ಮಹಾರಾಷ್ಟ್ರ: ಗದ್ದಲವೆಬ್ಬಿಸಿದ 19 ವಿಪಕ್ಷ ಶಾಸಕರು ಸಸ್ಪೆಂಡ್
ಮಹಾರಾಷ್ಟ್ರದ ಬಜೆಟ್ ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ 10 ಕಾಂಗ್ರೆಸ್ ಹಾಗೂ 9 ಎನ್.ಸಿ.ಪಿ ಶಾಸಕರನ್ನು ಸ್ಪೀಕರ್ 9 ತಿಂಗಳ ಕಾಲ ಅಮಾನತು ಮಾಡಿದ್ದಾರೆ.
ಮುಂಬೈ, ಮಾರ್ಚ್ 22: ಮಹಾರಾಷ್ಟ್ರ ಬಜೆಟ್ ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ 10 ಕಾಂಗ್ರೆಸ್ ಹಾಗೂ 9 ಎನ್.ಸಿ.ಪಿ ಶಾಸಕರನ್ನು ಸ್ಪೀಕರ್ 9 ತಿಂಗಳ ಕಾಲ ಅಮಾನತು ಮಾಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಹರಿಭಾನು ಬಾಗ್ಡೆ 19 ಶಾಸಕರನ್ನು ಡಿಸೆಂಬರ್ 31ರ ವರೆಗೆ ಸಸ್ಪೆಂಡ್ ಮಾಡಿ ಆದೇಶ ನೀಡಿದ್ದಾರೆ. ಸದನಕ್ಕೆ ಅಗೌರವ ತಂದಿದ್ದಾರೆ ಎಂಬ ಕಾರಣ ನೀಡಿ ಇವರನ್ನೆಲ್ಲಾ ಸಸ್ಪೆಂಡ್ ಮಾಡಲಾಗಿದೆ.[ಮಹಾರಾಷ್ಟ್ರ: ಮುಷ್ಕರ ನಿರತ 301 ವೈದ್ಯರ ಅಮಾನತು]

ಮಾರ್ಚ್ 18ರಂದು ರಾಜ್ಯ ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿ ಬಜೆಟ್ ಮಂಡಿಸಿತ್ತು. ಈ ವೇಳೆ ರೈತರ ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿ ವಿಪಕ್ಷ ಕಾಂಗ್ರೆಸ್ ಮತ್ತು ಎನ್.ಸಿ.ಪಿಯ ನಾಯಕರು ಬಜೆಟಿನ ಪ್ರತಿಗಳನ್ನು ಸುಟ್ಟಿದ್ದರು. ಈ ಮೂಲಕ ವಿಧಾನಸಭೆಯೊಳಗೆ ಗದ್ದಲವೆಬ್ಬಿಸಿದ್ದರು.
ಬಜೆಟ್ ಕಾಪಿಗಳನ್ನು ಸುಟ್ಟು ಶಾಸಕಾಂಗದ ಸಾರ್ವಭೌಮತೆಗೆ ಧಕ್ಕೆ ತಂದಿದ್ದಾರೆ. ಸ್ಪೀಕರ್ ಆದೇಶಗಳನ್ನು ಉಲ್ಲಂಘಿಸಿ ಗದ್ದಲವೆಬ್ಬಿಸಿದ್ದಾರೆ ಎಂದು ಸ್ಪೀಕರ್ ಅಮಾನತು ಆದೇಶದ ವೇಳೆ ಹೇಳಿದ್ದಾರೆ.[44.5 ಕೋಟಿ ಅಡ್ವಾನ್ಸ್ ಟ್ಯಾಕ್ಸ್ ಕಟ್ಟಿ ಹುಬ್ಬೇರಿಸಿದ ಸಲ್ಮಾನ್ ಖಾನ್]
ಬುಧವಾರ ಮಹಾರಾಷ್ಟ್ರ ಸಂಸದೀಯ ಸಚಿವ ಗಿರೀಶ್ ಬಾಪಟ್ ಗದ್ದಲವೆಬ್ಬಿಸಿದ ಶಾಸಕರ ವಿರುದ್ಧ ನಿರ್ಣಯ ಮಂಡಿಸಿದರು. ನಿರ್ಣಯದಲ್ಲಿ 19 ಶಾಸಕರನ್ನು ಅಮಾನತು ಮಾಡುವಂತೆ ಅವರು ಕೋರಿದರು. ಇದನ್ನು ಸ್ಪೀಕರ್ ಒಪ್ಪಿಕೊಳ್ಳುವುದರೊಂದಿಗೆ 19 ಜನರನ್ನು ಸಸ್ಪೆಂಡ್ ಮಾಡಲಾಗಿದೆ.
ಅಮಾನತು ಆದೇಶ ಹೊರಬೀಳುತ್ತಿದ್ದಂತೆ ಇದನ್ನು ವಿರೋಧಿಸಿದ ಪ್ರತಿಪಕ್ಷ ಶಾಸಕರು ವಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು.
ಸ್ಪೀಕರ್ ಆದೇಶವನ್ನು ಬೆಂಬಲಿಸಿ ಹಣಕಾಸು ಸಚಿವ ಸುಧೀರ್ ಮುಂಗಂಟಿವಾರ್ ಹೇಳಿಕೆ ನೀಡಿದ್ದು, ಈ ಹಿಂದೆ ಕಾಂಗ್ರೆಸ್-ಎನ್.ಸಿ.ಪಿ ಸರಕಾರವೂ ನಮ್ಮ ವಿರುದ್ಧ ಇದೇ ರೀತಿಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications