ಭಯೋತ್ಪಾದಕರು ಬಳಸುತ್ತಿದ್ದ 14 ಮೆಸೆಂಜರ್ ಆಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ, ಮೇ : ಭಯೋತ್ಪಾದಕ ಚಟುವಟಿಕೆಗಳ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಸೋಮವಾರ ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ (OGW) ಜೊತೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್ಗಳನ್ನು ಕೇಂದ್ರವು ನಿಷೇಧಿಸಿದೆ. ಮೂಲಗಳು ತಿಳಿಸಿವೆ.
ನಿಷೇಧಿತ ಅಪ್ಲಿಕೇಶನ್ಗಳಲ್ಲಿ ಕ್ರಿಪ್ವೈಸರ್, ಎನಿಗ್ಮಾ, ಸೇಫ್ಸ್ವಿಸ್, ವಿಕ್ರಮ್, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಝಾಂಗಿ ಮತ್ತು ಥ್ರೀಮಾ ಸೇರಿವೆ.

ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುವ ಮತ್ತು ಭಾರತೀಯ ಕಾನೂನುಗಳನ್ನು ಅನುಸರಿಸದ ಅಪ್ಲಿಕೇಶನ್ಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅವುಗಳನ್ನು ನಿಷೇಧಿಸಲು ವಿನಂತಿಯನ್ನು ಸಂಬಂಧಿಸಿದ ಸಚಿವಾಲಯಕ್ಕೆ ತಿಳಿಸಲಾಗಿದೆ. ಈ ಆ್ಯಪ್ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಉನ್ನತ ಅಧಿಕಾರಿಗಳಿಗೆ ಅಧಿಕೃತ ಸಂವಹನದಲ್ಲಿ, ಈ ಅಪ್ಲಿಕೇಶನ್ಗಳು ಕಣಿವೆಯಲ್ಲಿ ಭಯೋತ್ಪಾದಕ ಪ್ರಚಾರವನ್ನು ಹರಡುತ್ತಿವೆ ಎಂದು ಗುಪ್ತಚರ ಸಂಸ್ಥೆಗಳು ತಿಳಿಸಿವೆ ಎಂದು ಎಎನ್ಐ ಹೇಳಿದೆ. "ಓವರ್ಗ್ರೌಂಡ್ ವರ್ಕರ್ಸ್ (OGWs) ಮತ್ತು ಭಯೋತ್ಪಾದಕರು ತಮ್ಮ ನಡುವೆ ಸಂವಹನ ನಡೆಸಲು ಬಳಸುವ ಚಾನಲ್ಗಳನ್ನು ಏಜೆನ್ಸಿಗಳು ಟ್ರ್ಯಾಕ್ ಮಾಡುತ್ತವೆ.
ಈ ವೇಳೆ ಒಂದು ಸಂವಹನವನ್ನು ಪತ್ತೆಹಚ್ಚುವಾಗ ಮೊಬೈಲ್ ಅಪ್ಲಿಕೇಶನ್ಗೆ ಭಾರತದಲ್ಲಿ ಪ್ರತಿನಿಧಿಗಳಿಲ್ಲ ಎಂದು ಏಜೆನ್ಸಿಗಳು ಪತ್ತೆ ಮಾಡಿದವು. ಅಪ್ಲಿಕೇಶನ್ನಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.
ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರ ಗುಪ್ತಚರ ಸಂಸ್ಥೆಗಳ ಸಹಾಯದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುವ ಮತ್ತು ಭಾರತೀಯ ಕಾನೂನುಗಳನ್ನು ಅನುಸರಿಸದ ಅಂತಹ ಅಪ್ಲಿಕೇಶನ್ಗಳ ಪಟ್ಟಿಯನ್ನು ಸಿದ್ಧಪಡಿಸಲಾಯಿತು. ಪಟ್ಟಿಯನ್ನು ಸಿದ್ಧಪಡಿಸಿದ ನಂತರ, ಈ ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಲು ವಿನಂತಿಯನ್ನು ಸಂಬಂಧಿಸಿದ ಸಚಿವಾಲಯಕ್ಕೆ ತಿಳಿಸಲಾಯಿತು. ಈ ಆ್ಯಪ್ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications