ಮಧ್ಯಪ್ರದೇಶದಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ
ಛತ್ತರ್ಪುರ, ಡಿ. 18: ಕರ್ನಾಟಕದಲ್ಲಿ ತೆರೆದ ಕೊಳವೆ ಬಾವಿಗೆ ಸಾಕಷ್ಟು ಮಕ್ಕಳು ಬಲಿಯಾದ ಮೇಲೆ ಜಾಗೃತಿ ಕೈಗೊಳ್ಳಲಾಯಿತು. ಲಕ್ಷಾಂತರ ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಲು ಸರ್ಕಾರವೇ ಆದೇಶ ಹೊರಡಿಸಬೇಕಾಯಿತು.
ಆದರೆ, ಈ ಘಟನೆಯಿಂದ ದೇಶದ ಇತರ ರಾಜ್ಯಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಮಧ್ಯಪ್ರದೇಶ ರಾಜ್ಯದ ಲಿಧೋರಾ ಗ್ರಾಮದಲ್ಲಿ 14 ತಿಂಗಳು ವಯಸ್ಸಿನ ಕೃಷ್ಣ ಲೋಧಿ ಎಂಬ ಬಾಲಕ ಬುಧವಾರ ಸಂಜೆ ವಿಫಲಗೊಂಡ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದಾನೆ. ಪ್ರಸ್ತುತ 18ನೇ ಅಡಿ ಆಳದಲ್ಲಿ ಬಾಲಕ ಇದ್ದಾನೆ. ಬಾವಿ 100 ಅಡಿ ಉದ್ದವಾಗಿರುವ ಕಾರಣ ಬಾಲಕ ಇನ್ನಷ್ಟು ಆಳಕ್ಕೆ ಜಾರುವ ಆತಂಕ ಎದುರಾಗಿದೆ. [ಕೊಳವೆ ಬಾವಿ ದುರಂತ : ದುನಿಯಾ ವಿಜಯ್ ಹೇಳಿದ್ದು]

ಜಿಲ್ಲಾಡಳಿತ ಈಗಾಗಲೇ ಬಾಲಕನ ರಕ್ಷಣಾ ಕಾರ್ಯ ಆರಂಭಿಸಿದೆ. ಕೊಳವೆ ಬಾವಿಯ ಪಕ್ಕದಲ್ಲಿ ಮತ್ತೊಂದು ಬಾವಿಯನ್ನು ಜೆಸಿಬಿ ಮೂಲಕ ತೆರೆಯಲಾಗುತ್ತಿದೆ. ಕೊಳವೆ ಬಾವಿಯೊಳಗೆ ನಿರಂತರವಾಗಿ ಆಮ್ಲಜನಕ ಪೂರೈಸಲಾಗುತ್ತಿದೆ. [ದುರಂತ ತಡೆಯಲು ಮಾರ್ಗಸೂಚಿ]
ಈ ಕೊಳವೆ ಬಾವಿಯನ್ನು ಎರಡು ತಿಂಗಳ ಹಿಂದಷ್ಟೇ ತೆರೆಯಲಾಗಿತ್ತು. ಆದರೆ, ನೀರು ಬರದ ಹಿನ್ನೆಲೆಯಲ್ಲಿ ಜಮೀನು ಮಾಲೀಕ ಈ ಕೊಳವೆ ಬಾವಿಯನ್ನು ಮುಚ್ಚದೆ ಹಾಗೆಯೇ ಬಿಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications