ಎಕ್ಸಿಕ್ಯೂಟಿವ್ ಟ್ರೈನಿ ಸೇರಿ 17,776 ಕೋಟಿ ಸರ್ಕಾರಿ ಕಂಪೆನಿ ನಿರ್ವಹಿಸುವ ವ್ಯಕ್ತಿ
ನವದೆಹಲಿ ಅಕ್ಟೋಬರ್ 24: ಪ್ರಸನ್ನ ಕುಮಾರ್ ಮೋಟುಪಲ್ಲಿ ಎನ್ಎಲ್ಸಿ ಇಂಡಿಯಾ ಲಿಮಿಟೆಡ್ಗೆ ಜನವರಿ 2023 ರಿಂದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಮುನ್ನಡೆಸುತ್ತಿದ್ದಾರೆ.
ಎನ್ಎಲ್ಸಿ ಇಂಡಿಯಾವು ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ಸಾರ್ವಜನಿಕ ವಲಯದ ಉದ್ಯಮವಾಗಿದೆ . ಪ್ರಸನ್ನ ಅವರು ವಿದ್ಯುತ್ ಕ್ಷೇತ್ರ ಮತ್ತು ಕಲ್ಲಿದ್ದಲು ಕ್ಷೇತ್ರದಲ್ಲಿ 34 ವರ್ಷಗಳ ಅನುಭವ ಹೊಂದಿದ್ದಾರೆ. ಅವರು 1988 ರಲ್ಲಿ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಅಲ್ಲಿ ಕಾರ್ಯನಿರ್ವಾಹಕ ಟ್ರೈನಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇಂದು ಅವರು 17,776 ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ಹೊಂದಿರುವ ಸರ್ಕಾರಿ ಕಂಪನಿಯನ್ನು ಮುನ್ನಡೆಸುತ್ತಿದ್ದಾರೆ.

ಪ್ರಸನ್ನ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹುಟ್ಟಿ ಬೆಳೆದವರು. ಅವರು ಆಂಧ್ರಪ್ರದೇಶದ ಬಾಪಟ್ಲಾ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ. ಅವರು ನಾಲ್ಕು ವಿಶೇಷತೆಗಳಲ್ಲಿ ಎಂಬಿಎ ಪದವಿಯನ್ನು ಹೊಂದಿದ್ದಾರೆ. ಅವುಗಳೆಂದರೆ ಕಾರ್ಯಾಚರಣೆ ನಿರ್ವಹಣೆ, ಮಾರ್ಕೆಟಿಂಗ್ ನಿರ್ವಹಣೆ, ಹಣಕಾಸು ನಿರ್ವಹಣೆ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ.
NLCIL ನಲ್ಲಿ CMD ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಪ್ರಸನ್ನ ಅವರು ಗುಜರಾತ್ ಸ್ಟೇಟ್ ಎಲೆಕ್ಟ್ರಿಸಿಟಿ ಕಾರ್ಪೊರೇಷನ್ ಲಿಮಿಟೆಡ್ (GSECL) ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಇದಕ್ಕೂ ಮೊದಲು, ಅವರು NTPC (ಕಾರ್ಪೊರೇಟ್ ಇಂಧನ ನಿರ್ವಹಣೆ) ಯ ವರ್ಟಿಕಲ್ ಮುಖ್ಯಸ್ಥರಾಗಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು.
ಅವರು ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಭಾರತ ಸರ್ಕಾರದ ಎನರ್ಜಿ ಆಡಿಟರ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದಾರೆ. ಇಂಟರ್ನ್ಯಾಷನಲ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (IPMA) ನ ಪ್ರಮಾಣೀಕೃತ ಲೆವೆಲ್-ಡಿ ಪರೀಕ್ಷೆಯನ್ನು ಪಾಸು ಮಾಡಿದ್ದಾರೆ. ಪ್ರಸನ್ನ ಅವರು ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ನ ಫೆಲೋ ಆಗಿದ್ದಾರೆ ಮತ್ತು ವಿದ್ಯುತ್ ಮತ್ತು ಕಲ್ಲಿದ್ದಲು ವಲಯಗಳಲ್ಲಿ 50 ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ ಮತ್ತು ಪ್ರಕಟಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications