ಪೂಂಚ್ನಲ್ಲಿ ಪಾಕ್ ಸೇನೆ ಗುಂಡಿನ ದಾಳಿ; 15 ಅಮಾಯಕರ ಸಾವು, 43 ಜನರಿಗೆ ಗಾಯ
Ind-Pak War: ಪಹಲ್ಗಾಮ್ನಲ್ಲಿ ದೇಶದ ಸುಮಾರು 26 ಅಮಾಯಕರನ್ನು ಉಗ್ರರು ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತಿಕಾರವಾಗಿ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಇದರ ಬೆನ್ನಲ್ಲೇ ಪಾಕ್ ಸೇನೆ ಗುಂಡಿನ ದಾಳಿಯಿಂದ ಪೂಂಚ್ ಹಾಗೂ ತಂಗ್ಧರ್ನಲ್ಲಿ 15 ಮಂದಿ ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್ನಲ್ಲಿ ಪಾಕ್ ಸೇನೆ ನಡೆಸಿದ ಶೆಲ್ ದಾಳಿಯಿಂದ 15 ಮಂದಿ ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಭಾರತ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ನಡೆಸಿ ಪಾಕ್ಗೆ ಪ್ರತ್ಯುತ್ತರವನ್ನು ಕೊಟ್ಟಿದ್ದು, ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದರು.
ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ ಭಾರತ ಸೇನೆ ಪ್ರತ್ಯುತ್ತರ ನೀಡಿತ್ತು. ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಭಾರತೀಯ ಸೇನೆ 'ಆಪರೇಷನ್ ಸಿಂಧೂರ' ಹೆಸರಲ್ಲಿ ಕ್ಷಿಪಣಿ ದಾಣಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಈ ಬೆನ್ನಲ್ಲೇ ಪಾಕಿಸ್ತಾನ ಶೆಲ್ ದಾಳಿ ನಡೆಸಿ 15 ಅಮಾಯಕ ನಾಗರಿಕರನ್ನು ಬಲಿ ತೆಗೆದುಕೊಂಡ ಘಟನೆ ನಡೆದಿದೆ ಎಂದು ತಿಳಿದುವಂದಿದೆ.
ಗಡಿಯಾಚೆಗಿನ ಯುದ್ಧದ ನಡುವೆಯೇ ಪೂಂಚ್ ಜಿಲ್ಲೆಯ ಗುರುದ್ವಾರ ಶ್ರೀ ಗುರು ಸಿಂಗ್ ಸಭಾದ ಮೂಲೆಯಲ್ಲಿ ಪಾಕಿಸ್ತಾನದ ಶೆಲ್ ದಾಳಿ ನಡೆಸಿದ್ದು, ಸಣ್ಣಪುಟ್ಟ ಹಾನಿಯಾಗಿದೆ ಎಂದು ಜಿಲ್ಲಾ ಗುರುದ್ವಾರ ಪ್ರಬಂಧಕ್ ಸಮಿತಿಯ ಅಧ್ಯಕ್ಷ ನರಿಂದರ್ ಸಿಂಗ್ ಹೇಳಿದ್ದಾರೆ.
ಗುರುದ್ವಾರದ ಒಂದು ಮೂಲೆಗೆ ಶೆಲ್ ಬಡಿದು, ಬಾಗಿಲಿಗೆ ಹಾನಿಯಾಗಿದೆ ಮತ್ತು ಕೆಲವು ಗಾಜಿನ ಫಲಕಗಳು ಒಡೆದಿವೆ ಎಂದು ಹೇಳಿದ್ದಾರೆ. ಧಾರ್ಮಿಕ ಸ್ಥಳವು ಹಾನಿಯಾಗಿದೆ. ಅಲ್ಲದೆ, ಈ ಪ್ರದೇಶದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ. ಪೂಂಚ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಿಂದ ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯನ್ನು ಶಶಿ ತರೂರ್ ಶ್ಲಾಘಿಸಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘಿಸಿದ್ದಾರೆ. ಅಲ್ಲದೆ,
ಇದು ಅದ್ಭುತವಾಗಿದೆ ಎಂದು ಕರೆದಿದ್ದಾರೆ.
ಪಹಲ್ಗಾಮ್ನಲ್ಲಿ ಹತ್ಯೆಗೀಡಾದ ತನ್ನ ಪತಿ ಪಕ್ಕದಲ್ಲಿ ಪತ್ನಿ ಅತ್ತಿದ್ದಳು. ಇದೀಗ ತಕ್ಕ ಪ್ರತ್ಯುತ್ತರವನ್ನು ನಮ್ಮ ಸೇನೆ ಪಾಕ್ಗೆ ಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications