Heart Attack: ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಯುವಕ ಸಾವು: ಸಿಸಿಟಿವಿಯಲ್ಲಿ ಸೇರೆಯಾಯ್ತು ಕೊನೆ ಕ್ಷಣದ ದೃಶ್ಯಾವಳಿ
ಮಧ್ಯಪ್ರದೇಶ, ಜನವರಿ19: ಹಿಂದಿನ ಕಾಲದಲ್ಲಿ ಮಧ್ಯವಯಸ್ಕ ಅಥವಾ ವೃದ್ಧಾಪ್ಯದವರು ಹೃದಯಾಘಾತಕ್ಕೆ ತುತ್ತಾಗುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅನೇಕ ಯುವಕರು, ಮಕ್ಕಳು ಹೃದಯಾಘಾತದಿಂದ ಸಾಯುತ್ತಿದ್ದಾರೆ.
ಹೌದು,ಇಂದೋರ್ನ ಖಾಸಗಿ ಕೋಚಿಂಗ್ ಕ್ಲಾಸ್ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿರುವಾಗಲೇ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೃದಯಘಾತದಿಂದ ಪಾಠ ಕೇಳಿತ್ತಿರುವಾಗಲೇ ಕೊನೆ ಉಸಿಸೆಳೆದ ದೃಶ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್ನಲ್ಲಿ ತಯಾರಿ ನಡೆಸುತ್ತಿದ್ರು. ಮಾಧವ್ ಅವರು ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
18 y/o boy got heart attack while sitting in coaching class in Indore😢
— If (@pioneerbhatt) January 18, 2024
This is scary
pic.twitter.com/jbwLpJWBQF
ಮಾಧವ್ ಆರಂಭದಲ್ಲಿ MPPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಇತರ ಎಲ್ಲ ವಿದ್ಯಾರ್ಥಿಗಳ ನಡುವೆ ಕುಳಿತುಕೊಂಡು ಪಾಠವನ್ನ ಕೇಳುತ್ತಿದ್ದಾರೆ. ಈ ವೇಳೆ ಆಯಾಸಗೊಂಡತೆ ಕಾಣುತ್ತದೆ. ಕೆಲಹೊತ್ತಿನಲ್ಲೇ ಮೇಜಿನ ಮೇಲೆ ಬಿದ್ದರೂ ಕೂಡ ಯಾರಿಗೂ ತಿಳಿದಿಲ್ಲ. ಕೆಲ ಸೆಕೆಂಡುಗಳಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ತಿಳಿಸಿದೆ. ಮಾಧವ್ ನೆಲಕ್ಕೆ ಕುಸಿದು ಬಿದ್ದಾಗ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಸುತ್ತುವರಿದಿರುವುದು 32 ಸೆಕೆಂಡ್ ವಿಡಿಯೋದಲ್ಲಿ ಸೆರೆಯಾಗಿದೆ. ಪಾಠ ಕೇಳುತ್ತಿರುವ ಸಂದರ್ಭದಲ್ಲಿ ಯುವಕ ಸಾವನ್ನಿಪ್ಪಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications