ಆತಂಕದಲ್ಲಿ ಸಿಧು, ಕಾಡುತ್ತಿದೆ 30 ವರ್ಷ ಹಳೆ ಕೇಸ್
ಅಮೃತ್ ಸರ್, ಏಪ್ರಿಲ್ 12: ಮಾಜಿ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಅವರನ್ನು 30 ವರ್ಷಗಳ ಹಳೆ ಪ್ರಕರಣವೊಂದು ಕಾಡುತ್ತಿದೆ. 1988ರ ರಸ್ತೆ ರಂಪಾಟ ಕೇಸಿನಲ್ಲಿ ಸಿಧು ಅವರು ನೀಡಿರುವ ಹೇಳಿಕೆ ಸುಳ್ಳು, ಅವರ ವಿರುದ್ಧ ಕ್ರಮ ಜರುಗಿಸಬಹುದು ಎಂದು ಸರ್ಕಾರಿ ವಕೀಲರು ಸುಪ್ರೀಂಕೋರ್ಟಿಗೆ ತಿಳಿಸಿದ್ದಾರೆ.
ಪಟಿಯಾಲದಲ್ಲಿ 1998ರ ಡಿಸೆಂಬರ್ 27ರಂದು ಷೇರನ್ ವಾಲ ಗೇಟ್ ಕ್ರಾಸಿಂಗ್ ಬಳಿ ಸಿಧು ಅವರ ಜಿಪ್ಸಿ ನಿಲುಗಡೆ ಮಾಡಲಾಗಿತ್ತು. ಗುರ್ ನಾಮ್ ಅವರು ಮಾರುತಿ ಕಾರಿನಲ್ಲಿ ಅದೇ ಸ್ಥಳಕ್ಕೆ ಬಂದು ಸ್ಥಳ ಕೊಡುವಂತೆ ಕೇಳಿದ್ದರು. ರಸ್ತೆ ರಂಪಾಟ ನಂತರ ನಡೆದ ಹಲ್ಲೆ, ಸಾವಿನ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಆರೋಪಿಯಾಗಿದ್ದಾರೆ. ಸಿಧು ಹಾಗೂ ಅವರ ಸ್ನೇಹಿತರೊಬ್ಬರು ಹಲ್ಲೆ ಮಾಡಿದ್ದರಿಂದ ಗುರ್ನಾಮ್ ಸಿಂಗ್(65) ಎಂಬುವರು ಮೃತಪಟ್ಟರು ಎಂಬ ಆರೋಪವಿತ್ತು.

1999ರಲ್ಲಿ ಸ್ಥಳೀಯ ನ್ಯಾಯಾಲಯ ಸಿಧು ನಿರ್ದೋಷಿಯೆಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೃತ ಗುರ್ನಾಮ್ ಸಿಂಗ್ ಕುಟುಂಬದವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಧು ವಿರುದ್ಧ ಹರ್ಯಾಣ ಹಾಗೂ ಪಂಜಾಬ್ ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.
ಸಿಧು ಅವರಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿತ್ತು.
ಸದ್ಯ ಸುಪ್ರೀಂಕೋರ್ಟ್ನಲ್ಲಿ ಈ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿದ್ದು, ಈ ವೇಳೆ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯುವಂತೆ ಸುಪ್ರೀಂಕೋರ್ಟ್ಗೆ ಪಂಜಾಬ್ ಸರ್ಕಾರ ಮನವಿ ಸಲ್ಲಿಸಿದೆ. 2007ರಲ್ಲಿ ಈ ಪ್ರಕರಣದಿಂದಾಗಿ ಸಿಧು ಅವರು ಚುನಾವಣೆ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications