ಬಿಸಿಲಿನ ಆಘಾತ; ಎರಡು ಗಂಟೆಯಲ್ಲಿ 16 ಮಂದಿ ಸಾವು
ಬಿಹಾರದ ಔರಂಗಾಬಾದ್ನ ಜಿಲ್ಲಾ ಆಸ್ಪತ್ರೆಯಲ್ಲಿ ಕೇವಲ ಎರಡು ಗಂಟೆಗಳಲ್ಲಿ 16 ಜನರು ಶಾಖ ಸಂಬಂಧಿ ಕಾರಣಗಳಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಭಾರತದಲ್ಲಿ ಅಧಿಕ ತಾಪಮಾನದಿಂದ ಜನ ತತ್ತರಿಸಿದ್ದಾರೆ.
ಔರಂಗಾಬಾದ್ನಲ್ಲಿ ಗುರುವಾರ ತಾಪಮಾನ ಕನಿಷ್ಠ 44 ಡಿಗ್ರಿ ಸೆಲ್ಸಿಯಸ್ ಇದ್ದರೆ ಗರಿಷ್ಠ 48.2 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಬಿಹಾರದಲ್ಲಿ ಗುರುವಾರ ದಾಖಲಾದ ಅತ್ಯಂತ ಹೆಚ್ಚು ತಾಪಮಾನ ಎನ್ನುವ ದಾಖಲೆ ಬರೆದಿದೆ.

ಆಸ್ಪತ್ರೆಯಲ್ಲಿ ಮೃತರ ಕುಟುಂಬ ಸದಸ್ಯರು ಅಳುತ್ತಿರುವ ದೃಶ್ಯಗಳು ಮನಕಲಕುವಂತಿದ್ದವು. ಶಾಖ-ಸಂಬಂಧಿತ ಕಾರಣಗಳಿಂದಾಗಿ ಕನಿಷ್ಠ 35 ರೋಗಿಗಳನ್ನು ದಾಖಲಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ನಮ್ಮಲ್ಲಿ ಸಾಕಷ್ಟು ವೈದ್ಯರು, ಔಷಧಗಳು ಮತ್ತು ಐಸ್ ಪ್ಯಾಕ್ಗಳಿದ್ದು, ಹೆಚ್ಚಿನ ಕೂಲರ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಬಿಸಿಗಾಳಿಗೆ ತತ್ತರಿಸಿದ ಬಿಹಾರ
ಬಿಹಾರ ಬಿಸಿಗಾಳಿಯಿಂದ ತತ್ತರಿಸುತ್ತಿದೆ ಮತ್ತು ರಾಜ್ಯ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು, ಕೋಚಿಂಗ್ ಸಂಸ್ಥೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಜೂನ್ 8 ರವರೆಗೆ ಮುಚ್ಚಲು ಬುಧವಾರ ಆದೇಶಿಸಿದೆ. ಬಿಸಿಲಿನ ಕಾರಣ ಹತ್ತಾರು ವಿದ್ಯಾರ್ಥಿಗಳು ಮೂರ್ಛೆ ಹೋದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶೇಖ್ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಕನಿಷ್ಠ 16 ಹುಡುಗಿಯರು ಮೂರ್ಛೆ ಹೋಗಿದ್ದರು ಮತ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸಾಧ್ಯವಾಗದ ನಂತರ ಅವರನ್ನು ದ್ವಿಚಕ್ರ ವಾಹನಗಳು ಮತ್ತು ಇ-ರಿಕ್ಷಾಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಬೇಗುಸರಾಯ್ ಮತ್ತು ಜಮುಯಿಯಿಂದ ಕೂಡ ವಿದ್ಯಾರ್ಥಿಗಳು ಮೂರ್ಛೆ ಹೋಗುತ್ತಿರುವ ವರದಿಗಳು ಬಂದಿದ್ದವು. ಆರ್ಜೆಡಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬಿಹಾರ ಸರ್ಕಾರ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ಬಿಹಾರದಲ್ಲಿ ಪ್ರಜಾಪ್ರಭುತ್ವ ಅಥವಾ ಸರ್ಕಾರವಿಲ್ಲ. ಅಧಿಕಾರಶಾಹಿ ಇದೆ. ಮುಖ್ಯಮಂತ್ರಿ ಏಕೆ ದುರ್ಬಲರಾಗಿದ್ದಾರೆ? ತಾಪಮಾನ 47 ಡಿಗ್ರಿ. ಅಂತಹ ವಾತಾವರಣದಲ್ಲಿ ಮಕ್ಕಳನ್ನು ರಕ್ಷಿಸಬೇಕು ಎಂದು ವೈದ್ಯರು ಹೇಳುತ್ತಾರೆ ಆದರೆ ಇಲ್ಲಿ ಶಾಲೆಗಳನ್ನು ತೆರೆಯಲಾಗಿದೆ" ಎಂದು ಅವರು ಹೇಳಿದರು.
ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications