ಕೊಲ್ಲಾಪುರ ಜೈಲಿನಲ್ಲಿ 1993 ಮುಂಬೈ ಬಾಂಬ್ ಸ್ಫೋಟದ ಅಪರಾಧಿ ಹತ್ಯೆ
1993 ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮುನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ಕುಮಾರ್ ಭವರ್ಲಾಲ್ ಗುಪ್ತಾ (59) ಅವರನ್ನು ಜೈಲಿನಲ್ಲಿ ಹತ್ಯೆ ಮಾಡಲಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಲಾಂಬಾದಲ್ಲಿರುವ ಕೊಲ್ಲಾಪುರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ತಂಡ ಭಾನುವಾರ ಬೆಳಿಗ್ಗೆ ಮುನ್ನಾರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ಬೆಳಗ್ಗೆ 6.30ರ ಸುಮಾರಿಗೆ ಜೈಲು ಕೈದಿಗಳ ಹಾಜರಾತಿ ದಾಖಲಿಸಿಕೊಂಡು ಕಾರಾಗೃಹದ ಸರ್ಕಲ್ ನಂಬರ್ 2ರಲ್ಲಿರುವ ನೀರಿನ ಟ್ಯಾಂಕ್ ಬಳಿಯ ಬಯಲಿಗೆ ಕರೆತಂದ ಕೆಲ ಸಮಯದ ಬಳಿಕ ಈ ಘಟನೆ ನಡೆದಿದೆ ಎಂದು ಕೊಲ್ಲಾಪುರ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ತಲೆಗೆ ಹೊಡೆದು ಹತ್ಯೆ
ಸ್ನಾನಕ್ಕೆಂದು ನೀರಿನ ಟ್ಯಾಂಕ್ ಬಳಿ ಹೋಗಿದ್ದ ಸಂದರ್ಭದಲ್ಲಿ ಮುನ್ನಾ ಮತ್ತು ಐವರು ಅಪರಾಧಿಗಳ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಜಗಳದ ವೇಳೆ ಆರೋಪಿಗಳು ಮುನ್ನಾ ಅವರ ತಲೆಗೆ ಮ್ಯಾನ್ಹೋಲ್ ಮುಚ್ಚಳದಿಂದ ಹೊಡೆದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕೊಲೆ ಮಾಡಿದವರನ್ನು ಪ್ರತೀಕ್ ಅಲಿಯಾಸ್ ಪಿಲ್ಯ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ಋತುರಾಜ್ ವಿನಾಯಕ್ ಇನಾಮದಾರ್ ಮತ್ತು ಸೌರಭ್ ವಿಕಾಸ್ ಎಂದು ಗುರುತಿಸಲಾಗಿದೆ.
ಕೊಲ್ಲಾಪುರ ಪೊಲೀಸರು ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 12, 1993 ರಂದು ಮುಂಬೈನಲ್ಲಿ ನಡೆದ ಒಂದೇ ದಿನದ ಸರಣಿ ಬಾಂಬ್ ಸ್ಫೋಟದಲ್ಲಿ 257 ಜನ ಸಾವನ್ನಪ್ಪಿದ್ದರೆ ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications