ಮಹಾರಾಷ್ಟ್ರ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು
ಪುಣೆ, ಮಾರ್ಚ್ 14: ಮಹಾರಾಷ್ಟ್ರದ ಪುಣೆಯಲ್ಲಿ ಇಂದು(ಮಾ.14) ಬೆಳಗ್ಗಿನ ಜಾವ ಕಾರ್ಖಾನೆಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಇಬ್ಬರು ಮೃತರಾಗಿದ್ದಾರೆ.
ಪುಣೆಯ ಶಿವಾಜೀನಗರದಲ್ಲಿನ ಕಾರ್ಖಾನೆಯೊಂದರಲ್ಲಿ ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಕಾರ್ಖಾನೆಯಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಪ್ರಾಣಕಳೆದುಕೊಂಡಿದ್ದಾರೆ.
ಕಾರ್ಖಾನೆಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದೇಕೆ ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮಾ.9 ರಂದಷ್ಟೇ ಇಲ್ಲಿನ ಪಲ್ಘರ್ ಜಿಲ್ಲೆಯ ತಾರಾಪುರ ಎಂಬಲ್ಲಿಯೂ ಕಾರ್ಖಾನೆಗೆ ಬೆಂಕಿ ತಗುಲಿ ಮೂವರು ಮೃತರಾಗಿದ್ದರು.












Click it and Unblock the Notifications