ದೇಶದಲ್ಲಿ 56,944 ಪೊಲೀಸರಿಗೆ ವಿಐಪಿಗಳನ್ನು ಕಾಯುವುದೇ ಕೆಲಸ!
ನವದೆಹಲಿ, ಸೆಪ್ಟೆಂಬರ್ 18: ದೇಶದಲ್ಲಿ 19.26 ಲಕ್ಷ ಪೊಲೀಸರಿದ್ದಾರೆ. ಇವರಲ್ಲಿ 56,944 ಜನರಿಗೆ ವಿಐಪಿಗಳನ್ನು ಕಾಯುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ. ಆದರೆ ಸಾಮಾನ್ಯ ಜನರ ವಿಚಾರಕ್ಕೆ ಬಂದರೆ 663 ಜನರಿಗೆ ಭದ್ರತೆಗೆ ಕೇವಲ ಓರ್ವ ಪೊಲೀಸ್ ಮಾತ್ರ ಇದ್ದಾರೆ.
ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ದಾಖಲೆಗಳು ಈ ಮಾಹಿತಿಯನ್ನು ಹೊರ ಹಾಕಿವೆ.
56,944 ಪೊಲೀಸರು 20,828 ವಿಐಪಿಗಳ ಭದ್ರತೆಯ ಹೊಣೆ ಹೊತ್ತಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರ ವಿಐಪಿ ಸಂಸ್ಕೃತಿಗೆ ಕೊಕ್ ನೀಡಲು ಮುಂದಾಗಿತ್ತು. ಆದರೆ ರಾಜ್ಯಗಳು ಅವುಗಳದ್ದೇ ಆದ ನಿಯಮಗಳನ್ನು ಪಾಲನೆ ಮಾಡುತ್ತಿರುವುದರಿಂದ ದೊಡ್ಡ ಸಂಖ್ಯೆಯ ಪೊಲೀಸ್ ಅಧಿಕಾರಿಗಳು ವಿಐಪಿಗಳ ಭದ್ರತಾ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.

ಹಲವು ವಿಐಪಿಗಳು ಜೀವ ಬೆದರಿಕೆ ಎದುರಿಸುತ್ತಿರುವುದರಿಂದ ಅವರೆಲ್ಲರಿಗೂ ವಿಶೇಷ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬಿಹಾರದಲ್ಲಿ ಅತೀ ಹೆಚ್ಚಿನ ಅಂದರೆ 3,200 ವಿಐಪಿಗಳಿಗೆ ಭದ್ರತೆ ನೀಡಲಾಗಿದ್ದು, 6,248 ಪೊಲೀಸ್ ಸಿಬ್ಬಂದಿಗಳು ಭದ್ರತಾ ಕೆಲಸ ನಿರ್ವಹಿಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2,207 ವಿಐಪಿಗಳ ಭದ್ರತೆಯನ್ನು 4,233 ಪೊಲೀಸರು ನೋಡಿಕೊಳ್ಳುತ್ತಾರೆ.
ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ದಕ್ಷಿಣದ ರಾಜ್ಯಗಳೇ ಉತ್ತಮವಾಗಿದ್ದು ಮಹಾರಾಷ್ಟ್ರದಲ್ಲಿ 74 ವಿಐಪಿಗಳಿಗೆ 961 ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಕೇರಳದಲ್ಲಿ ಕೇವಲ 57 ಜನರಿಗೆ 214 ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ.
ಇನ್ನು ಲಕ್ಷದ್ವೀಪದಲ್ಲಿ ಒಬ್ಬರೇ ಒಬ್ಬರು ವಿಐಪಿಗೂ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆಗೊಳಿಸಿಲ್ಲ. ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿಯಲ್ಲಿ ಮಾತ್ರ ಅತೀ ಹೆಚ್ಚಿನ 489 ವಿಐಪಿಗಳಿಗೆ 7,420 ಪೊಲೀಸರು ಭದ್ರತೆ ನೀಡುತ್ತಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications