ಚಿತ್ರಗಳು : ವಿಜಯವಾಡದಲ್ಲಿ ದೋಣಿ ದುರಂತ, 16 ಸಾವು
ವಿಜಯವಾಡ, ನವೆಂಬರ್ 13 : ಇಬ್ರಾಹಿಂ ಪಟ್ಟಣದ ಬಳಿ ಕೃಷ್ಣಾ ನದಿಯಲ್ಲಿ ದೋಣಿ ಮುಳುಗಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. 20 ಜನರನ್ನು ರಕ್ಷಣೆ ಮಾಡಲಾಗಿದೆ.
ಭಾನುವಾರ ಸಂಜೆ ಇಬ್ರಾಹಿಂ ಪಟ್ಟಣದಲ್ಲಿ ದೋಣಿ ಕೃಷ್ಣಾ ನದಿಯಲ್ಲಿ ಮುಳುಗಿ ಹೋಗಿತ್ತು. 35ಕ್ಕೂ ಅಧಿಕ ಪ್ರವಾಸಿಗರಿದ್ದ ದೋಣಿ ಭವಾನಿ ಐಲ್ಯಾಂಡ್ನಿಂದ ಪವಿತ್ರ ಸಂಗಮಕ್ಕೆ ಹೋಗುವಾಗ ನದಿಯಲ್ಲಿ ಮುಳುಗಿತ್ತು.
ಭಾನುವಾರ ರಾತ್ರಿ ವೇಳೆಗೆ 11 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ಸೋಮವಾರ ಬೆಳಗ್ಗೆ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ದೋಣಿಯಲ್ಲಿ ಎಷ್ಟು ಜನರಿದ್ದರು ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ.
ಓನ್ಗೋಲ್ ವಾಕಿಂಗ್ ಕ್ಲಬ್ನ ಸದಸ್ಯರಾದ 8 ಕುಟುಂಬಗಳು ಬೋಟ್ನಲ್ಲಿ ಪ್ರಯಾಣ ಕೈಗೊಂಡಿದ್ದರು ಎಂದು ತಿಳಿದುಬಂದಿದೆ. ದೋಣಿಯಲ್ಲಿದ್ದ ಯಾರೊಬ್ಬರೂ ಲೈಫ್ ಜಾಕೆಟ್ ಧರಿಸಿರಲಿಲ್ಲ.
ಓನ್ಗೋಲ್ ವಾಕರ್ಸ್ ಕ್ಲಬ್ ಸದಸ್ಯರು ಸಿಂಪಲ್ ವಾಟರ್ ಟೂರ್ಸ್ ಎಂಬ ಬೋಟ್ ಆಪರೇಟರ್ಗಳಿಂದ ದೋಣಿ ಬಾಡಿಗೆಗೆ ಪಡೆದಿದ್ದರು. ವಿಜಯವಾಡಕ್ಕೆ ಪ್ರವಾಸಕ್ಕೆ ಬಂದಿದ್ದ ಸದಸ್ಯರು ವಿವಿಧ ದೇವಸ್ಥಾನಗಳನ್ನು ಸಂದರ್ಶಿಸಿದ ನಂತರ ಸಂಗಮ್ಗೆ ದೋಣಿ ಯಾತ್ರೆ ಕೈಗೊಂಡಿದ್ದರು.

ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ
'ಭವಾನಿ ದ್ವೀಪದಿಂದ ಸಂಗಮ್ಗೆ ದೋಣಿ ಯಾತ್ರೆ ಕೈಗೊಂಡಿದ್ದರು. ಯಾರೊಬ್ಬರು ಲೈಫ್ ಜಾಕೆಟ್ ಧರಿಸಿರಲಿಲ್ಲ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಬೋಟ್ ಆಪರೇಟರ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಆಂಧ್ರಪ್ರದೇಶದ ಗೃಹ ಸಚಿವ ಎನ್.ಚಿನ್ನಪ್ಪ ಹೇಳಿದ್ದಾರೆ.

ಮಹಿಳೆಯರು ಹೆಚ್ಚಿದ್ದರು
ದೋಣಿ ಮರಳು ದಿಣ್ಣೆಗೆ ಬಡಿದು ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ದೋಣಿಯಲ್ಲಿ ಮಹಿಳೆಯರು ಹೆಚ್ಚಿದ್ದರು. ಯಾರಿಗೂ ಈಜು ಬರುತ್ತಿರಲಿಲ್ಲ. ದೋಣಿ ಮುಳುಗಿದ ತಕ್ಷಣ ಅಲ್ಲಿದ್ದ ಮೀನುಗಾರರು ಹಲವರನ್ನು ರಕ್ಷಣೆ ಮಾಡಿದ್ದಾರೆ.

ಲೈಫ್ ಜಾಕೆಟ್ ಕೇಳಿದ್ದರು
ಪ್ರಯಾಣಿಕರು ಬೋಟ್ ಏರುವಾಗಲೇ ಲೈಫ್ ಜಾಕೆಟ್ ಕೇಳಿದ್ದರು. ಆದರೆ, ಬೋಟ್ ಆಪರೇಟರ್ಗಳು ಏನೂ ಆಗುವುದಿಲ್ಲ. ಜಾಕೆಟ್ ಬೇಡ ಎಂದು ಹೇಳಿದ್ದರು. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ದೇವಸ್ಥಾನಕ್ಕೆ ಹೋಗಿದ್ದರು
ಓನ್ಗೋಲ್ ವಾಕರ್ಸ್ ಕ್ಲಬ್ ಸದಸ್ಯರು ಸಿಂಪಲ್ ವಾಟರ್ ಟೂರ್ಸ್ ಎಂಬ ಬೋಟ್ ಆಪರೇಟರ್ಗಳಿಂದ ದೋಣಿ ಬಾಡಿಗೆಗೆ ಪಡೆದಿದ್ದರು. ವಿಜಯವಾಡಕ್ಕೆ ಪ್ರವಾಸಕ್ಕೆ ಬಂದಿದ್ದ ಸದಸ್ಯರು ವಿವಿಧ ದೇವಸ್ಥಾನಗಳನ್ನು ಸಂದರ್ಶಿಸಿದ ನಂತರ ಸಂಗಮ್ಗೆ ದೋಣಿ ಯಾತ್ರೆ ಕೈಗೊಂಡಿದ್ದರು.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ
ಬೋಟ್ನಲ್ಲಿ ಎಷ್ಟು ಜನರಿದ್ದರು? ಎಂಬ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಸಿಕ್ಕಿಲ್ಲ. ರಕ್ಷಣೆ ಮಾಡಿರುವವರು ಹೇಳುವ ಪ್ರಕಾರ ಬೋಟ್ನಲ್ಲಿ 38 ಜನರಿದ್ದರು. 16 ಮೃತದೇಹಗಳು ಸಿಕ್ಕಿವೆ. 20 ಜನರನ್ನು ರಕ್ಷಣೆ ಮಾಡಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications