ಪ್ರೇಮಿಗಳ ದಿನದಂದು ಹೊಸ ಬದುಕಿಗೆ ಕಾಲಿಟ್ಟ 15 ಶರಣಾಗತ ನಕ್ಸಲರು: ಸಾಮೂಹಿಕ ವಿವಾಹ
ದಾಂತೇವಾಡ, ಫೆಬ್ರವರಿ 15: ಛತ್ತೀಸಗಡದ ದಾಂತೇವಾಡದಲ್ಲಿ ಶರಣಾಗತರಾಗಿದ್ದ 15 ನಕ್ಸಲರಿಗೆ ಪೊಲೀಸರು ಪ್ರೇಮಿಗಳ ದಿನದಂದು ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಿದ್ದರು.
'ಶರಣಾಗಿದ್ದ 15 ನಕ್ಸಲರು ಇಂದು ಇಲ್ಲಿ ಸಾಂಸಾರಿಕ ಬಂಧನಕ್ಕೆ ಒಳಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ನಕ್ಸಲ್ ಸಂಘಟನೆಯ ಚಟುವಟಿಕೆಯಲ್ಲಿ ತೊಡಗಿದ್ದಾಗ ಪ್ರೀತಿಯಲ್ಲಿ ಬಿದ್ದಿದ್ದರು. ಆದರೆ ಆಗ ಅವರಿಗೆ ಮದುವೆಯಾಗಲು ಅನುಮತಿ ಸಿಕ್ಕಿರಲಿಲ್ಲ' ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.
'ದಾಂತೇವಾಡ ಪೊಲೀಸರು ನಕ್ಸಲರನ್ನು ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ 'ಘರ್ ವಾಪಸಿ' ಆಂದೋಲನ ನಡೆಸುತ್ತಿದ್ದಾರೆ. ಇದರಲ್ಲಿ ಆರು ತಿಂಗಳ ಅವಧಿಯಲ್ಲಿಯೇ ಸುಮಾರು 300 ನಕ್ಸಲರು ಶರಣಾಗತಿಯಾಗಿದ್ದಾರೆ. ಅವರ ಬುಡಕಟ್ಟು ಸಮುದಾಯಗಳ ಸಂಪ್ರದಾಯ ಮತ್ತು ಸಂಸ್ಕೃತಿಗಳಿಗೆ ಅನುಗುಣವಾಗಿ ವಿವಾಹ ಮಹೋತ್ಸವ ಸಮಾರಂಭ ಏರ್ಪಡಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

'ಪ್ರೇಮಿಗಳ ದಿನವಾದ ಇಂದು ಹಿಂಸಾಚಾರ ಮತ್ತು ಭಯದ ಮೇಲಿನ ಪ್ರೀತಿಯ ಗೆಲುವಿನ ಸಂಭ್ರಮವನ್ನಾಗಿ ಈ ಮದುವೆ ಸಮಾರಂಭವನ್ನು ಆಚರಿಸಲಾಗಿದೆ' ಎಂದು ಅವರು ವ್ಯಾಖ್ಯಾನಿಸಿದ್ದಾರೆ.
'ನಾವಿಬ್ಬರೂ ನಕ್ಸಲರಾಗಿ ಕೆಲಸ ಮಾಡುತ್ತಿದ್ದಾಗ ಒಂದು ವರ್ಷದ ಹಿಂದೆ ನಮ್ಮ ನಡುವೆ ಪ್ರೀತಿ ಮೂಡಿತ್ತು. ನನ್ನ ತಲೆಯ ಮೇಲೆ 5 ಲಕ್ಷ ರೂ ಮತ್ತು ಆಕೆಯ ತಲೆಗೆ 1 ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು. ನಾವು ಆಗಲೇ ಮದುವೆಯಾಗಲು ನಿರ್ಧರಿಸಿದ್ದೆವು. ಆದರೆ ನಮಗೆ ಅವಕಾಶ ನೀಡಿರಲಿಲ್ಲ. ನಮಗೆ ಅಲ್ಲಿ ಮಕ್ಕಳನ್ನು ಮಾಡಿಕೊಳ್ಳಲು ಸಹ ಅನುಮತಿ ಇಲ್ಲ. ಅವರು ಅಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಸಹ ನಡೆಸಿದ್ದರು' ಎಂದು ಹಸೆಮಣೆ ಏರಿದ ಮಾಜಿ ನಕ್ಸಲ್ ಒಬ್ಬ ತಿಳಿಸಿದ್ದಾನೆ.
ಶರಣಾಗಿದ್ದ ನಕ್ಸಲರ ಕುಟುಂಬದವರು, ಪೊಲೀಸ್ ಅಧಿಕಾರಿಗಳು, ಸೈನಿಕರು ಮತ್ತು ಇತರೆ ಮಾಜಿ ನಕ್ಸಲರ ಸಮ್ಮುಖದಲ್ಲಿ ಈ ಮದುವೆಗಳನ್ನು ನಡೆಸಲಾಯಿತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications