ಲೂಧಿಯಾನಾ ವಿಮಾನ ನಿಲ್ದಾಣದಿ 170 ಕೆಜಿ ಚಿನ್ನ ವಶ

ಖಾಸಗಿ ಕಂಪನಿಯ ಅಧಿಕಾರಿಗಳು ವಜ್ರಖಚಿತ ಆಭರಣ ಹಾಗೂ ಚಿನ್ನಾಭರಣಗಳನ್ನು ಅಕ್ರಮವಾಗಿ ಚಾರ್ಟೆಡ್ ವಿಮಾನದ ಮೂಲದ ಸಾಗಿಸುವಾಗ ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸುಮಾರು 170 ಕೆಜಿ ತೂಗುವ ಆಭರಣಗಳ ಸಾಗಾಣಿಕೆ ಬಗ್ಗೆ ಅಗತ್ಯ ದಾಖಲೆ ಒದಗಿಸುವಂತೆ ಅಧಿಕಾರಿಗಳು ಕೇಳಿದ್ದಾರೆ. ಆದರೆ, ಖಾಸಗಿ ಸಂಸ್ಥೆ ಪ್ರತಿನಿಧಿಗಳು ಕೊಟ್ಟ ದಾಖಲೆಗಳು ಪೂರಕವಾಗಿಲ್ಲದ ಕಾರಣ, ಎಲ್ಲವನ್ನು ವಶಪಡಿಸಿಕೊಳ್ಳಬೇಕಾಯಿತು. ವಶಪಡಿಸಿಕೊಂಡ ಚಿನ್ನ, ವಜ್ರಾಭರಣಗಳನ್ನು ಸರ್ಕಾರಿ ಟ್ರೇಷರಿಯಲ್ಲಿ ದಾಖಲಿಸಲಾಗಿದೆ ಎಂದು ತೆರಿಗೆ ಇಲಾಖೆ ಆಯುಕ್ತ ರಿಷಿಪಾಲ್ ಹೇಳಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಖಾಸಗಿ ಕಂಪನಿ ಸ್ಟಾಕ್ ಕ್ಲಿಯರೆನ್ಸ್ ಗಾಗಿ ನಾವು ಈ ರೀತಿ ಭಾರಿ ಪ್ರಮಾಣದ ಚಿನ್ನಾಭರಣ ಸಾಗಿಸಬೇಕಾಯಿತು, ಲೂಧಿಯಾನಾದಲ್ಲಿ ಹೊಸ ಶೋರೂಮ್ ಆರಂಭಿಸಲಾಗುತ್ತಿದೆ ಎನ್ನಲಾಗಿದೆ.
ಆದರೆ, ಸರಿಯಾದ ದಾಖಲೆ ಪ್ರಮಾಣ ಪತ್ರ ಒದಗಿಸಿದ ಹೊರತೂ ಚಿನ್ನಾಭರಣವನ್ನು ಹಿಂತಿರುಗಿಸಲು ಸಾಧ್ಯವಿಲ್ಲ ಎಂದು ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಸೂಕ್ತ ದಾಖಲೆ ನೀಡದಿದ್ದರೆ ಸುಮಾರು 32 ಕೋಟಿ ರು ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.
ಒಂದು ವೇಳೆ ಸೂಕ್ತ ದಾಖಲೆ ಒದಗಿಸಿದರೆ ಸರಕಿನ ಒಟ್ಟು ಮೌಲ್ಯದ ಶೇಕಡ ಒಂದು ಭಾಗ ತೆರಿಗೆ ರೂಪದಲ್ಲಿ ಹಾಕಲಾಗುತ್ತದೆ ಎಂದು ರಿಷಿಪಾಲ್ ಹೇಳಿದ್ದಾರೆ.
ಈ ಆಭರಣಗಳು ಮೊದಲಿಗೆ ತ್ರಿಚ್ಚೂರು, ಕೊಯಮತ್ತೂರು ಹಾಗೂ ಅಹಮದಾಬಾದಿಗೆ ಸಾಗಿ ನಂತರ ವಿಮಾನ ಮೂಲಕ ಲೂಧಿಯಾನ ತಲುಪಿತ್ತು.
ಪ್ರತಿಷ್ಠಿತ ಆಭರಣ ಮಳಿಗೆಗೆ ಈ ಆಭರಣಗಳು ಸೇರಿದೆ ಎನ್ನಲಾಗಿದೆ. ಈ ವಾರಾಂತ್ಯದಲ್ಲಿ ಲೂಧಿಯಾನಾದಲ್ಲಿ ಬಾಲಿವುಡ್ ನಟಿಯೊಬ್ಬರು ಹೊಸ ಆಭರಣ ಮಳಿಗೆ ಉದ್ಟಾಟನೆ ಮಾಡಬೇಕಾಗಿತ್ತು. (ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications