ಪ್ರೇಮಿಗಳ ದಿನದಂದು ಹೊಸ ಬದುಕಿಗೆ ಕಾಲಿಟ್ಟ 15 ಶರಣಾಗತ ನಕ್ಸಲರು: ಸಾಮೂಹಿಕ ವಿವಾಹ
ದಾಂತೇವಾಡ, ಫೆಬ್ರವರಿ 15: ಛತ್ತೀಸಗಡದ ದಾಂತೇವಾಡದಲ್ಲಿ ಶರಣಾಗತರಾಗಿದ್ದ 15 ನಕ್ಸಲರಿಗೆ ಪೊಲೀಸರು ಪ್ರೇಮಿಗಳ ದಿನದಂದು ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಿದ್ದರು.
'ಶರಣಾಗಿದ್ದ 15 ನಕ್ಸಲರು ಇಂದು ಇಲ್ಲಿ ಸಾಂಸಾರಿಕ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ನಕ್ಸಲ್ ಸಂಘಟನೆಯ ಚಟುವಟಿಕೆಯಲ್ಲಿ ತೊಡಗಿದ್ದಾಗ ಪ್ರೀತಿಯಲ್ಲಿ ಬಿದ್ದಿದ್ದರು. ಆದರೆ ಆಗ ಅವರಿಗೆ ಮದುವೆಯಾಗಲು ಅನುಮತಿ ಸಿಕ್ಕಿರಲಿಲ್ಲ' ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.
'ದಾಂತೇವಾಡ ಪೊಲೀಸರು ನಕ್ಸಲರನ್ನು ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ 'ಘರ್ ವಾಪಸಿ' ಆಂದೋಲನ ನಡೆಸುತ್ತಿದ್ದಾರೆ. ಇದರಲ್ಲಿ ಆರು ತಿಂಗಳ ಅವಧಿಯಲ್ಲಿಯೇ ಸುಮಾರು 300 ನಕ್ಸಲರು ಶರಣಾಗತಿಯಾಗಿದ್ದಾರೆ. ಅವರ ಬುಡಕಟ್ಟು ಸಮುದಾಯಗಳ ಸಂಪ್ರದಾಯ ಮತ್ತು ಸಂಸ್ಕೃತಿಗಳಿಗೆ ಅನುಗುಣವಾಗಿ ವಿವಾಹ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

'ಪ್ರೇಮಿಗಳ ದಿನವಾದ ಇಂದು ಹಿಂಸಾಚಾರ ಮತ್ತು ಭಯದ ಮೇಲಿನ ಪ್ರೀತಿಯ ಗೆಲುವಿನ ಸಂಭ್ರಮವನ್ನಾಗಿ ಈ ಮದುವೆ ಸಮಾರಂಭವನ್ನು ಆಚರಿಸಲಾಗಿದೆ' ಎಂದು ಅವರು ವ್ಯಾಖ್ಯಾನಿಸಿದ್ದಾರೆ.
'ನಾವಿಬ್ಬರೂ ನಕ್ಸಲರಾಗಿ ಕೆಲಸ ಮಾಡುತ್ತಿದ್ದಾಗ ಒಂದು ವರ್ಷದ ಹಿಂದೆ ನಮ್ಮ ನಡುವೆ ಪ್ರೀತಿ ಮೂಡಿತ್ತು. ನನ್ನ ತಲೆಯ ಮೇಲೆ 5 ಲಕ್ಷ ರೂ ಮತ್ತು ಆಕೆಯ ತಲೆಗೆ 1 ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು. ನಾವು ಆಗಲೇ ಮದುವೆಯಾಗಲು ನಿರ್ಧರಿಸಿದ್ದೆವು. ಆದರೆ ನಮಗೆ ಅವಕಾಶ ನೀಡಿರಲಿಲ್ಲ. ನಮಗೆ ಅಲ್ಲಿ ಮಕ್ಕಳನ್ನು ಮಾಡಿಕೊಳ್ಳಲು ಸಹ ಅನುಮತಿ ಇಲ್ಲ. ಅವರು ಅಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಸಹ ನಡೆಸಿದ್ದರು' ಎಂದು ಹಸೆಮಣೆ ಏರಿದ ಮಾಜಿ ನಕ್ಸಲ್ ಒಬ್ಬ ತಿಳಿಸಿದ್ದಾನೆ.
ಶರಣಾಗಿದ್ದ ನಕ್ಸಲರ ಕುಟುಂಬದವರು, ಪೊಲೀಸ್ ಅಧಿಕಾರಿಗಳು, ಸೈನಿಕರು ಮತ್ತು ಇತರೆ ಮಾಜಿ ನಕ್ಸಲರ ಸಮ್ಮುಖದಲ್ಲಿ ಈ ಮದುವೆಗಳನ್ನು ನಡೆಸಲಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications