ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ, ಮೂವರು ಬಲಿ
ಚಿತ್ರಕೂಟ (ಉತ್ತರ ಪ್ರದೇಶ), ನವೆಂಬರ್, 24: ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಪಾಟ್ನಾ- ಗೋವಾ ಮಾರ್ಗದಲ್ಲಿ ವಾಸ್ಕೋಡಿಗಾಮ ಪಾಟ್ನಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದೆ.
2 dead and 8 injured in Vasco De Gama Patna express train accident near UP’s Banda pic.twitter.com/czKOweWz8e
— ANI (@ANI) November 24, 2017
ಉತ್ತರ ಪ್ರದೇಶದ ಬಂಡ ಜಿಲ್ಲೆಯ ಚಿತ್ರಕೂಟದ ಬಳಿ ವಾಸ್ಕೋಡಿಗಾಮ ಪಾಟ್ನಾ ಎಕ್ಸ್ ಪ್ರೆಸ್ ರೈಲು ಇಂದು (ಶುಕ್ರವಾರ) ಬೆಳಗ್ಗೆ ಹಳಿ ತಪ್ಪಿದೆ. ಸಧ್ಯದ ಮಾಹಿತಿ ಪ್ರಕಾರ ಈ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, 9 ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಪಾಟ್ನಾ -ಗೋವಾ ಮಾರ್ಗದಲ್ಲಿ ಸಂಚರಿಸುವ ವಾಸ್ಕೋಡಗಾಮ ಎಕ್ಸ್ ಪ್ರೆಸ್ ಬಂಡ ಜಿಲ್ಲೆಯ ಚಿತ್ರಕೂಟದ ಬಳಿ ಸಂಚರಿಸುವಾಗ ಹಳಿತಪ್ಪಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳನ್ನು ಬದಲಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ರೈಲು ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್ ಮಾಹಿತಿ ಪಡೆದಿದ್ದಾರೆ.
ಪರಿಹಾರ ಘೋಷಣೆ: ವಾಸ್ಕೋಡಿಗಾಮ ರೈಲು ದುರಂತದಲ್ಲಿ ಸಾವನ್ನಪ್ಪಿದ ಮೂವರು ಕುಟುಂಬಗಳಿಗೆ ತಲಾ 5 ಲಕ್ಷ ರು., ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 50 ಸಾವಿರು ರು. ಪರಿಹಾರ ನೀಡುವುದಾಗಿ ಪಿಯುಶ್ ಗೋಯಲ್ ಪೋಷಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications