ತಿರುಪತಿಯ ಪಟಾಕಿ ಗೋದಾಮಿಗೆ ಬೆಂಕಿ, ಇಬ್ಬರು ಬಲಿ

ತಿರುಪತಿ, ಜುಲೈ 31: ತಿರುಪತಿಯಲ್ಲಿ ಸೋಮವಾರ ಬೆಳಗ್ಗೆ ನಡೆದ ಬೆಂಕಿ ಅಪಘಾತಕ್ಕೆ ಬಾಲಕರಿಬ್ಬರು ಬಲಿಯಾಗಿದ್ದಾರೆ. ತಿರುಪತಿಯ ರೇಣುಗುಂಟ ರಸ್ತೆಯಲ್ಲಿರುವ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಈ ದುರಂತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಓರ್ವ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

2 boys killed in cracker godown fire mishap in Tirupati


ಗೋದಾಮಿನಲ್ಲಿ ಸುಟ್ಟು ಕರಕಲಾದ 10 ಹಾಗೂ 14 ವರ್ಷ ವಯಸ್ಸಿನ ಬಾಲಕರ ಶವವನ್ನು ಹೊರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮಿತ್ರ ಗಾಂಧೀಪುರಮ್ ಪ್ರದೇಶದಲ್ಲಿರುವ ಈ ಗೋದಾಮಿಗೆ ತಗುಲಿದ್ದ ಬೆಂಕಿಯನ್ನು ನಂದಿಸಲಾಗಿದೆ.

ಬೆಂಕಿ ತಗುಲಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಗೋದಾಮಿನ ಮಾಲೀಕ ಬಾಬು ಅಲಿಯಾಸ್ ಖಳನಾಯಕ್ ತಲೆಮರೆಸಿಕೊಂಡಿದ್ದಾನೆ. ಮೃತ ಇಬ್ಬರು ಬಾಲಕರು ಹಾಗೂ ಗಾಯಗೊಂಡಿರುವ ಮಹಿಳೆ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+