ್ರಸಾದ್ ಸ್ನೇಹಿತರು ಮಾಹಿತಿ ನೀಡಿದ್ದಾರೆ.
ಸೆಪ್ಟಂಬರ್ 6 ರಂದು ಹನಿಮೂನ್ಗೆ ತೆರಳಿದ್ದ ದಂಪತಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು.
ಸುಮಾರು ನಾಲ್ಕು ನೂರಕ್ಕೂ ಅಧಿಕ ಜನ ನೀರು ಮತ್ತು ಆಹಾರಕ್ಕಾಗಿ ಪರಿತಪಿಸುತ್ತಿದ್ದು ಜಮ್ಮು ಕಾಶ್ಮೀರ ಅಕ್ಷರಶಃ ಮೃತ್ಯುಕೂಪವಾಗಿ ಪರಿಣಮಿಸಿದೆ.
ಅಂತೂ ಎಚ್ಚೆತ್ತ ರಾಜ್ಯ ಸರ್ಕಾರ
ಅಂತೂ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಮುಂದಾಗಿದ್ದು ಶ್ರೀನಗರದಲ್ಲಿ ಹೆಲ್ಪ್ ಡೆಸ್ಕ್ ಆರಂಭಿಸಿದೆ. ಟೋಲ್ ಫ್ರೀ ಸಂಖ್ಯೆ 1070 ಮತ್ತು ಸಜಹಾಯವಾಣಿ 080-22340676ಕ್ಕೆ ಕರೆ ಮಾಡಿ ಸಮಸ್ಯೆ ತಿಳಿಸಬಹುದಾಗಿದೆ ಎಂದು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಸರೋಜಮ್ಮ ತಿಳಿಸಿದ್ದಾರೆ.
ಅಲ್ಲದೇ ಎರಡು ಜನ ಅಧಿಕಾರಿಗಳನ್ನು ಕಳುಹಿಸಲಾಗಿದ್ದು ರಕ್ಷಣೆ ಮಾಡಿದ ಕನ್ನಡಿಗರನ್ನು ದೆಹಲಿ ಮಾರ್ಗದ ಮೂಲಕ ಕರೆತರುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications