ಮುಂಬೈ ಸ್ಫೋಟ: ಅಪರಾಧಿಗಳಿಗೆ ಗುರುತರ ಶಿಕ್ಷೆಗೆ ಆಗ್ರಹ
ಮುಂಬೈ, ಜೂನ್ 22: 1993ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಅಪರಾಧಿ ಭೂಗತ ಪಾತಕಿ ಅಬು ಸಲೇಂ ಹಾಗೂ ಇತರ 6 ಮಂದಿ ಭವಿಷ್ಯ ಜೂನ್ 26ರಂದು ನಿರ್ಧಾರವಾಗಲಿದೆ. ಮುಂಬೈನ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಬೇಕಿದೆ. ಈ ನಡುವೆ ಎಲ್ಲಾ ಅಪರಾಧಿಗಳಿಗೆ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಲಾಗಿದೆ.
ಅಬು ಸಲೇಂ ಜತೆಗೆ ರಿಯಾಜ್ ಸಿದ್ದಿಕಿ , ಕರೀಂ ಉಲ್ಲಾ ಖಾನ್, ಫೆರೋಜ್ ಅಬ್ದುಲ್ ರಸೀದ್, ತಾಹಿರ್ ಮರ್ಚೆಂಟ್ ಮತ್ತು ಮುಸ್ತಫ ಜೋಸಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.

ನಾಗ್ಪುರ್ ಸೆಂಟ್ರಲ್ ಜೈಲಿನಲ್ಲಿ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮೊದಲ ಅಪರಾಧಿಯಾಗಿ ನೇಣಿಗೇರಿದ ಯಾಕೂಬ್ ಮೆಮನ್ ಕೂಡಾ ಅಪರಾಧಿಯಾಗಿದ್ದರು. ಭಾರತದಿಂದ ತಲೆಮರೆಸಿಕೊಂಡು ಪೋರ್ಚ್ಗಲ್ನಲ್ಲಿದ್ದ ಅಬುಸಲೇಂನನ್ನು 2012ರಲ್ಲಿ ಭಾರತಕ್ಕೆ ಕರೆ ತರಲಾಗಿತ್ತು
1993ರ ಮಾರ್ಚ್ 12ರಂದು ಮುಂಬೈನ ವಿವಿಧೆಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿ, 273ಮಂದಿ ಸಾವನ್ನಪ್ಪಿ, 713 ಜನರು ಗಾಯಗೊಂಡಿದ್ದರು.
ಸುಮಾರು 3000 ಕೆಜಿ ಆರ್ ಡಿ ಎಕ್ಸ್ ಪೂರೈಕೆ ಮಾಡಿದ ಆರೋಪ ಅಬು ಸಲೇಂ ಮೇಲಿದೆ. ದಾವೂದ್ ಇಬ್ರಾಹಿಂ, ಟೈಗರ್ ಮೆಮೊನ್ ಹಾಗೂ ಅಯೂಬ್ ಮೆಮೊನ್ ಇಡೀ ಸ್ಫೋಟದ ರುವಾರಿಗಳು ಹಾಗೂ ಪ್ರಮುಖ ಅಪರಾಧಿಗಳಾಗಿದ್ದಾರೆ.
12 ಜನರಿಗೆ ಮರಣದಂಡನೆ ಹಾಗೂ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ಟಾಡಾ ಕೋರ್ಟ್ ಪ್ರಕಟಿಸಿತ್ತು.
ಅಪರಾಧಿಗಳ ಪೈಕಿ ಮರಣದಂಡನೆ ಶಿಕ್ಷೆ ಪಡೆದಿದ್ದ ಮಹಮ್ಮದ್ ಇಕ್ಬಾಲ್ ಹಾಗೂ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕಸ್ಟಮ್ ಅಧಿಕಾರಿಯಾಗಿದ್ದ ಎಸ್ ಎನ್ ಥಾಪಾ ಅವರು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಮೃತಪಟ್ಟಿದ್ದಾರೆ.
ಜೀವಾವಧಿ ಶಿಕ್ಷೆ ಪಡೆದ 20 ಜನರಲ್ಲಿ ಒಬ್ಬ ಮೃತಪಟ್ಟಿದ್ದರೆ ಇಬ್ಬರಿಗೆ ಜಾಮೀನು ಮಂಜೂರಾಗಿದೆ. ಈಗ 17 ಜನ ಜೀವಾವಧಿ ಶಿಕ್ಷೆ ಹಾಗೂ 11 ಜನ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications