ನವಜೋತ್ ಸಿಂಗ್ ಸಿಧುಗೆ 1 ವರ್ಷದ ಜೈಲು ಶಿಕ್ಷೆ ನೀಡಿದ ಸುಪ್ರೀಂ
ನವದೆಹಲಿ, ಮೇ 19; 1988ರ ರೋಡ್ ರೇಜ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. 32 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹೆಚ್ಚು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸಬೇಕೇ ಎಂದು ನಿರ್ಧರಿಸಲು ಸುಪ್ರೀಂ ಕೋರ್ಟ್ ಈ ವರ್ಷದ ಫೆಬ್ರವರಿಯಲ್ಲಿ ಪ್ರಕರಣವನ್ನು ಮರುಪರಿಶೀಲನೆಗೆ ತೆಗೆದುಕೊಂಡಿತ್ತು.
ಸಂತ್ರಸ್ತೆಯ ಕುಟುಂಬವು ಶಿಕ್ಷೆಯ ಹೆಚ್ಚಳಕ್ಕೆ ಕೋರಿ ಮತ್ತು ಗಂಭೀರ ಅಪರಾಧಕ್ಕೆ ಶಿಕ್ಷೆಯನ್ನು ನೀಡಲು ಕೋರಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಜೈಲು ಶಿಕ್ಷೆ ವಿಧಿಸಬಾರದು ಎಂದು ಸಿಧು ಮನವಿ ಮಾಡಿದ್ದರು. ಈ ಕುರಿತು ನವಜೋತ್ ಸಿಂಗ್ ಸಿಧು ಈ ವರ್ಷದ ಮಾರ್ಚ್ನಲ್ಲಿ ಸುಪ್ರೀಂ ಕೋರ್ಟ್ಗೆ ರೋಡ್ ರೇಜ್ ಪ್ರಕರಣದಲ್ಲಿ ತಮಗೆ ಹೆಚ್ಚಿನ ಶಿಕ್ಷೆ ನೀಡಬೇಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಗೆ "ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ" ಅಪರಾಧಕ್ಕಾಗಿ ಸಿಧುರನ್ನು ಮೇ 2018 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದ್ದರೂ, ಅದು ಅವರಿಗೆ ಜೈಲು ಶಿಕ್ಷೆಯನ್ನು ತಪ್ಪಿಸಿತ್ತು ಮತ್ತು ರೂ 1,000 ದಂಡವನ್ನು ವಿಧಿಸಿತ್ತು.

1988 ರಲ್ಲಿ ಪಟಿಯಾಲದ ಗುರ್ನಾಮ್ ಸಿಂಗ್ ಸಾವನ್ನಪ್ಪಿದ ರೋಡ್ ರೇಜ್ ಪ್ರಕರಣದಲ್ಲಿ ಸಿಧು ಆರೋಪಿಯಾಗಿದ್ದರು. ಮೇ 2018 ರಲ್ಲಿ ಕೋರ್ಟ್ 1,000 ರೂಪಾಯಿ ದಂಡ ವಿಧಿಸುವ ಮೂಲಕ ಜೈಲು ಶಿಕ್ಷೆ ನೀಡದೇ ಸಿಧುಗೆ ಅವಕಾಶ ನೀಡಿತ್ತು. ಪ್ರಕರಣವು 30 ವರ್ಷಕ್ಕಿಂತ ಹಳೆಯದಾಗಿದೆ ಮತ್ತು ಆರೋಪಿಯು ಯಾವುದೇ ಆಯುಧವನ್ನು ಬಳಸಿಲ್ಲ ಎಂದು ಗಮನಿಸಿದ ಕೋರ್ಟ್ ದೋಷಮುಕ್ತಗೊಳಿಸಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications