ಲೂಧಿಯಾನಾ ವಿಮಾನ ನಿಲ್ದಾಣದಿ 170 ಕೆಜಿ ಚಿನ್ನ ವಶ

ಖಾಸಗಿ ಕಂಪನಿಯ ಅಧಿಕಾರಿಗಳು ವಜ್ರಖಚಿತ ಆಭರಣ ಹಾಗೂ ಚಿನ್ನಾಭರಣಗಳನ್ನು ಅಕ್ರಮವಾಗಿ ಚಾರ್ಟೆಡ್ ವಿಮಾನದ ಮೂಲದ ಸಾಗಿಸುವಾಗ ರಾಜ್ಯದ ತೆರಿಗೆ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಸುಮಾರು 170 ಕೆಜಿ ತೂಗುವ ಆಭರಣಗಳ ಸಾಗಾಣಿಕೆ ಬಗ್ಗೆ ಅಗತ್ಯ ದಾಖಲೆ ಒದಗಿಸುವಂತೆ ಅಧಿಕಾರಿಗಳು ಕೇಳಿದ್ದಾರೆ. ಆದರೆ, ಖಾಸಗಿ ಸಂಸ್ಥೆ ಪ್ರತಿನಿಧಿಗಳು ಕೊಟ್ಟ ದಾಖಲೆಗಳು ಪೂರಕವಾಗಿಲ್ಲದ ಕಾರಣ, ಎಲ್ಲವನ್ನು ವಶಪಡಿಸಿಕೊಳ್ಳಬೇಕಾಯಿತು. ವಶಪಡಿಸಿಕೊಂಡ ಚಿನ್ನ, ವಜ್ರಾಭರಣಗಳನ್ನು ಸರ್ಕಾರಿ ಟ್ರೇಷರಿಯಲ್ಲಿ ದಾಖಲಿಸಲಾಗಿದೆ ಎಂದು ತೆರಿಗೆ ಇಲಾಖೆ ಆಯುಕ್ತ ರಿಷಿಪಾಲ್ ಹೇಳಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಖಾಸಗಿ ಕಂಪನಿ ಸ್ಟಾಕ್ ಕ್ಲಿಯರೆನ್ಸ್ ಗಾಗಿ ನಾವು ಈ ರೀತಿ ಭಾರಿ ಪ್ರಮಾಣದ ಚಿನ್ನಾಭರಣ ಸಾಗಿಸಬೇಕಾಯಿತು, ಲೂಧಿಯಾನಾದಲ್ಲಿ ಹೊಸ ಶೋರೂಮ್ ಆರಂಭಿಸಲಾಗುತ್ತಿದೆ ಎನ್ನಲಾಗಿದೆ.
ಆದರೆ, ಸರಿಯಾದ ದಾಖಲೆ ಪ್ರಮಾಣ ಪತ್ರ ಒದಗಿಸಿದ ಹೊರತೂ ಚಿನ್ನಾಭರಣವನ್ನು ಹಿಂತಿರುಗಿಸಲು ಸಾಧ್ಯವಿಲ್ಲ ಎಂದು ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಸೂಕ್ತ ದಾಖಲೆ ನೀಡದಿದ್ದರೆ ಸುಮಾರು 32 ಕೋಟಿ ರು ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.
ಒಂದು ವೇಳೆ ಸೂಕ್ತ ದಾಖಲೆ ಒದಗಿಸಿದರೆ ಸರಕಿನ ಒಟ್ಟು ಮೌಲ್ಯದ ಶೇಕಡ ಒಂದು ಭಾಗ ತೆರಿಗೆ ರೂಪದಲ್ಲಿ ಹಾಕಲಾಗುತ್ತದೆ ಎಂದು ರಿಷಿಪಾಲ್ ಹೇಳಿದ್ದಾರೆ.
ಈ ಆಭರಣಗಳು ಮೊದಲಿಗೆ ತ್ರಿಚ್ಚೂರು, ಕೊಯಮತ್ತೂರು ಹಾಗೂ ಅಹಮದಾಬಾದಿಗೆ ಸಾಗಿ ನಂತರ ವಿಮಾನ ಮೂಲಕ ಲೂಧಿಯಾನ ತಲುಪಿತ್ತು.
ಪ್ರತಿಷ್ಠಿತ ಆಭರಣ ಮಳಿಗೆಗೆ ಈ ಆಭರಣಗಳು ಸೇರಿದೆ ಎನ್ನಲಾಗಿದೆ. ಈ ವಾರಾಂತ್ಯದಲ್ಲಿ ಲೂಧಿಯಾನಾದಲ್ಲಿ ಬಾಲಿವುಡ್ ನಟಿಯೊಬ್ಬರು ಹೊಸ ಆಭರಣ ಮಳಿಗೆ ಉದ್ಟಾಟನೆ ಮಾಡಬೇಕಾಗಿತ್ತು. (ಪಿಟಿಐ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications