LPG cylinder price: ಸಿಹಿ ಸುದ್ದಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಇಳಿಕೆ
ದೆಹಲಿ ಏಪ್ರಿಲ್ 1: ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶಾದ್ಯಂತ 19ಕಿಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಕಡಿತವನ್ನು ಘೋಷಿಸಿವೆ. ಪ್ರಸ್ತುತ 19ಕಿಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 30-50ರೂ. ಇಳಿಕೆಯಾಗಿದ್ದು ಏಪ್ರಿಲ್ 1 ರಿಂದ ಅಂದರೆ ಇಂದಿನಿಂದಲೇ ಜಾರಿಗೆ ಬರಲಿವೆ.
5ಕೆಜಿ ಎಫ್ಟಿಎಲ್(ಫ್ರೀ ಎಲ್ಪಿಜಿ)ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ.

ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಂತಹ ವಿವಿಧ ಸ್ಥಳಗಳಲ್ಲಿ ಬಳಸಲಾಗುವ ವಾಣಿಜ್ಯ ಸಿಲಿಂಡರ್ನ ಬೆಲೆ ದೆಹಲಿಯಲ್ಲಿ ಇಂದಿನಿಂದ 1,764.50 ರೂ. ಇದೆ. ಮಾರ್ಚ್ 1 ಕ್ಕೆ ಇದರ ಬೆಲೆ 1,795 ರೂ. ಇತ್ತು. ಇನ್ನು ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,911 ರೂಪಾಯಿಯಿಂದ 1,879 ರೂ.ಗೆ ಕುಸಿದಿದೆ. ಚೆನ್ನೈನಲ್ಲಿ ಪ್ರಸ್ತುತ ಬೆಲೆ 1,960.50 ರಿಂದ 1930 ರೂ. ಆಗಿದೆ. ಇನ್ನೂ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ದರ ಇಳಿಕೆಯಾದ ಬಳಿಕ 1830 ರೂ. ಆಗಿದೆ. ಮುಂಬೈನಲ್ಲಿ 1,749 ರೂ.ಯಿಂದ 1,717.50 ರೂ.ಗೆ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲನೆಯ ದಿನ ಎಲ್ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಕಳೆದ ತಿಂಗಳು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿದ್ದರು. ಆದರೆ ಈ ಬಾರಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಮಾರ್ಚ್ ಮೊದಲ ದಿನ ತೈಲ ಕಂಪನಿಗಳು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದವು. ನಂತರ ಎಲ್ಪಿಜಿ ಸಿಲಿಂಡರ್ನ ಬೆಲೆ 25.50 ರೂ. ಏರಿಕೆಯಾಗಿತ್ತು. ಆದರೆ ಬೆಲೆಯಲ್ಲಿನ ಕಡಿತದಿಂದಾಗಿ ಇಂದು ಜನರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಆದರೆ 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ಮೋದಿ ಕಡಿಮೆ ಮಾಡಲು ನಿರ್ಧರಿಸಿರುವುದು ಗೊತ್ತೇ ಇದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ. ಇದು ದೇಶದ ಅರ್ಧದಷ್ಟು ಜನಸಂಖ್ಯೆಗೆ ಮೋದಿ ಸರ್ಕಾರದಿಂದ ಉಡುಗೊರೆಯಾಗಿದ್ದರೂ, ವಿರೋಧ ಪಕ್ಷಗಳು ಇದನ್ನು ಚುನಾವಣೆಗೆ ಗಿಮಿಕ್ ಎಂದಿವೆ.
-
ಬೆಂಗಳೂರು vs ದೆಹಲಿ ಮೆಟ್ರೋ: ಲಗೇಜ್ ಶುಲ್ಕದ ವ್ಯತ್ಯಾಸಗಳ ಚರ್ಚೆ, ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications